ಸಾಗರ ಆರ್ಥಿಕತೆ, ಮೂಲಸೌಕರ್ಯಕ್ಕೆ ವಿಶೇಷ ಒತ್ತು: ಸಚಿವ ಸರ್ಬಾನಂದ ಸೋನೋವಾಲ್‌


Team Udayavani, Jun 27, 2022, 6:25 AM IST

ಸಾಗರ ಆರ್ಥಿಕತೆ, ಮೂಲಸೌಕರ್ಯಕ್ಕೆ ವಿಶೇಷ ಒತ್ತು: ಸಚಿವ ಸರ್ಬಾನಂದ ಸೋನೋವಾಲ್‌

ಮಂಗಳೂರು: ಸಾಗರತೀರ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಸಾಗರ ಅರ್ಥಿಕತೆಯ ಸಂರಕ್ಷಣೆ ಮತ್ತು ಉತ್ತೇಜನ ಪ್ರಧಾನಿ ನರೇಂದ್ರ ಮೋದಿ ಯವರ ಗುರಿಯಾಗಿದ್ದು ಈ ನಿಟ್ಟಿನಲ್ಲಿ ಆವಶ್ಯಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಬಂದರು, ನೌಕಾಯಾನ ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್‌ ಹೇಳಿದ್ದಾರೆ.

ಭಾರತ ನೀಲಿ ಅರ್ಥಿಕತೆಯನ್ನು ಉತ್ತೇಜಿಸಿ ಸಾಗರ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಮಡಿಕೇರಿಯಲ್ಲಿ ಬಂದರು, ನೌಕಾಯಾನ ಹಾಗೂ ಜಲಸಾರಿಗೆ ಸಚಿವಾಲಯ ಹಮ್ಮಿ ಕೊಂಡಿರುವ ಮೂರು ದಿನಗಳ ಚಿಂತನ ಸಭೆಯನ್ನು (ಚಿಂತನ ಬೈಠಕ್‌) ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಾಗರ ಆರ್ಥಿಕತೆ ಸಮರ್ಥ ಬಳಕೆ
ಸಾಗರದಲ್ಲಿ ಆರ್ಥಿಕತೆಗೆ ಇರುವ ವಿಪುಲ ಅವಕಾಶಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಕರಾವಳಿ ಪ್ರದೇಶಗಳ ಅಭಿವೃದ್ಧಿ, ಕರಾವಳಿಯ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಸಾಗರ ಆರ್ಥಿಕತೆಯನ್ನು ಸಂರಕ್ಷಿಸಿ ಉತ್ತೇಜಿಸುವ ಗುರಿಯನ್ನು ಸಚಿವಾಲಯ ಹೊಂದಿದೆ.

ಆತ್ಮನಿರ್ಭರ ಭಾರತ ಸಾಕಾರದ ನಿಟ್ಟಿನಲ್ಲಿ ಸಾಗರ ಅರ್ಥಿಕತೆಯ ಸಮರ್ಥ ಬಳಕೆಗಾಗಿ ಸರ್ವ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಸ್ತುತ ಆಯೋಜಿಸಿರುವ ಚಿಂತನ ಬೈಠಕ್‌ನಲ್ಲಿ ಸಾಗರ ಆರ್ಥಿಕತೆಯಲ್ಲಿ ಅವಕಾಶಗಳು, ಸವಾಲುಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ.

ಇದರ ಆಧಾರದಲ್ಲಿ ಮುಂದಿನ ಯೋಜನೆಗಳ ನೀಲ ನಕಾಶೆಯನ್ನು ಸಿದ್ಧಪಡಿಸಲಾಗುವುದು ಮತ್ತು ಬಂದರುಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಹೊಸ ತಂತ್ರಜ್ಞಾನ ಅಳವಡಿಕೆ ಅಗತ್ಯ
ಕೇಂದ್ರ ಬಂದರು, ನೌಕಾಯಾನ ಹಾಗೂ ಜಲಸಾರಿಗೆ ಖಾತೆಯ ಸಹಾಯಕ ಸಚಿವ ಶ್ರೀಪಾದ ನಾಯಕ್‌ ಮಾತನಾಡಿ, ಬಂದರುಗಳಲ್ಲಿ ಹೊಸ ತಂತ್ರಜ್ಞಾನಗಳ ಅಳವಡಿಕೆಗೆ ವಿಶೇಷ ಆದ್ಯತೆ ನೀಡುವುದು ಇಂದಿನ ಆವಶ್ಯಕತೆ ಎಂದರು. ಇನ್ನೋರ್ವ ಸಹಾಯಕ ಸಚಿವ ಶಂತನು ಠಾಕೂರ್‌ ದೇಶದ ನೌಕಾ ಯಾನ ಕ್ಷೇತ್ರದ ಸಾಮರ್ಥ್ಯ, ಜಲಸಾರಿಗೆ ಅವಕಾಶಗಳ ಬಗ್ಗೆ ವಿವರಿಸಿದರು.

ನವಮಂಗಳೂರು ಬಂದರು ಪ್ರಾಧಿ ಕಾರದ ಅಧ್ಯಕ್ಷ ಎ.ವಿ. ರಮಣ, ದೇಶದ ಎಲ್ಲ ಬೃಹತ್‌ ಬಂದರು ಪ್ರಾಧಿಕಾರಗಳ ಅಧ್ಯಕ್ಷರು, ಸಚಿವಾಲಯದ ಉನ್ನತ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ.

157 ರಸ್ತೆ, 137 ರೈಲು ಮಾರ್ಗ ಅಭಿವೃದ್ಧಿ
ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಬಹುಮಾದರಿ ಸಂಪರ್ಕ ಯೋಜನೆಯ ಪರಿ ಣಾಮಕಾರಿ ಅನುಷ್ಠಾನಕ್ಕಾಗಿ ಬಂದರುಗಳಿಗೆ ಬಹುಸಂಪರ್ಕ ಮಾದರಿಗಳನ್ನು ಉತ್ತೇಜಿ ಸುವ ನಿಟ್ಟಿನಲ್ಲಿ 157 ರಸ್ತೆ ಸಂಪರ್ಕ ಹಾಗೂ 137 ರೈಲು ಸಂಪರ್ಕ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದದಲ್ಲದೆ ಬಂದರುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದು ಸೋನೋವಾಲ್‌ ಹೇಳಿದರು.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.