ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್ ಕಮಿಷನರ್! ವಿಡಿಯೋ ವೈರಲ್
Team Udayavani, Jun 28, 2022, 10:58 PM IST
ಚಿತ್ರದುರ್ಗ: ಹಾಡು ಹೇಳ್ಳೋದು, ಡ್ಯಾನ್ಸ್ ಮಾಡೋ ಮೂಲಕ ಖಾಕಿ ತೊಟ್ಟರೂ ಸ್ವಲ್ಪ ಡಿಫರೆಂಟ್ ಆಗಿರುವ ಮಂಗಳೂರಿನ ಪೊಲೀಸ್ ಕಮಿಷನರ್ ಶಶಿಕುಮಾರ್ ಚಿತ್ರದುರ್ಗದ ಐತಿಹಾಸಿಕ ಏಳು ಸುತ್ತಿನ ಕೋಟೆ ಏರುವ ಮೂಲಕ ಸಾಹಸಕ್ಕೂ ಸೈ ಎಂದು ತೋರಿಸಿದ್ದಾರೆ.
ಚಿತ್ರದುರ್ಗ ಕೋಟೆ ಎಂದರೆ ಥಟ್ಟನೆ ಎಲ್ಲರಿಗೂ ಮಂಕಿ ಮ್ಯಾನ್ ಎಂದೇ ಕರೆಸಿಕೊಳ್ಳುವ ಜ್ಯೋತಿರಾಜ್
( ಕೋತಿರಾಜ್) ನೆನಪಾಗುತ್ತಾರೆ. ಕೋಟೆಯ ಗೋಡೆ, ಬಂಡೆಗಳನ್ನೆಲ್ಲ ಸರಸರನೇ ಏರುವ ಇವರ ಸಾಹಸ ಮೆಚ್ಚದವರಿಲ್ಲ. ಈಗ ಜ್ಯೋತಿರಾಜ್ ಅವರಂತೆಯೇ ಚಿತ್ರದುರ್ಗ ಮೂಲದ ಐಪಿಎಸ್ ಅಧಿಕಾರಿ, ಸದ್ಯ ಮಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕೂಡ ಕೋಟೆಯ ಗೋಡೆ ಏರಿ ಸಾಹಸ ಪ್ರದರ್ಶಿಸಿದ್ದಾರೆ.
ಇದನ್ನೂ ಓದಿ:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಆಕ್ಸಿಜನ್ ಜನರೇಟರ್ ಸ್ಥಾಪನೆ
ಖುದ್ದು ಶಶಿಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ಜ್ಯೋತಿರಾಜ್ ಏರುವ ಗೋಡೆಯನ್ನು ತಾವು ಹತ್ತುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ. “ನಮ್ಮ ಊರು ನಮ್ಮ ಹೆಮ್ಮೆ’, “ನಮ್ಮೂರಿನಲ್ಲಿ ಮತ್ತೊಮ್ಮೆ’ ಎಂಬ ಶೀರ್ಷಿಕೆ ಕೊಡುವ ಮೂಲಕ ಅಭಿಮಾನ ಮೆರೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಶಶಿಕುಮಾರ್ ಬರಿಗೈನಲ್ಲಿ ಯಾವುದೇ ಆಸರೆ ಇಲ್ಲದೆ ಗೋಡೆ ಏರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದಾರೆ. ಐಪಿಎಸ್ ಅ ಧಿಕಾರಿಯ ಸಾಹಸಕ್ಕೆ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ