ಗಜೇಂದ್ರಗಡದಲ್ಲಿ ಹಲಸಿನ ಹಣ್ಣಿನ ಘಮ!
ವಾಣಿಜ್ಯ ನಗರಕ್ಕೆ ಲಗ್ಗೆ ;ಇದರ ಪರಿಮಳಕ್ಕೆ ಮನ ಸೋಲದವರಿಲ್ಲ ;ಗಾತ್ರಕ್ಕೆ ತಕ್ಕಂತೆ ದರ
Team Udayavani, Jun 29, 2022, 3:55 PM IST
ಗಜೇಂದ್ರಗಡ: ವಾಣಿಜ್ಯ ನಗರಿ ಗಜೇಂದ್ರಗಡಕ್ಕೆ ಈಗ ಹಲಸು ಲಗ್ಗೆ ಇಟ್ಟಿದ್ದು, ಪರಿಮಳ ಸೂಸುತ್ತಾ ದಾರಿ ಹೋಕರ ಗಮನ ಸೆಳೆಯುತ್ತಿದೆ. ಪಟ್ಟಣದ ರಸ್ತೆ ಬದಿಯಲ್ಲಿ ಇದರ ಮಾರಾಟ ಜೋರಾಗಿ ನಡೆಯುತ್ತಿದೆ.
ಶಿವಮೊಗ್ಗ, ಶಿಕಾರಿಪುರ, ಸಾಗರ, ಶಿರಸಿ ಕಡೆ ಇದನ್ನು ಬೆಳೆಯುತ್ತಿದ್ದು,ಅಲ್ಲಿಯ ಬೆಳೆಗಾರರು ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಇದನ್ನು ಮಾರಾಟ ಮಾಡುತ್ತಾರೆ. ಪಟ್ಟಣದ ಮಾರಾಟಗಾರರು ಅಲ್ಲಿಂದ ತಂದು ಗಾತ್ರಕ್ಕೆ ತಕ್ಕಂತೆ ಮಾರುತ್ತಾರೆ. ಸಣ್ಣ ಗಾತ್ರದ ಹಣ್ಣಿಗೆ 150 ರೂ, ದೊಡ್ಡ ಗಾತ್ರ 300 ರಿಂದ 500ರ ವರೆಗೆ ಮಾರಾಟ ಆಗುತ್ತವೆ. ಆದರೆ ಇಲ್ಲಿ ಪೂರ್ಣ ಹಣ್ಣುಗಳನ್ನು ಖರೀದಿಸದೇ ಇರುವುದರಿಂದ ಒಂದು ಪೀಸ್ ಹಲಸಿನ ಹಣ್ಣಿಗೆ 5 ರೂ.ನಂತೆ ಮಾರುತ್ತಾರೆ. ಹಲಸು ಹಣ್ಣಿನ ಪೀಸ್ ಕೆಜಿಗೆ 100 ರಿಂದ 120ರ ವರೆಗೆ ಮಾರಾಟ ಮಾಡುತ್ತಿದ್ದಾರೆ.
ಹಲಸಿನಿಂದ ಬಗೆಬಗೆಯ ಖಾದ್ಯ: ಬಿಳಿ, ಹಳದಿ, ಹೆಬ್ಬು, ಚಂದ್ರ, ಅಂಬು, ಬಿಳಿ ತೊಳೆ ಹೀಗೆ ಹಲಸಿನಲ್ಲಿ ವಿವಿಧ ತಳಿಗಳಿವೆ. ಹಲಸಿನ ಹಣ್ಣು ತಿನ್ನುವುದಕ್ಕೆ ಅಷ್ಟೆ ಅಲ್ಲ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ. ಚಿಪ್ಸ್, ಹಪ್ಪಳ, ದೋಸೆ, ಪಾನಕ, ಕೇಸರಿಬಾತ್, ಪಾಯಸ, ಕಡುಬು, ಸಿರಾ, ಹಲ್ವಾ, ಪಕೋಡ ಸೇರಿದಂತೆ ವಿವಿಧ ಬಗೆ ಖಾದ್ಯಗಳನ್ನು ತಯಾರಿಸುತ್ತಾರೆ. ಹಲಸಿನ ಕಾಯಿಯಿಂದ ಪಲ್ಯ ಸಹ ಮಾಡುತ್ತಾರೆ. ಹಲಸಿನ ಹಣ್ಣಿನ ಬೀಜ ಸುಟ್ಟುಕೊಂಡು ಹಾಗೂ ಸಾರು ಮಾಡುತ್ತಾರೆ.
ಜುಲೈನಲ್ಲಿ ಸುಗ್ಗಿ ಮುಕ್ತಾಯ: ಡಿಸೆಂಬರ್ನಲ್ಲಿ ಆರಂಭಗೊಳ್ಳುವ ಹಲಸಿನ ಸುಗ್ಗಿ ಜುಲೈನಲ್ಲಿ ಮುಕ್ತಾಯಗೊಳ್ಳುತ್ತದೆ.ಹಲಸಿನ ಹಣ್ಣನ್ನು ಹಸಿದು ತಿಂದರೆ ಚೆನ್ನ. ಹಲಸಿನ ಹಣ್ಣಿನ ರಸಾಯನ ಚಪ್ಪರಿಸಿಕೊಂಡು ತಿಂದರೆ ಅದರ ರುಚಿಯೇ ಬೇರೆ. ಮಾರುಕಟ್ಟೆಗಳಿಗಿಂತ ನಗರ, ಪಟ್ಟಣ, ಹೆದ್ದಾರಿ ಹಾಗೂ ರಸ್ತೆ ಬದಿಯಲ್ಲಿ ಹಲಸಿನ ಹಣ್ಣಿನ ವ್ಯಾಪಾರ ಬಲು ಜೋರಾಗಿ ನಡೆಯುತ್ತದೆ. ಹಲಸುಗಳನ್ನು ಬಿಡಿಸಿ, ಒಂದು ಗಾಜಿನ ಡಬ್ಟಾದಲ್ಲಿ ಹಾಕಿ ರಸ್ತೆ ಬದಿಯ ತಳ್ಳುವ ಗಾಡಿಯಲ್ಲಿಟ್ಟುಕೊಂಡು ಮಾರಾಟ ಮಾಡುತ್ತಾರೆ.
ನಿಜವಾದ ಹಣ್ಣುಗಳ ರಾಜ: ಹಣ್ಣುಗಳ ರಾಜ ಮಾವು ಎಂಬುದು ಸಾರ್ವತ್ರಿಕ. ಆದರೆ ನಿಜವಾಗಿ ಗಾತ್ರ, ವಿನ್ಯಾಸ, ಮರ, ರುಚಿ, ಅಡುಗೆ ಹೀಗೆ ಒಂದಿಲ್ಲೊಂದು ಬಳಕೆಗೆ ಸಿಗುವ ಹಲಸು ನಿಜವಾದ ಮಹಾರಾಜ. ಈ ಹಣ್ಣು ಗಾತ್ರದಲ್ಲಿ ಹೇಗೆ ದೊಡ್ಡ ಸ್ಥಾನ ಪಡೆದಿದೆಯೋ ಹಾಗೆಯೇ ಆರೋಗ್ಯದ ವಿಚಾರದಲ್ಲೂ ಬಹು ಮಹತ್ತರವಾದ ಪ್ರಯೋಜನಗಳನ್ನು ಒಳಗೊಂಡಿದೆ.
ಈ ಭಾಗದಲ್ಲಿ ಹಲಸು ಹಣ್ಣಿನ ಕಂಡು ಬರುವುದು ಕಡಿಮೆ. ಹೀಗಾಗಿ ಪ್ರತಿ ವರ್ಷ ಬೇರೆ ಊರುಗಳಿಂದ ಹಲಸಿನ ಹಣ್ಣು ತಂದು ಇಲ್ಲಿ ಮಾರಾಟ ಮಾಡುತ್ತಿದ್ದೇವೆ. ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ. ಇಲ್ಲಿನ ಗ್ರಾಹಕರು ಹಲಸಿನ ಹಣ್ಣಿನ ಸವಿ ಸವಿಯುತ್ತಿದ್ದಾರೆ. –ಶಂಕ್ರಪ್ಪ ಪಾತ್ರೋಟಿ, ಹಲಸಿನ ಹಣ್ಣು ವ್ಯಾಪಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ