ಶಿರಸಿ ಎಪಿಎಂಸಿಗೆ ಪ್ರಶಾಂತ ಗೌಡ ನೂತನ ಅಧ್ಯಕ್ಷ
Team Udayavani, Jun 27, 2022, 4:16 PM IST
ಶಿರಸಿ: ಜಿಲ್ಲೆಯ ಪ್ರಸಿದ್ಧ ಎಪಿಎಂಸಿಗಳಲ್ಲಿ ಒಂದಾದ ಶಿರಸಿ ಎಪಿಎಂಸಿಗೆ ಸಂತೋಳ್ಳಿಯ ಪ್ರಶಾಂತ ಗೌಡರ್ ಅವಿರೋಧವಾಗಿ ಆಯ್ಕೆ ಆದರು.
ಬನವಾಸಿಯ ಶಿವಕುಮಾರ ಗೌಡ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಎಪಿಎಂಸಿಯ ಎಲ್ಲ ನಿರ್ದೇಶಕರು ಒಕ್ಕೊರಲಿನಿಂದ ಪ್ರಶಾಂತ ಗೌಡರನ್ನು ಆಯ್ಕೆ ಮಾಡಿದರು.
ನಿಕಟಪೂರ್ವ ಅಧ್ಯಕ್ಷ ಶಿವಕುಮಾರ ಗೌಡ, ಹಿರಿಯ ಸದಸ್ಯ ಕೆರಿಯಾ ಬೋರಕರ್ ಅವರು ಸೂಚನೆ, ಅನುಮೋದನೆ ಮಾಡಿದರು. 13 ಸದಸ್ಯರಲ್ಲಿ ನಾಮಪತ್ರ ಒಂದೇ ಬಂದಿದ್ದರಿಂದ ಅವರೋಧ ಆಯ್ಕೆಯನ್ನು ಚುನಾವಣಾ ಅಧಿಕಾರಿಗಳು ಘೋಷಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪ್ರಶಾಂತ ಗೌಡರ್, ಪ್ರಾಮಾಣಿಕ, ಬದ್ಧತೆಯಿಂದ ಕೆಲಸ ಮಾಡುತ್ತೇನೆ. ಪರಿಷತ್ ಚುನಾವಣೆಯ ಕಾರಣದಿಂದ ಬಾಕಿ ಉಳಿದ ಕಾಮಗಾರಿಗಳಿಗೂ ಚಾಲನೆ ನೀಡುತ್ತೇವೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುವುದಾಗಿ ಪ್ರಕಟಿಸಿದರು.
ಈ ವೇಳೆ ಉಪಾಧ್ಯಕ್ಷೆ ಸವಿತಾ ಹೆಗಡೆ, ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಬಿಜೆಪಿಯ ಗ್ರಾಮೀಣ ಘಟಕ ಅಧ್ಯಕ್ಷ ನರಸಿಂಹ ಹೆಗಡೆ ಬಕ್ಕಳ, ಲಕ್ಷ್ಮೀನಾರಾಯಣ ಹೆಗಡೆ ಮತ್ತೀಹಳ್ಳಿ, ಸುನೀಲ ನಾಯ್ಕ, ವಿಶ್ವನಾಥ ಶೀಗೇಹಳ್ಳಿ ಸೇರಿದಂತೆ ಅನೇಕರಿದ್ದರು.
ತಹಸೀಲ್ದಾರ ಶ್ರೀಧರ ಚುನಾವಣಾಧಿಕಾರಿಯಾಗಿದ್ದರು. ಪ್ರಶಾಂತ ಅವರು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರ ಆಪ್ತ ಶಿಷ್ಯ. ಕಳೆದ ಅವಧಿಗೇ ಇವರ ಹೆಸರು ಕೇಳಿಬಂದಿತ್ತು. ಆಗ ಶಿವಕುಮಾರ ಗೌಡ ಹಾಗೂ ಪ್ರಶಾಂತಗೆ 9 ತಿಂಗಳ ಹಂಚಿಕೆ ಮಾಡಲಾಗಿತ್ತು ಎಂಬ ಮಾತುಗಳೂ ಕೇಳಿ ಬಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
ಭಾರತ್ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್ ಮಾಡಿದ್ರಾ ಸಮಂತಾ?: ಟ್ರೆಂಡ್ ಆದ ಸ್ಯಾಮ್
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!