ಕರಾವಳಿಯಲ್ಲಿ ಇನ್ನೂ ಅನುಷ್ಠಾನಕ್ಕೆ ಬಾರದ ಸೈರನ್‌ ಟವರ್‌ಗಳು

ಚಂಡಮಾರುತ, ಸುನಾಮಿ ಮುನ್ನೆಚ್ಚರಿಕೆ, ಕ್ಷಿಪ್ರ ಕಾರ್ಯಾಚರಣೆಗೆ ಪೂರಕ

Team Udayavani, Jun 28, 2022, 7:45 AM IST

ಕರಾವಳಿಯಲ್ಲಿ ಇನ್ನೂ ಅನುಷ್ಠಾನಕ್ಕೆ ಬಾರದ ಸೈರನ್‌ ಟವರ್‌ಗಳು

ಮಂಗಳೂರು: ಚಂಡ ಮಾರುತ, ಸುನಾಮಿ ಸಂದರ್ಭದಲ್ಲಿ ತುರ್ತು ಮುನ್ನೆಚ್ಚರಿಕೆ ನೀಡಿ ಕ್ಷಿಪ್ರಗತಿಯಲ್ಲಿ ಪರಿಹಾರ ಕಾರ್ಯಾಚರಣೆಗೆ ಪೂರಕವಾಗಿ ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸೈರನ್‌ ಟವರ್‌ ಯೋಜನೆ ಮಂಜೂರುಗೊಂಡು ನಾಲ್ಕು ವರ್ಷಗಳು ಸಂದರೂ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ.

ನ್ಯಾಶನಲ್‌ ಸೈಕ್ಲೋನ್‌ ರೆಸಿಸ್ಟ್‌ ಮಿಟಿಗೇಶನ್‌ ಪ್ರೊಜೆಕ್ಟ್ (ರಾಷ್ಟ್ರೀಯ ಚಂಡಮಾರುತ ಅಪಾಯ ಮುನ್ಸೂ ಚನೆ, ಉಪಶಮನ ಯೋಜನೆ -ಎನ್‌ಸಿಆರ್‌ಎಂಪಿ) ವತಿಯಿಂದ 26.92 ಕೋ.ರೂ. ವೆಚ್ಚದಲ್ಲಿ 26 ಸೈರನ್‌ ಟವರ್‌ಗಳನ್ನು ಅಳವಡಿಸುವ ಯೋಜನೆ ಇದಾಗಿದೆ.

ಅರಬಿ ಸಮುದ್ರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಆಗಾಗ ವಾಯುಭಾರ ಕುಸಿತದಿಂದ ಚಂಡಮಾರುತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕಾರ್ಯಾಚರಣೆ ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಿ ಸಂಭಾವ್ಯ ಅನಾಹುತಗಳನ್ನು ಕನಿಷ್ಠಗೊಳಿಸಲು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುನ್ನಚ್ಚರಿಕೆ ಹಾಗೂ ಪ್ರಸರಣ ವ್ಯವಸ್ಥೆಗೆ ಸೈರನ್‌ ಟವರ್‌ (ಎಚ್ಚರಿಕೆ ಗೋಪುರ) ನಿರ್ಮಾಣ ಯೋಜನೆಯನ್ನು 4 ವರ್ಷಗಳ ಹಿಂದೆ ಎನ್‌ಸಿಆರ್‌ಎಂಪಿ ರೂಪಿಸಿತ್ತು. ಸ್ಥಳ ಸಮೀಕ್ಷೆ ನಡೆಸಿ ಒಟ್ಟು 26 ಕಡೆಗಳಲ್ಲಿ ಸ್ಥಳ ಆಯ್ಕೆ ಮಾಡ ಲಾಗಿತ್ತು.

ಆಯ್ಕೆಯಾಗಿರುವ ತಾಣಗಳು
ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ತಲಾ 8 ಹಾಗೂ ಉತ್ತರ ಕನ್ನಡದಲ್ಲಿ 10 ಪ್ರದೇಶಗಳನ್ನು ಸೈರನ್‌ ಟವರ್‌ಗೆ ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಉಳ್ಳಾಲ, ಸೋಮೇಶ್ವರ, ತಣ್ಣೀರುಬಾವಿ, ಪಣಂಬೂರು, ಸುರತ್ಕಲ್‌, ಸಸಿಹಿತ್ಲು ಬೀಚ್‌ಗಳು ಹಾಗೂ ಹೊಸಬೆಟ್ಟು, ಉಡುಪಿಯಲ್ಲಿ ಪಡುಬಿದ್ರಿ, ಕಾಪು, ಮಲ್ಪೆ, ಕೋಡಿ, ಮಟ್ಟು, ಮರವಂತೆ, ಶಿರೂರು ಬೀಚ್‌ಗಳ ಬಳಿ ಹಾಗೂ ತೆಕ್ಟಟ್ಟೆ ಪ್ರದೇಶವನ್ನು ಆಯ್ಕೆ ಮಾಡಲಾಗಿದೆ. ಉತ್ತರ ಕನ್ನಡದಲ್ಲಿ ಮುರುಡೇಶ್ವರ ಬೀಚ್‌, ಎಕೋ ಬೀಚ್‌ ಪಾರ್ಕ್‌, ಓಂ ಮತ್ತು ಕುಡ್ಲೆ ಬೀಚ್‌ ನಡುವಣ ಪ್ರದೇಶ, ಗೋಕರ್ಣ ಬೀಚ್‌, ಆರ್‌.ಟಿ. ಬೀಚ್‌, ಮಂಕಿ, ಬೇಲೆಕೇರಿ, ಪುಜಾಗೇರಿ ಕಾಲೇಜು ಆವರಣ, ಶಿರಾಲಿ, ಚಿಟ್ಟಕುಳ ಗ್ರಾಮ ಪ್ರದೇಶ ಆಯ್ಕೆಯಾಗಿವೆ.

ಪ್ರಕೃತಿ ವಿಕೋಪಗಳ ಸಂದರ್ಭ ತುರ್ತು ಆಶ್ರಯಕ್ಕಾಗಿ ದ. ಕನ್ನಡ ದಲ್ಲಿ ಉಳ್ಳಾಲ ಹಾಗೂ ಹೊಸಬೆಟ್ಟುವಿ ನಲ್ಲಿ ಬಹುಉದ್ದೇಶ ಆಶ್ರಯ ತಾಣಗಳನ್ನು ಈಗಾಗಲೇ ನಿರ್ಮಿಸ ಲಾಗಿದೆ. ಉಡುಪಿ ಜಿಲ್ಲೆಯ ತೆಕ್ಕಟ್ಟೆ ಮತ್ತು ಕಾಪುವಿನಲ್ಲಿ ಆಶ್ರಯತಾಣ ನಿರ್ಮಿಸಲಾಗಿದೆ. ತಲಾ ಸುಮಾರು 1,000 ಜನರಿಗೆ ಆಶ್ರಯ ಸಾಮರ್ಥ್ಯ ವನ್ನು ಇದು ಹೊಂದಿದೆ. ಇದರ ಜತೆಗೆ ತ್ವರಿತ ಕಾರ್ಯಾ ಚರಣೆಗೆ ನೆರವಾಗುವಂತೆ ಈ ಯೋಜನೆಯಲ್ಲಿ ಕರಾವಳಿ ತೀರದಲ್ಲಿ ಸೇತುವೆ ಹಾಗೂ ರಸ್ತೆಗಳನ್ನು ಕೂಡ ನಿರ್ಮಿಸಲಾಗಿದೆ.

ಸೈರನ್‌ ಮೂಲಕ ಎಚ್ಚರಿಕೆ
ಸಂಭಾವ್ಯ ಪ್ರಾಕೃತಿಕ ವಿಕೋಪಗಳ ಮುನ್ಸೂಚನೆ ಹವಾಮಾನ ಇಲಾಖೆ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಏಜೆನ್ಸಿಗಳಿಂದ ಲಭ್ಯವಾದ ಕೂಡಲೇ ಎಚ್ಚರಿಕೆ ಹಾಗೂ ಸಂದೇಶವನ್ನು ಈ ಮೆಗಾ ಟವರ್‌ಗಳಿಗೆ ರವಾನಿಸಲಾಗುತ್ತದೆ. ಸೈರನ್‌ ಟವರ್‌ ಮೂಲಕ ಸುತ್ತಲಿನ 10 ಕಿ.ಮೀ. ವರೆಗೆ ಸಂಭಾವ್ಯ ಅಪಾಯದ ಮುನ್ನೆಚರಿಕೆ ನೀಡಲಾಗುತ್ತದೆ. ಇದು ಸ್ಥಳೀಯವಾಗಿ ತ್ವರಿತ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲು ಹಾಗೂ ಪರಿಹಾರ ತಂಡಗಳಿಗೆ ಸೂಕ್ತ ಪರಿಹಾರ ವ್ಯವಸ್ಥೆಗಳನ್ನು ಪರಿಣಾಮಕಾರಿಯಾಗಿ ರೂಪಿಸಲು ನೆರವಾಗುತ್ತದೆ.

– ಕೇಶವ ಕುಂದರ್‌

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.