11 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ದಿ
Team Udayavani, Jun 25, 2022, 12:42 PM IST
ಚಿಂಚೋಳಿ: ತಾಲೂಕಿನಲ್ಲಿ ಹದಗೆಟ್ಟಿ ರುವ ರಸ್ತೆಗಳ ಡಾಂಬರೀ ಕರಣ ಮತ್ತು ಕೆಟ್ಟು ಹೋಗಿರುವ ಸೇತುವೆ ನಿರ್ಮಾಣ ಅಭಿವೃದ್ಧಿ ಕಾಮಗಾರಿಗಳು ಭರದಿಂದ ನಡೆಯತ್ತಿವೆ.
ತಾಲೂಕಿನ ನರನಾಳ, ಚಿಮ್ಮನ ಚೋಡ, ಸಲಗರ ಬಸಂತಪುರ, ಚೌಕಿತಾಂಡಾದ ಹತ್ತಿರ ರಸ್ತೆಗಳು ತುಂಬಾ ಹದಗೆಟ್ಟಿದ್ದರಿಂದ ಶಾಸಕ ಡಾ|ಅವಿನಾಶ ಜಾಧವ ಮುತುವರ್ಜಿ ವಹಿಸಿ ರಸ್ತೆ ಡಾಂಬರೀಕರಣ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಕೆಕೆಆರ್ಡಿಬಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ 11ಕೋಟಿ ರೂ. ಅನುದಾನ ಮಂಜೂರಿಗೊಳಿಸಿದ್ದಾರೆ.
ಹೀಗಾಗಿ ರಸ್ತೆ ಅಭಿವೃದ್ಧಿ ಕೆಲಸಗಳು ಭರದಿಂದ ನಡೆಯುತ್ತಿವೆ. ಚಿಮ್ಮನಚೋಡ ಹತ್ತಿರ ರಸ್ತೆ ಅಭಿವೃದ್ಧಿಗೆ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ 2.9 ಕಿಮೀ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ 5ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಹೊಸ ರಸ್ತೆ ಡಾಂಬರೀಕರಣ ಕಾಮಗಾರಿ 2.2ಕಿಮೀ ಪೂರ್ಣ ಗೊಂಡಿದೆ. ಚಿಮ್ಮನಚೋಡ ಗ್ರಾಮದ ಹತ್ತಿರ ಸೇತುವೆ ನಿರ್ಮಾಣ ಮತ್ತು 2.50ಕಿಮೀ ರಸ್ತೆ ಡಾಂಬರೀಕರಣ ನಡೆಯುತ್ತಿದೆ. ಹೊಸ ರಸ್ತೆ ನಿರ್ಮಿ ಸಲು ಕೆಕೆಆರ್ಡಿಬಿ ಯೋಜನೆ ಅಡಿಯಲ್ಲಿ 5ಕೋಟಿ ರೂ. ಅನುದಾನ ಮಂಜೂರಿಗೊಳಿಸಲಾಗಿದೆ.
ನರನಾಳ ಗ್ರಾಮದ ಹತ್ತಿರ 1.3ಕಿಮೀ ರಸ್ತೆ ಡಾಂಬರೀಕರಣಕ್ಕೆ ಒಂದು ಕೋಟಿ ರೂ. ಮಂಜೂರಿಯಾಗಿದ್ದು, ಒಟ್ಟು 7ಕಿಮೀ ರಸ್ತೆ ಡಾಂಬರೀಕರಣ ಮತ್ತು ಸೇತುವೆ, ಸಿಮೆಂಟ್ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಚಿಂಚೋಳಿ ತಾಲೂಕಿನಲ್ಲಿ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿಗಳು, ನೂತನ ಸೇತುವೆ ನಿರ್ಮಾಣ, ಸಿಮೆಂಟ್ ರಸ್ತೆ ಕಾಮಗಾರಿಗೆ ಶಾಸಕ ಡಾ| ಅವಿನಾಶ ಜಾಧವ ಕೆಕೆಆರ್ಡಿಬಿಯಿಂದ ಅನುದಾನ ಮಂಜೂರಿ ಮಾಡಿಸಿದ್ದರಿಂದ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ನಡೆಯುತ್ತಿವೆ. ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳುವ ಹಂತಕ್ಕೆ ತಲುಪಿದ್ದು, ಜುಲೈ ಅಂತ್ಯದವರೆಗೆ ಪೂರ್ಣಗೊಳಿಸಲಾಗುವುದು. -ಆನಂದ ಕಟ್ಟಿ, ಎಇಇ, ಲೋಕೋಪಯೋಗಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ