ಗಾರ್ಬೇಜ್‌ ಸಿಟಿಯಾಗುತ್ತಿದೆ ರಾಮನಗರ: ನಗರದ ಪ್ರಮುಖ ರಸ್ತೆಗಳಲ್ಲೇ ರಾಶಿ ರಾಶಿ ಕಸ


Team Udayavani, Jun 25, 2022, 2:53 PM IST

ಗಾರ್ಬೇಜ್‌ ಸಿಟಿಯಾಗುತ್ತಿದೆ ರಾಮನಗರ: ನಗರದ ಪ್ರಮುಖ ರಸ್ತೆಗಳಲ್ಲೇ ರಾಶಿ ರಾಶಿ ಕಸ

ರಾಮನಗರ: ರೇಷ್ಮೆ ನಗರಿ, ಸಪ್ತಗಿರಿಗಳ ನಾಡು ರಾಮನಗರ ಇದೀಗ ಗಾಬೇìಜ್‌ ಸಿಟಿ ಎಂಬ ಕುಖ್ಯಾತಿಗೆ ಭಾಜನವಾಗುತ್ತಿದೆ. ಹೌದು ನಗರದ ಯಾವುದೇ ಮುಖ್ಯ ರಸ್ತೆ , ಅಡ್ಡರಸ್ತೆ ಇರಲಿ ಕಸದ ರಾಶಿ ಮಾಮೂಲಾಗಿಬಿಟ್ಟಿದೆ.

“ಸ್ವಚ್ಛಭಾರತ ಅಭಿಯಾನ’, “ಕ್ಲೀನ್‌ ಸಿಟಿ’ ಅಭಿಯಾನ ಸೇರಿದಂತೆ ಹಲವು ಯೋಜನೆಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿದ್ದರು ನಗರ ಪ್ರದೇಶ ಮಾತ್ರ ಕಸಮುಕ್ತವಾಗದೆ ಇರೋದು ವಿಪರ್ಯಾಸವೇ ಸರಿ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ರಾಮನಗರ ಪಾಧಿಕಾರದ ಕಚೇರಿ ಹಾಗೂ ಪ್ರತಿಷ್ಟಿತ ವಿದ್ಯಾಸಂಸ್ಥೆಯಾದ ವಿದ್ಯಾಪೀಠ ಶಾಲೆಯ ಮುಂಭಾಗದ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದೆ. ಅಷ್ಟೇ ಏಕೆ ಡಾ. ಬಿ.ಆರ್‌.ಅಂಬೇಡ್ಕರ್‌ ಭವನದ ಎದುರು ರಾಶಿ ಕಸ ಹಾಕಿದ್ದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವ ಆರೋಪ ಸ್ಥಳೀಯರದ್ದು.

ನಗರಸಭೆಯ ಅಧಿಕಾರಿಗಳು ಮೊಂಡುಚರ್ಮದವರಾಗಿದ್ದು ಎಷ್ಟು ಭಾರೀ ಮನವಿ ಮಾಡಿದರೂ ಕಸದ ಸಮಸ್ಯೆ ನಿವಾರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಾರೆ. ಕಸದ ರಾಶಿಗೇನು ಕೊರತೆಯಿಲ್ಲ: ಇನ್ನು ನಗರದ ಎಂಜಿ ರಸ್ತೆ ಹಳೆ ಬಸ್‌ನಿಲ್ದಾಣ, ಕೆಂಪೇಗೌಡ ಸರ್ಕಲ್‌ ಹಾಗೂ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಮುಂಭಾಗದಲ್ಲಿ ಕಸದ ರಾಶಿಗೇನು ಕೊರತೆಯಿಲ್ಲ, ನಗರದ ವಾಣಿಜ್ಯ ಪ್ರದೇಶದಲ್ಲಿಯೇ ಕಸದ ರಾಶಿ ಬೀಳುತ್ತಿದ್ದು ಕಸ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ನಗರಸಭೆ ಅಧಿಕಾರಿಗಳು ತಮಗೂ ಇದಕ್ಕೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ.

ಜೊತೆಗೆ ಕಸ ಎತ್ತುವವರ ಬಳಿ ರಾಮನಗರ ಪ್ರಾಧಿಕಾರದ ಮುಂಭಾಗ ಚಿಲ್ಲರೆ ಅಂಗಡಿ ವ್ಯಾಪಾರಿ ವಿಕಾಸ್‌ ಎಂಬುವವರು ಪೂರ್ಣ ಕಸ ತೆಗೆಯುವಂತೆ ಹೇಳಿದ್ದಾರೆ ಅದಕ್ಕೆ ಸೊಪ್ಪುಹಾಕದೆ ತಮ್ಮ ಇಚ್ಚೆಯಂತೆ ಕಸ ಎತ್ತುತ್ತಾರೆ ಎನ್ನುವ ಆರೋಪ ಸಾರ್ವ ಜನಿಕರದ್ದು. ರಸ್ತೆ ಬದಿ ಕಸ ಸುರಿದರೆ ಕಠಿಣ ಕ್ರಮ: ಕಸ ತೆರವು ಮಾಡಿಸುವುದು ನಗರಸಭೆ ಅಧಿಕಾರಿಗಳ ಕರ್ತವ್ಯ ಅನ್ನೋದರ ಜೊತೆ ಜೊತೆಗೆ ಸಾರ್ವಜನಿಕರ ಜವಾಬ್ದಾರಿ ಕೂಡ ಹೆಚ್ಚಾಗಿರುತ್ತದೆ. ಪ್ರತಿ ಮನೆಮನೆಗೂ ವಾಹನಗಳು ಆಟೋಗಳನ್ನು ಕಳಿಸುವ ಮೂಲಕ ಕಸ ಎತ್ತುವ ಕಾರ್ಯ ಮಾಡುತ್ತಿದ್ದೇವೆ ಆದರೆ ಕಸ ಸಂಗ್ರಹಣೆ ವಾಹನಗಳಿಗೆ ಕಸ ಹಾಕುವಲ್ಲಿ ವಾಣಿಜ್ಯ ಪ್ರದೇಶಗಳಲ್ಲಿ ಮುಂದಾಗುವುದಿಲ್ಲ.

ಎಲ್ಲರೂ ಅಂಗಡಿ ಬಾಗಿಲು ತೆಗೆಯುವುದು 9 ಗಂಟೆಯ ಮೇಲಾಗುತ್ತದೆ ಅಷ್ಟರಲ್ಲಿ ನಮ್ಮ ಕಾರ್ಮಿಕರು ಕಸ ತೆಗೆದುಕೊಂಡು ಬಂದಿರುತ್ತಾರೆ. ನಂತರ ಅಂಗಡಿಯವರು ಕಸ ಸುರಿಯುವುದು ಮಾಮೂಲಾಗಿದೆ ಎನ್ನುವ ನಗರಸಭೆಯ ಆರೋಗ್ಯ ಶಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸುಬ್ರಮಣ್ಯ, ಮುಂದಿನ ದಿನಗಳಲ್ಲಿ ಬೀದಿಯಲ್ಲಿ ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಾರೆ.

ಗಾರ್ಬೇಜ್‌ ಸಿಟಿಯಾಗುವುದನ್ನ ತಪ್ಪಿಸಬೇಕಿದೆ: ನಗರದ ಪ್ರಮುಖ ಬೀದಿಗಳಲ್ಲಿಯೇ ಹೀಗಾದರೆ ಇನ್ನೂ ಗಲ್ಲಿ ಪ್ರದೇಶದ ಪಾಡು ಹೇಳತೀರದಾಗಿದೆ, ಈಗ ಮಳೆ ಸುರಿಯುತ್ತಿದ್ದು ಕಸದ ರಾಶಿ ಗಬ್ಬೆದ್ದು ನಾರುತ್ತದೆ ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ಸಾರ್ವಜನಿಕರದ್ದು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಕಸ ಸಂಗ್ರಹಣೆಯ ಜವಾಬ್ದಾರಿ ನಿಭಾಯಿಸಿ ಗಾರ್ಬೇಜ್‌ ಸಿಟಿಯಾಗುವುದನ್ನ ತಪ್ಪಿಸಬೇಕಿದೆ ಎನ್ನುವುದು ಸ್ಥಳೀಯರ ಒತ್ತಾಯ.

ನಗರದೆಲ್ಲೆಡೆ ಕಸದ ರಾಶಿ ಇದ್ದ ಹಾಗೇ ಇರುತ್ತೆ ಇದರಿಂದ ರೋಗರುಜಿನ ಗಳು ಹರಡುವ ಸಾಧ್ಯತೆಯಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಕ್ರಮಜರುಗಿಸಿ ಕಸವನ್ನು ಬೀದಿಯಲ್ಲಿ ಹಾಕುವವರನ್ನು ಗುರುತಿಸಿ ದಂಡ ವಿಧಿಸಲಿ. – ರಾಜಣ್ಣ, ನಗರದ ವಾಸಿ

ನಗರಸಭೆಯಿಂದ ಪ್ರತಿ ವಾರ್ಡ್‌ಗಳ ಮನೆ ಮನೆ ಬಳಿಗೆ ವಾಹನಗಳನ್ನು ಕಳುಹಿಸಿ ಕಸ ಸಂಗ್ರಹಿಸಲಾಗುತ್ತಿದೆ. ಆದರೆ ಕೆಲವು ಅಂಗಡಿಯವರು ನಗರದ ಪ್ರಮುಖ ಬೀದಿಗಳಲ್ಲಿ ತಡವಾಗಿ ಬಂದು ಕಸ ಸುರಿಯುತ್ತಿದ್ದಾರೆ. ಈ ಬಗ್ಗೆ ಗಮನಕ್ಕೆ ಬಂದಿದೆ ನಾವು ಅವರನ್ನು ಗುರ್ತಿಸಲು ಹೋಗಿದ್ದಾಗ ಅವರ ಬಗ್ಗೆ ಮಾಹಿತಿ ನೀಡುವವರಿಲ್ಲ ಆದ್ದರಿಂದ ನಾವೇ ಅವ ರನ್ನು ಕಂಡುಹಿಡಿದು ಮುಂದಿನ ದಿನಗಳಲ್ಲಿ ದಂಡವಿಧಿಸುವ ಮೂಲಕ ಸ್ವತ್ಛತೆ ಕಾಪಾಡು ವತ್ತ ಗಮನಹರಿಸುತ್ತೇವೆ. – ಸುಭ್ರಮಣ್ಯ, ಎಇಇ, ಆರೋಗ್ಯ ಶಾಖೆ, ನಗರಸಭೆ  

 

-ಎಂ.ಎಚ್‌. ಪ್ರಕಾಶ್‌ ರಾಮನಗರ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.