ಅಗ್ನಿಪಥ ಯೋಜನೆ: ಐಎಎಫ್ ಗೆ 59,960 ಅರ್ಜಿ ಸಲ್ಲಿಕೆ
ಕೇಂದ್ರದ ಪ್ರಸ್ತಾಪಕ್ಕೆ ಭರ್ಜರಿ ರೆಸ್ಪಾನ್ಸ್
Team Udayavani, Jun 26, 2022, 8:42 PM IST
ನವದೆಹಲಿ: ಅಗ್ನಿಪಥ ಯೋಜನೆಗೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಗೆ 59,960 ಅರ್ಜಿಗಳು ಸಲ್ಲಿಕೆಯಾಗಿವೆ. ಅಲ್ಲಿ ಒಟ್ಟು ಮೂರು ಸಾವಿರ ಹುದ್ದೆಗಳು ಇವೆ.
ಹೀಗಾಗಿ, ಕೇಂದ್ರ ಸರ್ಕಾರದ ಉದ್ದೇಶಿತ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜು.5ರಂದು ನೋಂದಣಿ ಮುಕ್ತಾಯವಾಗಲಿದೆ ಎಂದು ಐಎಎಫ್ ಭಾನುವಾರ ಟ್ವೀಟ್ ಮಾಡಿದೆ.
ಇನ್ನೊಂದೆಡೆ, ಅಗ್ನಿವೀರರನ್ನು ನಾಲ್ಕು ವರ್ಷಗಳ ತರಬೇತಿ ಬಳಿಕ ಸರ್ಕಾರಿ ಹುದ್ದೆಗಳಿಗೆ ನೇಮಕ ವೇಳೆ ಪರಿಗಣಿಸುವ ಬಗ್ಗೆ ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ, ಹರ್ಯಾಣ, ಉತ್ತರಾಖಂಡ, ಅಸ್ಸಾಂ ಸರ್ಕಾರಗಳು ಈಗಾಗಲೇ ವಾಗ್ಧಾನ ಮಾಡಿವೆ.
ಉತ್ತರಾಖಂಡವು ಪೊಲೀಸ್ ಇಲಾಖೆ, ವಿಪತ್ತು ರಕ್ಷಣಾ ಇಲಾಖೆ, ಚಾರ್ ಧಾಮ್ ನಿರ್ವಹಣಾ ಇಲಾಖೆಯ ಕೆಲಸಗಳಲ್ಲಿ ಅಗ್ನಿವೀರರಿಗೆ ಮೀಸಲಾತಿ ಕೊಡುವುದಾಗಿ ಹೇಳಿದೆ.
ಇದನ್ನೂ ಓದಿ:ಸ್ಮಾರ್ಟ್ವಾಚ್ನಿಂದ ಫಾಸ್ಟ್ಟ್ಯಾಗ್ ಸ್ಕ್ಯಾನ್ ಸಾಧ್ಯವಿಲ್ಲ
ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತರಾದವರಿಗೆ ರಾಜ್ಯದ ಇಲಾಖೆಗಳಲ್ಲಿ ಕೆಲಸ ಕೊಡುವ ಕಾನೂನು ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿದೆ.
ಹರ್ಯಾಣದ ಗ್ರೂಪ್ ಸಿ ಹುದ್ದೆಗಳು ಅಥವಾ ಪೊಲೀಸ್ ಇಲಾಖೆಯ ಕೆಲಸವನ್ನು ಅಗ್ನಿವೀರರಿಗೆ ಕೊಡುವುದಾಗಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ.
ಆದರೆ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಆಡಳಿತದಲ್ಲಿ ಇಲ್ಲದೇ ಇರುವ ರಾಜ್ಯಗಳಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ