ಚಲಿಸುತ್ತಿರುವ ತ್ರಿಚಕ್ರ ಸ್ಕೂಟರ್ ಮೇಲೆ ವಿದ್ಯುತ್ ಕಂಬ, ಮರದ ಗೆಲ್ಲು ಬಿದ್ದು ಸವಾರನಿಗೆ ಗಾಯ
Team Udayavani, Jun 30, 2022, 2:42 PM IST
ಬಂಟ್ವಾಳ: ಚಲಿಸುತ್ತಿರುವ ತ್ರಿಚಕ್ರ ಸ್ಕೂಟರ್ ಮೇಲೆ ವಿದ್ಯುತ್ ಕಂಬ ಹಾಗೂ ಮರದ ಗೆಲ್ಲು ಬಿದ್ದ ಪರಿಣಾಮ ಸವಾರನಿಗೆ ಗಾಯವಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಸ್.ವಿ.ಎಸ್. ಕಾಲೇಜು ಸಮೀಪ ಜೂನ್ 29 ರಂದು ಬುಧವಾರ ಸಂಜೆ ವೇಳೆ ನಡೆದಿದೆ.
ಘಟನೆಯಲ್ಲಿ ವಿಕಲಾಂಗ ಗೋಳಿಪಡ್ಪು ನಿವಾಸಿ ಇಸ್ಮಾಯಿಲ್ ಅವರಿಗೆ ಗಾಯವಾಗಿದೆ.
ಎಸ್.ವಿ.ಎಸ್.ಕಾಲೇಜು ಸಮೀಪ ರಸ್ತೆಯಲ್ಲಿ ಹೋಗುತ್ತಿರುವ ಸಮಯ ಈ ಘಟನೆ ಸಂಭವಿಸಿದೆ.
ನಿನ್ನೆಯಿಂದ ಸುರಿಯುವ ಗಾಳಿ ಮಳೆಗೆ ಮರದ ಗೆಲ್ಲು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮವಾಗಿ ಮರದ ಗೆಲ್ಲು ಹಾಗೂ ವಿದ್ಯುತ್ ಕಂಬ ಎರಡು ಒಟ್ಟಿಗೆ ರಸ್ತೆಗೆ ಉರುಳಿ ಬಿದ್ದಿದೆ. ಇದೇ ಸಂದರ್ಭದಲ್ಲಿ ಸಂಚಾರ ಮಾಡುತ್ತಿದ್ದ ಇಸ್ಮಾಯಿಲ್ ಅವರ ವಾಹನದ ಮೇಲೆ ಬಿದ್ದು, ವಾಹನ ಜಖಂಗೊಂಡರೆ ಇಸ್ಮಾಯಿಲ್ ಗೆ ಗಾಯವಾಗಿದೆ.
ಗಾಯಗೊಂಡ ಇಸ್ಮಾಯಿಲ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು