ಹೈಟೆಕ್ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಪರದಾಟ
ಐದತ್ತು ನಿಮಿಷದ ಕೆಲಸಕ್ಕೆ ಪಾರ್ಕಿಂಗ್ ಶುಲ್ಕ ಸರಿಯೇ? ; ಸಾರ್ವಜನಿಕರು-ಸಾರಿಗೆ ಸಿಬ್ಬಂದಿ ನಡುವೆ ನಿತ್ಯ ವಾಗ್ವಾದ
Team Udayavani, Jun 27, 2022, 4:50 PM IST
ಚಿಕ್ಕೋಡಿ: ನಗರದ ಹೈಟೆಕ್ ಬಸ್ ನಿಲ್ದಾಣ ಬಳಿ ಪಾರ್ಕಿಂಗ್ಗಾಗಿ ಸಾರ್ವಜನಿಕರು ಮತ್ತು ಸಾರಿಗೆ ಸಂಸ್ಥೆ ಸಿಬ್ಬಂದಿ ನಡುವೆ ಪ್ರತಿದಿನ ಒಂದಿಲ್ಲಾ ಒಂದು ವಾಗ್ವಾದ ನಡೆಯುತ್ತಲೇ ಇದೆ. ಇದರಿಂದ ಬಸ್ ಚಾಲಕರಿಗೆ ನಿತ್ಯ ಕಿರಿಕಿರಿಯಾಗಿದೆ.
ಬಸ್ ನಿಲ್ದಾಣದೊಳಗೆ ಹೋಗುವ ಗೇಟ್ ಬಳಿಯೇ ಸಾರ್ವಜನಿಕರು ದ್ವಿಚಕ್ರ ವಾಹನ ನಿಲ್ಲಿಸುತ್ತಿರುವುದರಿಂದ ಬಸ್ ತೆಗೆದುಕೊಂಡು ಹೋಗುವ ಚಾಲಕರು ಸಂಕಷ್ಟ ಪಡುವಂತಾಗಿದೆ.
ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿಯೇ ಇಕ್ಕಟ್ಟಾದ ರಸ್ತೆ ಇರುವುದರಿಂದ ಅಲ್ಲದೇ ಪಕ್ಕದಲ್ಲೇ ಅನಧಿಕೃತ ಪಾರ್ಕಿಂಗ್ ಮಾಡುವುದರಿಂದ ಬಸ್ ನಿಲ್ದಾಣಕ್ಕೆ ಪ್ರವೇಶಿಸುವ ಬಸ್ಗಳು ತಿರುವಿನಲ್ಲಿ ಭಾರೀ ಕಸರತ್ತು ಎದುರಿಸಬೇಕಾಗುತ್ತದೆ.
ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ ಇಲಾಖೆ: ಬಸ್ ನಿಲ್ದಾಣದ ಎಡ ಬದಿಯಲ್ಲಿ ಸಾರಿಗೆ ಇಲಾಖೆ ದ್ವಿಚಕ್ರ ವಾಹನಕ್ಕೆ 10ರೂ., ಕಾರುಗಳಿಗೆ 30ರೂ. ಹೀಗೆ ದರ ನಿಗದಿ ಮಾಡಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದೆ. ಆದರೆ ಹೆಚ್ಚೆಚ್ಚು ವಾಹನ ಸವಾರರು ಬಸ್ ನಿಲ್ದಾಣ ಮುಂಭಾಗದಲ್ಲಿಯೇ ಪಾರ್ಕಿಂಗ್ ಮಾಡುವುದರಿಂದ ಸಾರಿಗೆ ಸಿಬ್ಬಂದಿಗೆ ತಲೆನೋವಾಗಿದೆ.
ಕಬ್ಬಿನ ಸಲಾಕೆ ತೆರವಿಗೆ ಒತ್ತಾಯ: ಬಸ್ ನಿಲ್ದಾಣ ಬಲ ಬದಿಯಲ್ಲಿ ಬಸ್ ಹೋಗುವ ಪ್ರವೇಶ ದ್ವಾರ ಹೊರತುಪಡಿಸಿ ಉಳಿದ ಕಡೆ ಸಾಕಷ್ಟು ಖಾಲಿ ಜಾಗ ಇದೆ. ಅಲ್ಲಿ ದ್ವಿಚಕ್ರ ವಾಹನ ನಿಲ್ಲಲು ಅವಕಾಶವಿದೆ. 5 ರಿಂದ 10 ನಿಮಿಷ ಬಸ್ ನಿಲ್ದಾಣದೊಳಗೆ ಹೋಗಿ ಬರುವವರಿಗೆ ಅನುಕೂಲವಾಗುತ್ತದೆ. ಸಾರ್ವಜನಿಕರು ಒಳಗೆ ಬರದಂತೆ ಹಾಕಿರುವ ಕಬ್ಬಿನದ ಸಲಾಕೆ ತೆರವು ಮಾಡುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಇಡೀ ದಿನ ವಾಹನ ನಿಲ್ಲಿಸಿ ಹೋಗುವ ನಾಗರಿಕರಿಗೆ ಪಾರ್ಕಿಂಗ್ ಸೌಲಭ್ಯ ಅನುಕೂಲ ಆದರೆ ಬಸ್ ನಿಲ್ದಾಣದ ಒಳಗಿರುವ ಬುಕ್ ಸ್ಟಾಲ್, ಝರಾಕ್ಸ್ ಮತ್ತು ಬೇಕರಿ ಅಂಗಡಿಗಳಿಗೆ ಕೇವಲ 5 ರಿಂದ 10 ನಿಮಿಷ ಹೋಗಿ ಬರುವ ನಾಗರಿಕರು 10 ರೂ. ಪಾರ್ಕಿಂಗ್ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಬಸ್ ನಿಲ್ದಾಣದ ಮುಂಭಾಗ ಖಾಲಿ ಇರುವ ಜಾಗದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಲು ಅವಕಾಶ ಕಲ್ಪಿಸಬೇಕೆಂಬುದು ಜನರ ಬೇಡಿಕೆ.
ಹೈಟೆಕ್ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ವಿಭಾಗೀಯ ಕಚೇರಿ ಬರುವುದರಿಂದ ಬಸ್ ನಿಲ್ದಾಣದ ಮುಂಭಾಗ ಕಬ್ಬಿನ ಸಲಾಕೆ ಹಾಕಲಾಗಿದೆ. ಹೀಗಾಗಿ ಹೆಚ್ಚಿನ ಬೈಕ್ಗಳು ಬಸ್ ಪ್ರವೇಶ ದ್ವಾರದಲ್ಲಿ ನಿಲ್ಲುವುದರಿಂದ ಈ ಸಮಸ್ಯೆ ಎದುರಾಗಿದೆ. ಬರುವ 15 ದಿನದಲ್ಲಿ ಸಮಸ್ಯೆ ಬಗೆಹರಿಯಲಿದೆ. –ಸಂಗಪ್ಪ, ಘಟಕ ವ್ಯವಸ್ಥಾಪಕ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ.
ಬಸ್ ನಿಲ್ದಾಣದೊಳಗಿರುವ ಬುಕ್ ಸ್ಟಾಲ್ ಮತ್ತು ಇತರೆ ಅಂಗಡಿಗಳಿಗೆ ಹೋಗಿ ಬರಲು 4 ರಿಂದ 5 ನಿಮಿಷ ದ್ವಿಚಕ್ರ ವಾಹನ ನಿಲ್ಲಿಸಲು 10 ರೂ. ಶುಲ್ಕ ಕಟ್ಟಬೇಕು. ಇದು ಸಾಧ್ಯವಾಗದು. ಬಸ್ ನಿಲ್ದಾಣದ ಮುಂಭಾಗದಲ್ಲಿ ಖಾಲಿ ಇರುವ ಜಾಗದಲ್ಲಿ ಇಂತಹ ನಾಗರಿಕರಿಗೆ ಅನುಕೂಲ ಕಲ್ಪಿಸಬೇಕು. ಕಬ್ಬಿನ ಸಲಾಕೆ ತೆರವು ಮಾಡಬೇಕು. –ಮಾರುತಿ ಎಚ್., ದ್ವಿಚಕ್ರ ವಾಹನ ಸವಾರ
ಮಹಾದೇವ ಪೂಜೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ