ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ


Team Udayavani, Jun 28, 2022, 4:07 PM IST

ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ ಮಾಡುವುದರ ಹಿಂದಿನ ಹುನ್ನಾರ ಏನು ಎಂದು ಪ್ರಶ್ನಿಸಿದ್ದಾರೆ.

ಮಾಸಿಕ 100 ಯುನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ; ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:ಭೂ ಪರಿಹಾರ ನೀಡಲು ನಿರ್ಲಕ್ಷ್ಯ: ಉಪವಿಭಾಗಾಧಿಕಾರಿ ವಾಹನ ಜಪ್ತಿ

ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ ಎಂದು ಹೆಚ್ ಡಿಕೆ ಟೀಕಿಸಿದ್ದಾರೆ.

ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ ಎಂದು ಸರ್ಕಾರವನ್ನು ಕುಟುಕಿದ್ದಾರೆ.

ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.