ತೆಂಗಿನಕೆರೆ ಹತ್ತಿರ ಬೀಡು ಬಿಟ್ಟ ಕಾಡಾನೆ: ಗ್ರಾಮಸ್ಥರಲ್ಲಿ ಆತಂಕ


Team Udayavani, Jun 25, 2022, 3:03 PM IST

ತೆಂಗಿನಕೆರೆ ಹತ್ತಿರ ಬೀಡು ಬಿಟ್ಟ ಕಾಡಾನೆ: ಗ್ರಾಮಸ್ಥರಲ್ಲಿ ಆತಂಕ

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಮಾರುಕಟ್ಟೆ ಸಮೀಪವಿರುವ ತೆಂಗಿನಕೆರೆ ಹತ್ತಿರ ಒಂಟಿ ಸಲಗವೊಂದು ಶುಕ್ರವಾರ ಕಾಣಿಸಿಕೊಂಡಿದ್ದು, ಇದು ಜನರ ಆತಂಕಕ್ಕೆ ಕಾರಣವಾಗಿದೆ.

ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದಿದ್ದ ಕಾಡಾನೆಯು ಕಳೆದ ಎರಡು ದಿನದಿಂದ ದಾರಿತಪ್ಪಿ ಚಾಮರಾಜ ನಗರದ ಬೂದಿತಿಟ್ಟು ಹಾಗೂ ಯಡಬೆಟ್ಟದ ಬಳಿಯ ಎಣ್ಣೆಹೊಳೆ ಬಳಿ ಕಾಣಿಸಿಕೊಂಡಿತ್ತು. ಕಾಡಾನೆ ಗುರುವಾರ ರಾತ್ರೋರಾತ್ರಿ ಸಂಚರಿಸಿ ತೆರಕಣಾಂಬಿಯ ತೆಂಗಿನಕೆರೆ ಸಮೀಪಕ್ಕೆ ಶುಕ್ರವಾರ ಬಂದು ತಲುಪಿದೆ.

ಪಶ್ಚಿಮದ ಕೆರೆಯಂಗಳದಲ್ಲಿ ನೀರಿನಿಂದ ಆಚೆ ಆನೆ ಬೀಡು ಬಿಟ್ಟಿದ್ದು, ಮೇವು-ನೀರಿನ ಲಭ್ಯತೆ ಜತೆಗೆ ಜನರ ಗಲಾಟೆ ಹಿನ್ನೆಲೆಯಲ್ಲಿ ಸಲಗ ಅಲ್ಲಲ್ಲೇ ಓಡಾಡಿಕೊಂಡಿತ್ತು. ಬಳ್ಳಾರಿ ಜಾಲಿ ನಡುವೆ ಸಣ್ಣ ಕಾಲು ದಾರಿಯಲ್ಲಿ ಕೆರೆಯ ಪಶ್ಚಿಮ ಭಾಗಕ್ಕೆ ಹೋಗಲು ಮಾತ್ರ ಸ್ಥಳವಕಾಶ ಇತ್ತು. ಅಲ್ಲದೇ ಕೆರೆಯ ಸುತ್ತಲೂ ಬೆಳಗಿನಿಂದ ಸಂಜೆ ತನಕ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದ ಕಾರಣ ಆನೆಯನ್ನು ಕಾಡಿಗಟ್ಟುವ ಕಾರ್ಯ ಸಾಧ್ಯವಾಗಲಿಲ್ಲ.

ಕೆರೆಯಲ್ಲಿ ಕಾಡಾನೆ ಇರುವುದನ್ನು ನೋಡಿ ವಿಷಯ ತಿಳಿಸಿದ ಹಿನ್ನೆಲೆಯಲ್ಲಿ ಜನರು ನೂರಾರು ಸಂಖ್ಯೆಯಲ್ಲಿ ಗುಂಪು ಗೂಡಿದ್ದರು. ಮಾಹಿತಿ ಅರಿತ ಗುಂಡ್ಲುಪೇಟೆ ಮತ್ತು ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್‌, ಎನ್‌.ಪಿ.ನವೀನ್‌ಕುಮಾರ್‌ ಇತರೆ ಅಧಿಕಾರಿಗಳು, ನೌಕರರು, ವಿಶೇಷ ಹುಲಿ ಸಂರಕ್ಷಣಾ ದಳದ 80ರಷ್ಟು ಮಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಎಪಿಎಂಸಿ ವಹಿವಾಟು ಸ್ಥಳಾಂತರ: ತೆರಕಣಾಂಬಿ ಮಾರುಕಟ್ಟೆ ಸಮೀಪವಿರುವ ತೆಂಗಿನಕೆರೆ ಹತ್ತಿರ ಒಂಟಿ ಸಲಗ ಬೀಟು ಬಿಟ್ಟಿರುವ ಹಿನ್ನೆಲೆ ಹಳೇ ಸಂತೇಮಾಳದಲ್ಲಿ ನಡೆಯುತ್ತಿದ್ದ ತರಕಾರಿ ವಹಿವಾಟನ್ನು ಸ್ಥಳಾಂತರಿಸಿ, ಗ್ರಾಮದ ವೆಂಕಟೇಶ್ವರ ಕಲ್ಯಾಣ ಮಂಟಪ ಮುಂದೆ, ಸಮುದಾಯ ಭವನದ ಬಳಿ ವಹಿವಾಟು ನಡೆಸಲಾಯಿತು.

ವೆಂಕಟರಮಣಸ್ವಾಮಿ ದೇವಾಲಯ ಸಂರಕ್ಷಿತ ಅರಣ್ಯದ ಮೂಲಕ ಹತ್ತಿರವಿರುವ ಕುಂದಕೆರೆ ಅರಣ್ಯ ವಲಯಕ್ಕೆ ಕಾಡಾನೆ ಹೋಗುವಂತೆ ಮಾಡಲು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. – ಡಾ.ಲೋಕೇಶ್‌, ಆರ್‌ಎಫ್ಒ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.