ಬಿಆರ್‌ಐ v/s ಬಿ3ಡಬ್ಲ್ಯು ! ಚೀನದ ಸಂಚಿಗೆ ಜಿ 7 ರಾಷ್ಟ್ರಗಳಿಂದ ತಿರುಗುಬಾಣ

ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಗೆ ಪ್ರತಿಯಾಗಿ ಘೋಷಣೆ

Team Udayavani, Jun 28, 2022, 7:40 AM IST

ಬಿಆರ್‌ಐ v/s ಬಿ3ಡಬ್ಲ್ಯು ! ಚೀನದ ಸಂಚಿಗೆ ಜಿ 7 ರಾಷ್ಟ್ರಗಳಿಂದ ತಿರುಗುಬಾಣ

ಎಲ್ಮಾವು (ಜರ್ಮನಿ): ಅಭಿವೃದ್ಧಿ ಹೊಂದುತ್ತಿರುವ ದೇಶಗಳನ್ನು ಬಹುಕೋಟಿ ಡಾಲರ್‌ ಮೌಲ್ಯದ ಬೆಲ್ಟ್ ಆ್ಯಂಡ್‌ ರೋಡ್‌ ಇನಿಷಿಯೇಟಿವ್‌ (ಬಿಆರ್‌ಐ) ಮೂಲಕ ಸಾಲದ ಜಾಲಕ್ಕೆ ಸಿಲುಕಿಸುವ ಚೀನದ ಸಂಚಿಗೆ ದೊಡ್ಡ ಮಟ್ಟದ ಹೊಡೆತ ನೀಡಲು ಜಿ7 ರಾಷ್ಟ್ರ ಗಳು ಮುಂದಾಗಿವೆ.

ಭಾರತದಂಥ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಹೊಸ ಪರಿವರ್ತನೆ ಯನ್ನು ತರುವಂಥ ಮೂಲ ಸೌಕರ್ಯ ಯೋಜನೆಗಳನ್ನು ಜಾರಿ ಮಾಡುವ ಹೊಸ ಯೋಜನೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಇತರ ಜಿ7 ನಾಯಕರು ಘೋಷಿಸಿದ್ದಾರೆ. ಈ ಮೂಲಕ ವಿಸ್ತರಣ ವಾದಿ ಚೀನಕ್ಕೆ ಸಡ್ಡು ಹೊಡೆಯುವ ಮಾಸ್ಟರ್‌ಪ್ಲ್ರಾನ್‌ ರೂಪಿಸಿದ್ದಾರೆ.

ಜರ್ಮನಿಯಲ್ಲಿ ಸೋಮವಾರ ನಡೆದ ಜಿ7 ಶೃಂಗದಲ್ಲಿ ಈ ಮಹತ್ವದ ಘೋಷಣೆ ಮಾಡಲಾಗಿದೆ. 2027ರೊಳಗಾಗಿ 600 ಶತಕೋಟಿ ಡಾಲರ್‌ ಮೊತ್ತ ವನ್ನು ಸಂಗ್ರಹಿಸಿ, ಆ ಮೊತ್ತದಿಂದ ಅಭಿವೃದ್ಧಿಶೀಲ ದೇಶಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಪಡಿಸುವ ಯೋಜನೆ ಇದು. ಬಿಲ್ಡ್‌ ಬ್ಯಾಕ್‌ ಬೆಟರ್‌ ವರ್ಲ್ಡ್(ಬಿ3ಡಬ್ಲ್ಯು) ಎಂಬ ಹೆಸರಿನಲ್ಲಿ ಈ ಯೋಜನೆ ಜಾರಿಯಾಗಲಿದೆ.

ಏನಿದು ಚೀನದ ಬಿಆರ್‌ಐ?
2013ರಲ್ಲಿ ಘೋಷಣೆಯಾದ ಯೋಜನೆಯಿದು. ಏಷ್ಯಾದಿಂದ ಯುರೋಪ್‌ವರೆಗೆ ಮತ್ತು ಅದ ರಿಂದಾಚೆಗೆ ರೈಲ್ವೇ, ಬಂದರು, ಹೆದ್ದಾರಿ ಸಹಿತ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಚೀನದ ಈ ಯೋಜನೆಗೆ 100ಕ್ಕೂ ಹೆಚ್ಚು ದೇಶಗಳು ಒಪ್ಪಿವೆ. ಆದರೆ ಬಿಆರ್‌ಐ ಹೆಸರಲ್ಲಿ ಚೀನವು ಶ್ರೀಲಂಕಾದಂಥ ದೇಶ ಗಳಿಗೆ ಸಾಲ ನೀಡಿ, ಸಾಲದ ಶೂಲಕ್ಕೆ ಸಿಲುಕಿಸುತ್ತಿದೆ.

ಏನಿದು ಬಿ3ಡಬ್ಲ್ಯು ಯೋಜನೆ?
ಅಮೆರಿಕ, ಬ್ರಿಟನ್‌, ಕೆನಡಾ, ಫ್ರಾನ್ಸ್‌, ಜರ್ಮನಿ, ಜಪಾನ್‌ ಮತ್ತು ಇಟಲಿ ದೇಶಗಳು ಖಾಸಗಿ ಸಂಸ್ಥೆಗಳಿಂದ ಸಾಲ ಸೇರಿದಂತೆ ಹಲವು ಮೂಲಗಳಿಂದ 600 ಶತಕೋಟಿ ಡಾಲರ್‌ ಬಂಡವಾಳ ಸಂಗ್ರಹಿಸಿ, ಅಭಿವೃದ್ಧಿಶೀಲ ದೇಶಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಯೋಜನೆಯಿದು. ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳ 4 ಪ್ರಮುಖ ಕ್ಷೇತ್ರಗಳಾದ ಆರೋಗ್ಯ, ಡಿಜಿಟಲ್‌ ಸಂಪರ್ಕ, ಲಿಂಗ ಸಮಾನತೆ ಮತ್ತು ಹವಾಮಾನ- ಇಂಧನ ಭದ್ರತೆಯಲ್ಲಿ ಸುಧಾರಣೆ ತರುವುದು ಕೂಡ ಇದರ ಉದ್ದೇಶವಾಗಿದೆ.

ಭಾರತಕ್ಕೇನು ಲಾಭ?
-ಆರೋಗ್ಯಸೇವೆ, ಡಿಜಿಟಲ್‌ ಸಂಪರ್ಕ,ಲಿಂಗ ಸಮಾನತೆ, ಹವಾಮಾನ ಮತ್ತು ಇಂಧನ ಭದ್ರತೆಯಂಥ ಪ್ರಮುಖ ವಲಯಗಳ ಸುಧಾರಣೆಗೆ ಒತ್ತು ಸಿಗಲಿದೆ.
-ಇಂಗಾಲದ ಪ್ರಮಾಣ ತಗ್ಗಿಸುವ ಭಾರತದ ಪ್ರಯತ್ನಕ್ಕೆ ಹಣಕಾಸು ನೆರವು ಲಭಿಸಲಿದೆ.
-ಆಹಾರ ಭದ್ರತೆ ವಿಸ್ತರಣೆ, ಕೃಷಿ ವ್ಯವಸ್ಥೆ ಸುಧಾರಣೆಗಾಗಿ ಭಾರತದಲ್ಲಿ ಅಂತಾರಾಷ್ಟ್ರೀಯ ಅಭಿವೃದ್ಧಿ ಹಣಕಾಸು ನಿಗಮ 30 ದಶಲಕ್ಷ ಡಾಲರ್‌ ಹೂಡಿಕೆ ಮಾಡಲಿದೆ.
-ಗ್ರಾಮೀಣ ಆರ್ಥಿಕತೆಯನ್ನು ಸುಧಾರಿಸಲು ಭಾರತದ ಕಂಪೆನಿಗಳು, ಉದ್ಯಮಿಗಳಿಗೆ ನೆರವಾಗಲಿದೆ.
-ದೇಶದಲ್ಲಿ ಉದ್ಯೋಗಾವಕಾಶ ಸೃಷ್ಟಿಯಾಗ ಲಿದೆ, ಕಾರ್ಮಿಕರಿಗೆ ಹೆಚ್ಚಿನ ಭದ್ರತೆ ಸಿಗಲಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.