ಸುಳ್ಯ : ಎರಡು ಅಂಗಡಿಯಲ್ಲಿ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ
Team Udayavani, Jun 27, 2022, 12:09 AM IST
ಸುಳ್ಯ : ಎರಡು ಅಂಗಡಿಗಳಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ತಡರಾತ್ರಿ ಅಂಗಡಿಗಳು ಹೊತ್ತಿ ಉರಿದು ಅಪಾರ ನಷ್ಟ ಸಂಭವಿಸಿರುವ ಘಟನೆ ಸುಳ್ಯ ತಾಲೂಕಿನ ಪಂಜ ಪೇಟೆಯಲ್ಲಿ ಜೂ. 25ರ ರಾತ್ರಿ ಸಂಭವಿಸಿದೆ.
ಪಂಜ ಪೇಟೆಯಲ್ಲಿರುವ ರಮೇಶ್ ಪಾಲೋಳಿ ಅವರ ಕುಕ್ಕೆಶ್ರೀ ಹಾರ್ಡ್ ವೇರ್ ಮತ್ತು ಪಕ್ಕದಲ್ಲಿರುವ ನೂತನ್ ಅವರ ಮಾಲಕತ್ವದ ಕಟ್ಲೆàರಿ ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣ ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ರಾತ್ರಿ ಬೆಂಕಿ ಉರಿಯುತ್ತಿರುವುದನ್ನು ಕಂಡ ಸ್ಥಳೀಯರು ಅಂಗಡಿ ಮಾಲಕರಿಗೆ ಮಾಹಿತಿ ನೀಡಿ, ಬೆಂಕಿ ನಂದಿಸಲು ಆರಂಭಿಸಿದ್ದಾರೆ. ಕೆಲ ಹೊತ್ತಿನಲ್ಲೇ ಅಗ್ನಿಶಾಮಕ ದಳದ ತಂಡದವರು ಸ್ಥಳಕ್ಕೆ ಆಗಮಿಸಿ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಈ ವೇಳೆಗಾಗಲೇ ಎರಡೂ ಅಂಗಡಿಗಳು ಸಂಪೂರ್ಣ ಉರಿದಿತ್ತು. ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಕಿ ಅಕ್ಕ-ಪಕ್ಕದ ಅಂಗಡಿಗಳಿಗೆ ಪಸರಿಸುವುದು ತಪ್ಪಿದೆ. ಅಗ್ನಿಶಾಮಕ ದಳದವರಿಗೆ ಊರವರು, ಸ್ಥಳೀಯರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ