ದೇಶಕ್ಕೆ ಕಪ್ಪು ಚುಕ್ಕಿ ತಂದಿಟ್ಟ ಎಮರ್ಜೆನ್ಸಿ: ಜರ್ಮನಿಯ ಮ್ಯೂನಿಚ್‌ನಲ್ಲಿ ಪ್ರಧಾನಿ ಅಭಿಮತ


Team Udayavani, Jun 27, 2022, 7:20 AM IST

thumb 2 pm

ಮ್ಯೂನಿಚ್‌: “47 ವರ್ಷಗಳ ಹಿಂದೆ ಭಾರತದ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಪ್ರಯತ್ನ ನಡೆದಿತ್ತು. ತುರ್ತು ಪರಿಸ್ಥಿತಿಯು ಭಾರತದ ಇತಿಹಾಸದಲ್ಲಿ ಕಪ್ಪು ಚುಕ್ಕಿ.

ಜೂ. 26 ನಮಗೆ ಪ್ರಜಾಪ್ರಭುತ್ವವನ್ನು ದಮನ ಮಾಡಲು ಯತ್ನಿಸಿದ ದಿನವನ್ನು ನೆನಪಿಸುತ್ತದೆ’
-ಹೀಗೆಂದು ಹೇಳಿದ್ದು ಪ್ರಧಾನಿ ನರೇಂದ್ರ ಮೋದಿ. ಜರ್ಮನಿಯ ಮ್ಯೂನಿ­ಚ್‌­ನಲ್ಲಿ ಭಾರತೀಯ ಸಮುದಾಯ­ದವರನ್ನು ಉದ್ದೇಶಿಸಿ ಅವರು ಮಾತನಾಡಿ­ದರು.

“ಭಾರತೀಯರು ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಭಾರತದ ಪ್ರಜಾ­ಪ್ರಭುತ್ವದ ಬಗ್ಗೆ ಹೆಮ್ಮೆ ಪಡುತ್ತಾರೆ. ಭಾರತ ಪ್ರಜಾಪ್ರಭುತ್ವದ ಮಾತೆ’ ಎಂದರು ಮೋದಿ.

ಅಭಿವೃದ್ಧಿಯಾಗಿದೆ: ಈಗ ಭಾರತದ ಪ್ರತೀ ಹಳ್ಳಿಗೆ ವಿದ್ಯುತ್‌ ಸಂಪರ್ಕವಿದೆ ಎಂದು ಹೇಳಿದ ಅವರು, ಶೇ. 99ಕ್ಕೂ ಅಧಿಕ ಮನೆಗಳಿಗೆ ಗ್ಯಾಸ್‌ ಸೌಲಭ್ಯವಿದೆ ಎಂದರು. ಬಡವರಿಗೆ 5 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಸಿಗುತ್ತಿದೆ. ಪ್ರತೀ 10 ದಿನಕ್ಕೊಂದು ಯುನಿಕಾರ್ನ್ ಸೃಷ್ಟಿಯಾಗುತ್ತಿದೆ.

ತಿಂಗಳಿಗೆ 5,000 ಪೇಟೆಂಟ್‌ಗಳಿಗೆ ಅರ್ಜಿ ಸಲ್ಲಿಕೆಯಾಗುತ್ತಿದೆ, 500 ರೈಲು ಬೋಗಿ ನಿರ್ಮಾಣವಾಗುತ್ತಿದೆ. 4ನೇ ಕೈಗಾರಿಕಾ ಕ್ರಾಂತಿಯಲ್ಲಿ ಭಾರತ ಮುಂದಾಳತ್ವ ಪಡೆದುಕೊಂಡಿದೆ. ಡಿಜಿಟಲ್‌ ಬ್ಯಾಂಕಿಂಗ್‌, ಡೇಟಾ ಬಳಕೆ ಸೇರಿ ಎಲ್ಲ ವಿಚಾರದಲ್ಲೂ ಇಂದು ಭಾರತೀಯರು ಮುಂದಿದ್ದಾರೆ. ಭಾರತ ಈ ಹಿಂದೆ ಸ್ಟಾರ್ಟ್‌ಅಪ್‌ ಸ್ಪರ್ಧೆಯಲ್ಲೇ ಇರಲಿಲ್ಲ. ಆದರೆ ಈಗ ವಿಶ್ವದ ಮೂರನೇ ಅತೀ ದೊಡ್ಡ ಸ್ಟಾರ್ಟ್‌ಅಪ್‌ ಎಕೋ ಸಿಸ್ಟಂ ನಮ್ಮಲ್ಲಿದೆ’ ಎಂದು ಮೋದಿ ಹೇಳಿದ್ದಾರೆ.

ಚಲ್ತಾ ಹೈ ನಿಲುವು ಇಲ್ಲ: ದೇಶದಲ್ಲಿ ಈಗ ಚಲ್ತಾ ಹೈ ನಿಲುವು ಇಲ್ಲ. ಅದರ ಬದಲಾಗಿ ಈಗ ಕೆಲಸ ಪೂರ್ಣವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಾಣ ಉಳಿಸಿದ ದೇಸಿ ಲಸಿಕೆ: ಭಾರತವು ಕೊರೊನಾ ಸಮಯದಲ್ಲಿ ಭಾರೀ ಪ್ರಮಾಣ­ದಲ್ಲಿ ಲಸಿಕೆ ಉತ್ಪಾದಿಸಿ, ರಫ್ತು ಮಾಡಿದೆ. ಇಂದು ದೇಶದ ಶೇ. 90 ಮಂದಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ. ಲಸಿಕೆ ಹಂಚಿಕೆಗೆ ಕನಿಷ್ಠ 10-15 ವರ್ಷ ಬೇಕೆಂದು ವಿರೋಧಿಗಳು ಪ್ರಾರಂಭದಲ್ಲಿ ದೂರಿದ್ದರು. ಆದರೆ ನಾವು ಎರಡೇ ವರ್ಷಗಳಲ್ಲಿ ಅದನ್ನು ಮಾಡಿ ತೋರಿಸಿದ್ದೇವೆ ಎಂದು ಅವರು ಹೇಳಿದರು.

ಅದ್ಧೂರಿ ಸ್ವಾಗತ: ರವಿವಾರ ಬೆಳಗ್ಗೆ ಜರ್ಮನಿಯ ಮ್ಯೂನಿಚ್‌ಗೆ ಬಂದಿಳಿದ ಮೋದಿಯವರಿಗೆ ಜರ್ಮನಿಯ ಆಡಳಿತ ಮತ್ತು ಅಲ್ಲಿನ ಭಾರತೀಯರು ಅದ್ಧೂರಿ ಸ್ವಾಗತ ಮಾಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಭಾರತೀಯರು “ಭಾರತ್‌ ಮಾತಾ ಕೀ ಜೈ’ ಘೋಷಣೆಗಳೊಂದಿಗೆ ಮೋದಿ­ಯನ್ನು ಬರಮಾಡಿ­ಕೊಂಡಿದ್ದಾರೆ. ಅಲ್ಲಿ ನೆರೆದಿದ್ದ ಪುಟಾಣಿ­ಗಳೊಂದಿಗೆ ಪ್ರಧಾನಿಯವರು ಕೆಲ ಕಾಲ ಮಾತನಾಡಿದ್ದು, ಆ ಫೋಟೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ತಂಗುವ ಹೊಟೇಲ್‌ನಲ್ಲಿ ಎ.ಸಿ. ಇಲ್ಲ
ಜರ್ಮನಿಯಲ್ಲಿರುವ ಪ್ರಧಾನಿ ಮೋದಿಯವರು ರವಿವಾರ ಜರ್ಮನಿಯ ದಕ್ಷಿಣ ಗಡಿ ಭಾಗದಲ್ಲಿರುವ ಪ್ರಸಿದ್ಧ ಸ್ಕೊ$Éàಸ್‌ ಎಲೌ¾ ಹೊಟೇಲ್‌ನಲ್ಲಿ ತಂಗಿದ್ದಾರೆ. ವಿಶೇಷವೆಂದರೆ ಈ ಹೊಟೇಲ್‌ನಲ್ಲಿ ಹವಾನಿಯಂತ್ರಿತ ಕೊಠಡಿಗಳಿಲ್ಲ. ಹಾಗೆಯೇ ಅದ್ಧೂರಿ ಕೊಠಡಿಗಳೂ ಇಲ್ಲ. ಗುಡ್ಡಗಾಡು ಪ್ರದೇಶದಲ್ಲಿರುವ ಹೊಟೇಲ್‌ಗೆ ಕೂಲರ್‌ಗಳನ್ನು ಬಳಕೆ ಮಾಡಲಾಗುತ್ತಿದೆ.

 

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.