ಫ್ಲೆಕ್ಸ್‌ನಲ್ಲಿ ಕೆಂಪೇಗೌಡರ ಬದಲು ವೀರಮದಕರಿ ಫೋಟೋ ಮುದ್ರಣ


Team Udayavani, Jun 28, 2022, 3:21 PM IST

tdy-18

ಎಚ್‌.ಡಿ.ಕೋಟೆ: ತಾಲೂಕು ಆಡಳಿತದ ಎಡವಟ್ಟಿನಿಂದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ನಾಡಪ್ರಭುಗಳ ಭಾವಚಿತ್ರದ ಬದಲಾಗಿ ವೀರಮದಕರಿ ನಾಯಕನ ಚಿತ್ರ ಹಾಕಿದ್ದು, ಗೊಂದಲಕ್ಕೆ ಕಾರಣವಾಯಿತು.

ಪಟ್ಟಣದಲ್ಲಿ ತಾಲೂಕು ಆಡಳಿತ ಸೋಮವಾರ ಬೆಳಗ್ಗೆ 10.30ರಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಸರಳ ಕಾರ್ಯಕ್ರಮ ಆಯೋಜಿಸಿತ್ತು. ವೇದಿಕೆ ಹಿಂಬದಿಯಲ್ಲಿ ಕೆಂಪೇಗೌಡ ಜಯಂತಿ ಕುರಿತು ಫ್ಲೆಕ್ಸ್‌ ಅಳವಡಿಸಲಾಗಿತ್ತು. ಆದರೆ, ಅದರಲ್ಲಿ ಕೆಂಪೇಗೌಡರ ಫೋಟೋ ಬದಲಿಗೆ ವೀರ ಮದಕರಿನಾಯಕ ಚಿತ್ರ ಹಾಕಿದ್ದನ್ನು ಅಧಿಕಾರಿಗಳು ಗಮನ ಹರಿಸಿಲ್ಲ. ಸಮಾರಂಭಕ್ಕೆ ಆಗಮಿಸಿದ್ದ ಬುದ್ಧಿಜೀವಿಗಳು, ಫ್ಲೆಕ್ಸ್‌ನಲ್ಲಿ ಚಿತ್ರ ತಪ್ಪಾಗಿ ಮುದ್ರಣಗೊಂಡಿರುವುದನ್ನು ಗಮನಿಸಿ, ತಾಲೂಕು ಆಡಳಿತದ ಗಮನಕ್ಕೆ ತಂದಿದ್ದಾರೆ.

ಆಗ ಫ್ಲೆಕ್ಸ್‌ ತರಾತುರಿಯಲ್ಲಿ ತೆರವುಗೊಳಿಸಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ನಿಗದಿ ಆಗಿತ್ತು. ಆದರೆ, 11.30 ಆದ್ರೂ ಕಾರ್ಯಕ್ರಮ ಆರಂಭಗೊಳ್ಳಲಿಲ್ಲ ಮತ್ತು ಶಾಸಕರು ಕಾರ್ಯಕ್ರಮಕ್ಕೆ ಆಗಮಿಸಿದೇ ಇರುವುದರಿಂದ ಕುಪಿತರಾದ ಸಮುದಾಯದ ಮುಖಂಡರು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿ ಕಾರ್ಯಕ್ರಮದಿಂದ ಹೊರ ಹೋಗಲು ನಿರ್ಧರಿಸಿದರು. ಶಾಸಕರ ಆಗಮನಕ್ಕಾಗಿ ತಾಲೂಕು ಆಡಳಿತ ಕಾದು ಕುಳಿತು ಕೆಂಪೇಗೌಡರಿಗೆ ಮತ್ತು ತಾಲೂಕಿನ ಜನತೆ ಅಪಮಾನಿಸುವುದು ತರವಲ್ಲ, ಶಾಸಕರು ಯಾವ ಸಮಾರಂಭಗಳಿಗೂ ನಿಗದಿತ ವೇಳೆಗೆ ಆಗಮಿಸುವುದೇ ಇಲ್ಲ. ಹೀಗಾಗಿ ಕಾರ್ಯಕ್ರಮ ಮುಂದುವರಿಸಲು ಸಭಿಕರು ಒತ್ತಾಯಿಸಿದರು.

ಈ ವೇಳೆ ತಹಶೀಲ್ದಾರ್‌, ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ತಹಶೀಲ್ದಾರ್‌ ಎಲ್ಲರನ್ನು ಸಮಾಧಾನ ಪಡಿಸಿ, 11.30ಕ್ಕೆ ಶಾಸಕ ಅನಿಲ್‌ ಚಿಕ್ಕಮಾದು ಅವರ ಗೈರು ಹಾಜರಿಯಲ್ಲಿ ಕಾರ್ಯಕ್ರಮ ಆರಂಭಿಸಿದರು. ಮಧ್ಯಾಹ್ನ 12.20ಕ್ಕೆ ಆಗಮಿಸಿದ ಶಾಸಕರು, ವೇದಿಯಲ್ಲಿರಿಸಿದ್ದ ಚಿತ್ರಪಟಕ್ಕೆ ಪುಷ್ಪಾರ್ಚನೆ ಮಾಡಿದರು.

ಬಳಿಕ ಮಾತನಾಡಿದ ಅನಿಲ್‌ ಚಿಕ್ಕಮಾದು, ಕೆಂಪೇಗೌಡರು ಬೆಂಗಳೂರು ನಿರ್ಮಾಣಕ್ಕೆ ನೀಡಿದ ಕೊಡುಗೆ, ಕೆರೆಕಟ್ಟೆಗಳನ್ನು ನಿರ್ಮಿಸಿ ನೀರಿನ ಸಮಸ್ಯೆ ಬಗೆಹರಿಸಿದನ್ನು ಸ್ಮರಿಸಿದರು. ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವೆಂಕಟೇಶ್‌, ಕೃಷ್ಣೇಗೌಡ, ಯಡತೊರೆ ಮಹೇಶ, ರಾಜೇಂದ್ರ, ಎಚ್‌.ಬಿ.ನರಸಿಂಹೇಗೌಡ, ಜಯಪ್ರಕಾಶ್‌, ರೈತ ಸಂಘದ ನಾಗರಾಜು ಮೊದಲಾದವರು ಉಪಸ್ಥಿತರಿದ್ದರು.

ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ 11.30ಗಂಟೆಗೆ ನಾನು ಆಗಮಿಸುತ್ತೇನೆ. ಕಾರ್ಯಕ್ರಮ ಪ್ರಾರಂಭಿಸಿ ನಂತರ ಬಂದು ಪಾಲ್ಗೊಳ್ಳುತ್ತೇನೆಂದು ತಹಶೀಲ್ದಾರ್‌ಗೆ ತಿಳಿಸಿದ್ದೆ. ಅದಂತೆಯೇ ಕೊಂಚ ತಡವಾಗಿ ಆಗಮಿಸಿದ್ದೇನೆ. -ಅನಿಲ್‌ ಚಿಕ್ಕಮಾದು, ಶಾಸಕ.

ಅಕ್ರಮ, ಸಕ್ರಮ ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿಸಿಕೊಳ್ಳ ಬೇಕಿತ್ತು. ನನ್ನ ಕಚೇರಿ ಸಿಬ್ಬಂ ದಿಗೆ ಕೆಂಪೇಗೌಡರ ಫ್ಲೆಕ್ಸ್‌ ಮಾಡಿಸಲು ಸೂಚನೆ ನೀಡಿದ್ದೆ. ಅವರು ತಪ್ಪು ಗ್ರಹಿಕೆಯಿಂದ ಕೆಂಪೇಗೌಡರ ಜಯಂತಿ ಫ್ಲೆಕ್ಸ್‌ನಲ್ಲಿ ವೀರ ಮದಕರಿನಾಯಕರ ಚಿತ್ರ ಮುದ್ರಣ ಗೊಂಡಿದೆ. ಸಿಬ್ಬಂದಿಗೆ ನೋಟಿಸ್‌ ಜಾರಿ ಮಾಡಿದ್ದೇನೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸುತ್ತೇನೆ. – ರತ್ನಂಬಿಕಾ ತಹಶೀಲ್ದಾರ್‌

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.