ಸಿಗದ ಹತ್ತಿ ಬೀಜ: ತಪ್ಪದ ರೈತರ ಪರದಾಟ


Team Udayavani, Jun 25, 2022, 12:16 PM IST

7seeds

ಜೇವರ್ಗಿ: ಅತಿವೃಷ್ಟಿ, ಅನಾವೃಷ್ಟಿಯಿಂದ ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ತಾಲೂಕಿನ ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬಿತ್ತಲು ಹತ್ತಿ ಬೀಜ ದೊರಕದೇ ಪರದಾಡುವಂತೆ ಆಗಿದೆ.

ಕಳೆದ ಒಂದು ವಾರದಿಂದ ಜೇವರ್ಗಿ, ಯಡ್ರಾಮಿ ತಾಲೂಕಿನಾದ್ಯಂತ ರೈತರು, ಮಹಿಳೆಯರು ಹತ್ತಿ ಬೀಜಕ್ಕಾಗಿ ಸಾಕಷ್ಟು ಅಲೆದಾಡುತ್ತಿದ್ದರೂ ಬೀಜ ದೊರೆಯದೇ ಹತಾಶರಾಗಿದ್ದಾರೆ. ತಾಲೂಕಿನಲ್ಲಿ ಕೆಲವು ಕಡೆ ಉತ್ತಮ ಮಳೆ ಆಗಿದ್ದು, ಕೆಲವೆಡೆ ಪಂಪ್‌ಸೆಟ್‌ಗಳನ್ನು ಅವಲಂಬಿಸಿ ಕೃಷಿ ಚಟುವಟಿಕೆ ಮಾಡಲಾಗುತ್ತಿದೆ. ಕಳೆದ ವರ್ಷ ಹತ್ತಿಗೆ ಸಿಕ್ಕ ಉತ್ತಮ ಬೆಲೆ ರೈತರಲ್ಲಿ ಒಂದಿಷ್ಟು ಆಶಾಭಾವನೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ರೈತರು ಹತ್ತಿ ಬಿತ್ತನೆಗೆ ಮುಂದಾಗಿದ್ದಾರೆ. ಪಟ್ಟಣದ ಕೆಲವು ಅಗ್ರೋ ಕೇಂದ್ರಗಳಲ್ಲಿ ಹತ್ತಿ ಬೀಜ ಇದ್ದರೂ ಕಾಳಸಂತೆಯಲ್ಲಿ ಬೇಕಾಬಿಟ್ಟಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

ಹತ್ತಿ ದರ ಏರಿಕೆಯಾಗಿರುವುದರಿಂದ ರೈತರು ಹತ್ತಿ ಬೆಳೆಯಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ವ್ಯಾಪಾರಿಗಳು ರೈತರಿಗೆ ದಾಸ್ತಾನು ತೋರಿಸದೇ ಕಾಳ ಸಂತೆಯಲ್ಲಿ ಮನಸ್ಸಿಗೆ ಬಂದ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ.

ಹೀಗಾಗಿ ಅಗ್ರೋ ಕೇಂದ್ರಗಳಿಗೆ ರೈತರು ಅಲೆದಾಡಿದರೂ ಬೀಜ ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಮೂರು ಪಟ್ಟು ಹೆಚ್ಚಿನ ದರಕ್ಕೆ ಸಿಗುತ್ತಿದೆ. ಕೆಲವು ವ್ಯಾಪಾರಿಗಳು ತರಿಸಿದ ಬೀಜಗಳನ್ನು ಆಗ್ರೋ ಕೇಂದ್ರಗಳಲ್ಲಿ ಇಡದೇ ತಮ್ಮ ಗೋದಾಮುಗಳಲ್ಲಿ ಸಂಗ್ರಹಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಪ್ರಸಕ್ತ ವರ್ಷ ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ 1,22,311 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ತೊಗರಿ 66,050 ಹೆಕ್ಟೇರ್‌ ಮತ್ತು ಹತ್ತಿ 47,725 ಹೆಕ್ಟೇರ್‌ ಪ್ರದೇಶಲ್ಲಿ ಬಿತ್ತನೆ ಮಾಡಲಾಗುತ್ತಿದೆ.

ನಿಗದಿತ ಮಾರುಕಟ್ಟೆ ಬೆಲೆಗೆ ಬೀಜ, ರಸಗೊಬ್ಬರ ಮಾರಾಟ ಮಾಡುವಂತೆ ಕೃಷಿ ಇಲಾಖೆ ಅಧಿಕಾರಿಗಳು ಅಗ್ರೋ ಮಾಲೀಕರಿಗೆ ಆದೇಶ ನೀಡಿದರೂ, ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಹತ್ತಿ ಬೀಜ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ತಾಲೂಕಿನಲ್ಲಿ ರೈತರು ಮುಂಗಾರು ಬಿತ್ತನೆಗೆ ತಯಾರಿ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ನೋಡಿಕೊಳ್ಳಬೇಕು. ಕೆಲವು ಕಡೆ ನಕಲಿ ಹತ್ತಿ ಬೀಜ ಮಾರಾಟ ಮಾಡಲಾಗುತ್ತಿದೆ. ಅಂತವರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಿ ಅವರ ಪರವಾನಗಿ ರದ್ದು ಮಾಡಬೇಕು. -ಶಿವಲಿಂಗ ಹಳ್ಳಿ ಸೊನ್ನ, ಕರವೇ ಹೋರಾಟಗಾರ

ಪಟ್ಟಣದಲ್ಲಿರುವ ಅಗ್ರೋ ಕೇಂದ್ರಗಳಿಗೆ ಪ್ರತಿನಿತ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದ್ದು, ಈಗಾಗಲೇ ಅಗ್ರೋ ಕೇಂದ್ರಗಳಲ್ಲಿರುವ ಹತ್ತಿ ಬೀಜವನ್ನು ರೈತರು ಖರೀದಿ ಮಾಡುತ್ತಿಲ್ಲ. ರೈತರು ಕೇಳುತ್ತಿರುವ ಕೆಲ ಕಂಪನಿಯ ಹತ್ತಿ ಬೀಜ ಲಭ್ಯವಿಲ್ಲದ ಕಾರಣ ಗೊಂದಲ ಉಂಟಾಗಿದೆ. ನಕಲಿ ಬೀಜ ಮಾರಾಟ ತಡೆಗೆ ತಂಡ ರಚಿಸಿ ಪರಿಶೀಲನೆ ನಡೆಸಲಾಗುತ್ತಿದೆ. -ಶಿವಲಿಂಗಪ್ಪ ಅವಂಟಿ, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ

-ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-wqew-ewqe

Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್‌!: 7 ಮಂದಿ ಸೆರೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಕ್ರಿಕೆಟಿಗರಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.