ಗ್ರಾಮೀಣ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಸಿದ್ದು ಸವದಿ
Team Udayavani, Jun 28, 2022, 7:16 PM IST
ರಬಕವಿ-ಬನಹಟ್ಟಿ: ಗ್ರಾಮೀಣ ಪ್ರದೇಶದ ಮಕ್ಕಳು ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಮತ್ತು ಅವರು ತಮ್ಮ ಗ್ರಾಮದಲ್ಲಿಯೇ ಉನ್ನತ ಶಿಕ್ಷಣ ಕಲಿಯುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಅವರು ಸಮೀಪದ ನಾವಲಗಿ ಗ್ರಾಮದಲ್ಲಿ ರೂ. 2 ಕೋಟಿ ಮೊತ್ತದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿರುವ ಶಾಲಾ ಕಾಲೇಜುಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸುವುದರ ಜೊತೆಗೆ ಅವುಗಳಿಗೆ ಬೇಕಾಗುವ ಮೂಲ ಸೌಕರ್ಯಗಳನ್ನು ಕೂಡಾ ನೀಡಲಾಗುವುದು. ಶಾಲಾ ಕಾಲೇಜುಗಳಲ್ಲಿಯ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಶಾಸಕರ ಗಮನಕ್ಕೆ ತರಬೇಕು. ಶಾಲಾ ಕಾಲೇಜುಗಳ ಅಭಿವೃದ್ಧಿಯಲ್ಲಿ ಶಾಲಾ ಅಭಿವೃದ್ಧಿ ಮಂಡಳಿ, ಶಿಕ್ಷಕರ, ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಪಾತ್ರ ಕೂಡಾ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವಂತಾಗಲಿ ಎಂದು ಶಾಸಕ ಸವದಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಲೇಜು ಪ್ರಾಚಾರ್ಯ ಶರತ್ಚಂದ್ರ ಜಂಬಗಿ ಮಾತನಾಡಿ, ಕಾಲೇಜು ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಮತ್ತು ವಿದ್ಯಾರ್ಥಿಗಳ ಸಹಕಾರ ಮುಖ್ಯವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಶಾಸಕರಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಮನವಿ ಪತ್ರ ನೀಡಿದರು.
ಕಾರ್ಯಕ್ರಮದಲ್ಲಿ ಗುರು ಮರಡಿಮಠ ಮಾತನಾಡಿದರು. ವೇದಿಕೆಯ ಮೇಲೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸಪ್ಪ ಬಳವಾಡ, ಉಪಾಧ್ಯಕ್ಷೆ ರಚನಾ ಕಾಂತಿ, ಆನಂದ ಕಂಪು, ಅಲ್ಲಪ್ಪ ಮುಗಳಖೋಡ, ಗೋವಿಂದ ಪಾಟೀಲ, ಮುತ್ತಪ್ಪ ಅಂಗಡಿ, ಶಂಕರ ಧರಿಗೌಡರ, ಈರಪ್ಪ ವಾಲಿ ಸೇರಿದಂತೆ ಅನೇಕರು ಇದ್ದರು.
ಎಂ.ಸಿ. ನರೆಗಲ್ ಸ್ವಾಗತಿಸಿದರು.ಬಿ.ಎಸ್.ಚಲವಾದಿ ನಿರೂಪಿಸಿದರು. ಬಿ.ಬಿ.ಕುಂಬಾರ ವಂದಿಸಿದರು.
ಕಾರ್ಯಕ್ರಮದಲ್ಲಿ ಲಕ್ಷ್ಮಣ ಸವದಿ, ರೇಖಾ ಕಾಂತಿ, ಶಾಂತಾ ಬಿದರಿ, ಮಹಾದೇವಿ ಸಂಗಾನಟ್ಟಿ, ಆರತಿ ಸಂಗಾನಟ್ಟಿ, ಪುಟ್ಟವ್ವ ಭಜಂತ್ರಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್