ಕರಿಯರ್‌ ಕಾರಿಡಾರ್‌ನಲ್ಲಿ ಸೈಟ್‌ಗಳಿಗೆ ಕೋಟಿ ಬೆಲೆ

ಎನ್‌ಆರ್‌ಐಗಳಿಂದ ನಿವೇಶನ ಖರೀದಿ ; ಪಿಜಿಯಾಗಿ 2,000 ಮನೆಗಳ ರೂಪಾಂತರ

Team Udayavani, Jun 29, 2022, 2:12 PM IST

9

ಧಾರವಾಡ: ಕಣ್ಣು ಹಾಯಿಸಿದಷ್ಟು ದೂರ ತಲೆ ಎತ್ತುತ್ತಿರುವ ಹೊಸ ಕಟ್ಟಡಗಳು, ಪ್ರತಿಯೊಂದು ಕಟ್ಟಡಗಳೂ ಪಿ.ಜಿ.(ಪೇಯಿಂಗ್‌ ಗೆಸ್ಟ್‌)ಗೆ ಮೀಸಲು, ಏರುತ್ತಿರುವ ಬಾಡಿಗೆ, ಗಗನಕ್ಕೇರಿದ ರಿಯಲ್‌ ಎಸ್ಟೇಟ್‌, ಕೋಟಿ ರೂ.ಗೆ ತಲುಪಿತು ನಿವೇಶನ ಬೆಲೆ.

ಹೌದು. ವಿದ್ಯಾಕಾಶಿ ಧಾರವಾಡದಲ್ಲಿ ಇದೀಗ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳು ಮಾಡುತ್ತಿರುವ ಸದ್ದಿಗೆ ಅಕ್ಷರಶಃ ಇಲ್ಲಿನ ರಿಯಲ್‌ ಎಸ್ಟೇಟ್‌ನಲ್ಲಿ ಭಾರೀ ಚೇತರಿಕೆ ಉಂಟಾಗಿದ್ದು, ಮೊಟ್ಟ ಮೊದಲ ಬಾರಿಗೆ ಧಾರವಾಡದ ಕರಿಯರ್‌ ಕಾರಿಡಾರ್‌ನಲ್ಲಿನ ಒಂದು ಗುಂಟೆ ನಿವೇಶನವೊಂದು ಕೋಟಿ ರೂ.ಗೆ ಮಾರಾಟವಾಗಿದೆ.

ಅವಳಿ ನಗರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆರ್ಥಿಕ ಹಿಂಜರಿತ ಮತ್ತು ಕೊರೊನಾ ಸೇರಿ ಇನ್ನಿತರೆ ಕಾರಣಗಳಿಂದ ಮಕಾಡೆ ಮಲಗಿದ್ದ ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿ ಮತ್ತೆ ಚೇತರಿಕೆ ಕಾಣಿಸಿಕೊಂಡಿದ್ದು, ಹೊಸ ಬಡಾವಣೆಗಳು ಅಲ್ಲಲ್ಲಿ ತಲೆ ಎತ್ತುತ್ತಿವೆ. ಹುಬ್ಬಳ್ಳಿ ನಗರದಲ್ಲಿ ಅಪಾರ್ಟ್‌ಮೆಂಟ್‌ಗಳು ತಲೆ ಎತ್ತುತ್ತಿದ್ದರೆ, ಧಾರವಾಡದಲ್ಲಿ ಪ್ರತ್ಯೇಕ ನಿವೇಶನ ಮಾರಾಟ ಮತ್ತು ಮನೆಗಳ ನಿರ್ಮಾಣ ಚುರುಕು ಪಡೆದಿದೆ.

ಕಾರಿಡಾರ್‌ನಲ್ಲಿ ಎನ್‌ಆರ್‌ಐಗಳ ಹಣ: ಇಷ್ಟಕ್ಕೂ ಧಾರವಾಡದಲ್ಲಿನ ಕರಿಯರ್‌ ಕಾರಿಡಾರ್‌ ರಸ್ತೆ ಕಳೆದ ಎರಡು ವರ್ಷಗಳಲ್ಲಿ ಭರಪೂರ ಬೃಹತ್‌ ನಗರಗಳ ಮಾದರಿಯಂತೆ ಜನಸಂದಣಿ ಮತ್ತು ಜನಾಕರ್ಷಣೆ ತಾಣದಂತೆ ಬದಲಾಗುತ್ತಿದ್ದು, ಹೈಟೆಕ್‌ ಹೊಟೇಲ್‌ಗ‌ಳು, ತಿಂಡಿ, ತಿನಿಸಿನ ಅಂಗಡಿ, ಫ್ಯಾಶನ್‌ ಬಟ್ಟೆಗಳ ಮಹಲ್‌ಗ‌ಳು, ಬೀದಿ ಬದಿ ವ್ಯಾಪಾರವೂ ಚುರುಕು ಪಡೆದಿದೆ.

ಇಲ್ಲಿನ ಕರ್ನಾಟಕ ಕಲಾ ಮಹಾವಿದ್ಯಾಲಯದಿಂದ ಹಿಡಿದು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಹೊಂದಿಕೊಂಡಿರುವ ಶ್ರೀನಗರ (ಬಸವೇಶ್ವರ ಕ್ರಾಸ್‌)ದವರೆಗೂ ಮಾತ್ರ ಸೀಮಿತವಾಗಿದ್ದ ಕರಿಯರ್‌ ಅಕಾಡೆಮಿಗಳು ಗಣೇಶ ನಗರದ ಅಕ್ಕಮಹಾದೇವಿ ಆಶ್ರಮದವರೆಗೂ ವಿಸ್ತರಣೆಗೊಂಡಿವೆ. ಅಷ್ಟೇಯಲ್ಲ ಇದೀಗ ಹೊಯ್ಸಳ ನಗರದವರೆಗೂ ಎಲ್ಲಿ ನೋಡಿದರೂ ಅಲ್ಲಿ ಪಿ.ಜಿ.ಗಳು ತಲೆ ಎತ್ತುತ್ತಿದ್ದು, ದೊಡ್ಡ ಪ್ರಮಾಣದ ಲಾಭ ಗಳಿಕೆ ಆರಂಭವಾಗಿದೆ. ಇದು ವಿದೇಶಗಳಲ್ಲಿ ಕೆಲಸದಲ್ಲಿರುವ ಎನ್‌ಆರ್‌ಐಗಳು ತಮ್ಮ ಹಣ ಹೂಡಿಕೆಗೆ ಪ್ರಶಸ್ತಿ ಸಮಯ ಮತ್ತು ಜಾಗ ಎಂದೇ ಬಿಂಬಿತವಾಗಿದ್ದು, ಎನ್‌ಆರ್‌ಐಗಳು ಅತ್ಯಧಿಕ ಮೊತ್ತದ ಹಣ ನೀಡಿ ನಿವೇಶನ, ಹಳೆಯ ಮನೆಗಳು ಮತ್ತು ಸಿದ್ಧಗೊಂಡಿರುವ ಕಾಂಪ್ಲೆಕ್ಸ್‌ಗಳನ್ನೇ ಕೊಂಡುಕೊಳ್ಳುತ್ತಿದ್ದಾರೆ.

ನಿಧಾನಕ್ಕೆ ಹೆಡೆ ಎತ್ತಿರುವ ರೌಡಿಸಂ

ಇನ್ನು ಹಣದ ಹಿಂದೆ ಅಪರಾಧ ಜಗತ್ತಿನ ಚಟುವಟಿಕೆಗಳು ನಿಧಾನಕ್ಕೆ ಗೋಚರವಾಗುತ್ತಿದ್ದು, ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಮತ್ತು ಪುಡಿ ರೌಡಿಗಳ ಕೃತ್ಯಗಳು ಅಲ್ಲಲ್ಲಿ ನಡೆಯುತ್ತಿವೆ. ಅಷ್ಟೇಯಲ್ಲ, ಎನ್‌ಆರ್‌ಐಗಳು ಮತ್ತು ಸ್ಥಳೀಯ ಭೂ ಮಾಲೀಕರ ಮಧ್ಯದ ಮೇಟಿಯಾಗಿ ಕೆಲಸ ಮಾಡುತ್ತಿರುವ ರಿಯಲ್‌ ಎಸ್ಟೇಟ್‌ ಕುಳಗಳು ಭಾರಿ ಹಣ ಸಂಪಾದನೆಯಲ್ಲೂ ತೊಡಗಿದ್ದಾರೆ. ಕೆಲವು ವಾಜ್ಯದ ಜಮೀನುಗಳಿಗೂ ರೌಡಿಗಳು ಕೈ ಹಾಕಿದ್ದು, ವ್ಯಾಜ್ಯ ಕೋರ್ಟ್‌ಗಳಲ್ಲಿದ್ದರೂ ಹಣ ನೀಡಿ ಹೊಂದಾಣಿಕೆ ಮತ್ತು ರಾಜೀ ಮಾಡಿಸಿ ಲಾಭ ಪಡೆಯುತ್ತಿದ್ದಾರೆ.

ಜೋರಾದ ವ್ಯಾಪಾರ

ಸಪ್ತಾಪೂರ, ಚೆನ್ನಬಸವೇಶ್ವರ ನಗರ, ಶ್ರೀನಗರ, ಬಸವ ನಗರ ಭಾಗ-1 ಮತ್ತು 2, ಜಲದರ್ಶಿನಿ ಬಡಾವಣೆ, ರಾಧಾಕೃಷ್ಣ ನಗರದಲ್ಲಂತೂ ಇದೀಗ ಪ್ರತಿ ನಿವೇಶನಗಳ ಬೆಲೆ ಕೋಟಿ ಸಮೀಪ ಬಂದಾಗಿದೆ. ಅದರಲ್ಲೂ ಕರಿಯರ್‌ ಅಕಾಡೆಮಿಗಳ ಕಾರಿಡಾರ್‌ ಎಂದೇ ಬಿಂಬಿತವಾಗಿರುವ ಅರಟಾಳು ರುದ್ರಗೌಡ ರಸ್ತೆ ಇದೀಗ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯ ಸ್ವರೂಪ ಪಡೆದಿದ್ದು ಇಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಹೀಗಾಗಿ ಹೊಟೇಲ್‌,ತಿಂಡಿ ಅಂಗಡಿ, ಖಾಸಗಿ ಗ್ರಂಥಾಲಯ,ದಿನಸಿ ಅಂಗಡಿ, ಹೊರ ರಾಜ್ಯಗಳ ತಿಂಡಿ ಅಂಗಡಿಗಳು ವಿಪರೀತ ಪ್ರಮಾಣದಲ್ಲಿ ತಲೆ ಎತ್ತುತ್ತಿವೆ. ಅಷ್ಟೇಯಲ್ಲ ಇದೀಗ ಹೊಟೇಲ್‌ ಗುಚ್ಚಗಳೇ ಎಲೆ ಎತ್ತಿದ್ದು, ಒಂದೇ ಸೂರಿನಡಿ ವಿವಿಧ ಜಿಲ್ಲಾವಾರು, ರಾಜ್ಯವಾರು ತಿಂಡಿ ತಿನಿಸು ಲಭ್ಯವಾಗುವಂತಾಗಿದೆ.

ಮೂಲಸೌಕರ್ಯ ಅಷ್ಟಕ್ಕಷ್ಟೇ

ಕೆ.ಸಿ.ಡಿ.ವೃತ್ತ ಮತ್ತು ಸಪ್ತಾಪೂರದಿಂದ ಹಿಡಿದು ಭಾರತಿನಗರ, ರಾಣಿ ಚೆನ್ನಮ್ಮ ನಗರ, ಮಿಚಿಗನ್‌ ಕಾಂಪೌಂಡ್‌, ಶಿವಗಿರಿ, ಚೆನ್ನಬಸವೇಶ್ವರ ನಗರ ಸೇರಿ ಕರ್ನಾಟಕ ವಿಶ್ವವಿದ್ಯಾಲಯ ಸೇರಿಕೊಂಡು ಧಾರವಾಡದ ಪಶ್ಚಿಮ ಭಾಗವೆಲ್ಲವೂ ಇದೀಗ ಕರಿಯರ್‌ ಕಾರಿಡಾರ್‌ ಆಗಿ ರೂಪುಗೊಳ್ಳುತ್ತಿದೆ. ಇಲ್ಲಿನ ಪ್ರತಿಯೊಂದು ಮನೆಯೂ ಪಿಜಿಯಾಗಿ ಪರಿವರ್ತಿತವಾಗುತ್ತಿವೆ. ಒಂದೊಂದು ಮನೆಯಲ್ಲಿ 20-30 ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯರು ವಾಸವಾಗಿದ್ದಾರೆ. ಆದರೆ ಅವರಿಗೆ ಅಗತ್ಯ ಮೂಲ ಸೌಕರ್ಯಗಳು ಸೇರಿದಂತೆ ಸೂಕ್ತ ರಕ್ಷಣೆ ಲಭಿಸುತ್ತಿಲ್ಲ.

ಧಾರವಾಡದಲ್ಲಿ 2300ಕ್ಕೂ ಅಧಿಕ ಪಿ.ಜಿ.ಗಳಿದ್ದು, ಇವುಗಳು ಮೂಲಸೌಕರ್ಯದ ವಿಚಾರದಲ್ಲಿ ಕಾನೂನು ಅನ್ವಯ ಕಾರ್ಯಪಾಲನೆ ಮಾಡಬೇಕಾಗುತ್ತದೆ. ತೆರಿಗೆಯನ್ನು ಸರಿಯಾಗಿ ತುಂಬದೇ ಇರುವ ಎರಡು ಸಾವಿರಕ್ಕೂ ಅಧಿಕ ಪಿ.ಜಿ.ಗಳಿಗೆ ನೋಟಿಸ್‌ ನೀಡಲಾಗಿದೆ. –ಈರೇಶ ಅಂಚಟಗೇರಿ, ಮಹಾಪೌರರು,ಹು-ಧಾ. ಮಹಾನಗರ ಪಾಲಿಕೆ

ಮೂರು ಕೋಟಿ ರೂ. ಕೊಟ್ಟು ಬಸವ ನಗರದಲ್ಲಿ ಹಳಿಯಾಳ ರಸ್ತೆಗೆ ಹೊಂದಿಕೊಂಡ ನಿವೇಶನ ಮತ್ತು ಹಳೆಯ ಕಟ್ಟಡದ ಜಾಗ ಕೊಂಡುಕೊಂಡಿದ್ದೇನೆ. ಇಲ್ಲಿ ಭವ್ಯವಾದ ಪಿ.ಜಿ.ನಿರ್ಮಿಸುವ ಕನಸಿದೆ. ಕೆಳಮಹಡಿಯಲ್ಲಿ ಅಂಗಡಿ ಸಾಲುಗಳನ್ನು ನಿರ್ಮಿಸುತ್ತಿದ್ದೇನೆ.  –ಲಿಂಗರಾಜ್‌ ಪಾಟೀಲ, ಎನ್‌ಆರ್‌ಐ (ದುಬೈ ನಿವಾಸಿ)

„ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.