ಕೌಟುಂಬಿಕ ಕಲಹ ಹಿನ್ನಲೆ ಕುಡುಗೋಲಿನಿಂದ ಹಲ್ಲೆ : ಓರ್ವನಿಗೆ ಗಾಯ
Team Udayavani, Jun 24, 2022, 6:05 PM IST
ಕುಣಿಗಲ್: ಕೌಟುಂಬಿಕ ವಿಚಾರವಾಗಿ ಇಬ್ಬರು ವ್ಯಕ್ತಿಗಳ ನಡುವೆ ಜಗಳವಾಗಿ ಕುಡುಗೋಲಿನಿಂದ ಹೊಡೆದಾಡಿದ್ದು, ಓರ್ವ ಗಾಯಗೊಂಡಿರುವ ಘಟನೆ ತಾಲೂಕಿನ ಎಡಿಯೂರು ಹೋಬಳಿ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ನಾಗೇಗೌಡನಪಾಳ್ಯ ಗ್ರಾಮದ ನಿವಾಸಿ ಲೋಕೇಶ್ ಗಾಯಗೊಂಡ ವ್ಯಕ್ತಿ.
ಘಟನೆ ವಿವರ: ಲೋಕೇಶ್ ಹಾಗೂ ಉಮೇಶ್ ಇಬ್ಬರು ಸಂಬಂಧಿಕರಾಗಿದ್ದು, 2021 ರಲ್ಲಿ ಉಮೇಶ್ ಅವರ ದೊಡ್ಡಪ್ಪನ ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮೇಶ್ ಅವರ ಅಣ್ಣ ಜೈಲಿಗೆ ಹೋಗಿದ್ದರು ಎನ್ನಲಾಗಿದ್ದು, ಈ ವಿಚಾರವಾಗಿ ಶುಕ್ರವಾರ ಗ್ರಾಮದಲ್ಲಿ ಲೋಕೇಶ್ ಹಾಗೂ ಉಮೇಶ್ ನಡುವೆ ಮಾತಿನ ಚಕಾಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕುಡುಗೋಲಿನಿಂದ ಹೊಡೆದುಕೊಂಡಿದ್ದಾರೆ.
ಇದನ್ನೂ ಓದಿ: ಉದ್ಧವ್ ಠಾಕ್ರೆಯೂ ಅಸ್ಸಾಂ ಪ್ರವಾಸಕ್ಕೆ ಬರಲಿ : ಸಿಎಂ ಶರ್ಮಾ ಲೇವಡಿ
ಘಟನೆಯಲ್ಲಿ ಲೋಕೇಶ್ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದ್ಯೋಯಲಾಗಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ