ನಿಗದಿತ ಅವಧಿಯಲ್ಲಿ ಜನನ, ಮರಣ ಪತ್ರ ನೀಡಿ; ಡೀಸಿ ಆರ್‌.ಲತಾ

ಈ ನಿಯಮ ಉಲ್ಲಂಘಿಸುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು

Team Udayavani, Jun 30, 2022, 5:37 PM IST

ನಿಗದಿತ ಅವಧಿಯಲ್ಲಿ ಜನನ, ಮರಣ ಪತ್ರ ನೀಡಿ; ಡೀಸಿ ಆರ್‌.ಲತಾ

ಚಿಕ್ಕಬಳ್ಳಾಪುರ: ಜನನ ಮತ್ತು ಮರಣ ಪ್ರಕರಣಗಳ ನೋಂದಣಿಯು ನಿಗದಿತ ಕಾಲಮಿತಿ ಯೊಳಗೆ ನಿಗದಿತ ತಂತ್ರಾಂಶಗಳಲ್ಲಿ ನೋಂದಣಿ ಯಾಗಿ ಪ್ರಮಾಣ ಪತ್ರಗಳು ಸಮರ್ಪಕವಾಗಿ ಕಾಲಮಿತಿಯೊಳಗೆ ವಿತರಿಸುವ ಸುವ್ಯವಸ್ಥೆ ಆಗಬೇಕು. ಆ ನಿಟ್ಟಿನಲ್ಲಿ ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ನೋಂದಣಿ ಮಾಡುವ ಸಕ್ಷಮ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ವೈಖರಿ ಪರಿಶೀಲಿಸಿ, ಕಾಲ ಕಾಲಕ್ಕೆ ವರದಿ ನೀಡಬೇಕು ಎಂದು ಡೀಸಿ ಆರ್‌.ಲತಾ ಜಿಲ್ಲಾ ಸಾಂಖ್ಯಿಕ
ನೋಂದಣಾಧಿಕಾರಿಗೆ ಸೂಚನೆ ನೀಡಿದರು.

ಬುಧವಾರ ಡೀಸಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನನ, ಮರಣ ನೋಂದಣಿಯ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಘಟಿಸುವ ಜನನ, ಮರಣ ಪ್ರಕರಣಗಳನ್ನು ಸಂಬಂಧಪಟ್ಟ ತಂತ್ರಾಂಶಗಳಲ್ಲಿ ನಮೂದಿಸಿ, ಸ್ಥಳೀಯಾಡಳಿತ ಸಂಸ್ಥೆಗಳಿಗೆ ಆನ್‌ಲೈನ್‌ ಮೂಲಕ ವಿವರ ರವಾನಿಸಬೇಕು. ಸದರಿ ವಿವರವನ್ನು ಸ್ಥಳೀಯ ಆಡಳಿತ ಸಂಸ್ಥೆಗಳ ಸಂಬಂಧಪಟ್ಟ ಅಧಿಕಾರಿ, ಗ್ರಾಮಲೆಕ್ಕಿಗರು ಪರಿಶೀಲಿಸಿ ಪ್ರಮಾಣ ಪತ್ರಗಳನ್ನು ನಿಗದಿತ ಕಾಲ ಮಿತಿಯೊಳಗೆ ವಿತರಿಸಬೇಕು ಎಂದರು.

ಸಮರ್ಪಕವಾಗಿ ಕೆಲಸ ನಿರ್ವಹಿಸಿ: ಆಸ್ಪತ್ರೆ ಗಳನ್ನು ಹೊರತುಪಡಿಸಿ ಘಟಿಸುವ ಜನನ, ಮರಣ ಪ್ರಕರಣಗಳನ್ನು ಸ್ಥಳೀಯ ಆಡಳಿತದ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ತಮ್ಮ ಕಾರ್ಯವ್ಯಾಪ್ತಿಯ ಘಟನೆಗಳ ಮಾಹಿತಿ ಪಡೆದು ಪರಿಶೀಲಿಸಿ, ತಂತ್ರಾಂಶದಲ್ಲಿ ನೋಂದಣಿ ಜೊತೆಗೆ ಪ್ರಮಾಣ ಪತ್ರ ವಿತರಿಸುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ನಮೂದು ಪ್ರಕ್ರಿಯೆ ಮೇಲೆ ನಿಗಾವಹಿಸಬೇಕು.ಈ ಎಲ್ಲಾ ಕಾರ್ಯಗಳ ಉಸ್ತುವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಮಹಾಲನೋಬಿಸ್‌ ಮಹಾನ್‌ ಸಂಖ್ಯಾಶಾಸ್ತ್ರಜ್ಞ: ಜಿಪಂ ಯೋಜನಾ ನಿರ್ದೇಶಕಿ ಧನುರೇಣುಕ ಮಾತನಾಡಿ, ಮಹಾಲನೋಬಿಸ್‌ ಅವರು ಭಾರತ ಕಂಡ ಮಹಾನ್‌ ಸಂಖ್ಯಾಶಾಸ್ತ್ರಜ್ಞರಾಗಿದ್ದರು. ಸ್ವಾತಂತ್ರ ಭಾರತದ ಪ್ರಥಮ ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇಂಡಿಯನ್‌ ಸ್ಟ್ಯಾಟಿಸ್ಟಿಕಲ್‌ ಇನ್ಸಿಟ್ಯೂಟ್‌ ಸ್ಥಾಪನೆ ಮಾಡಿ, ದೊಡ್ಡ ಪ್ರಮಾಣದ ಮಾದರಿ ಸಮೀಕ್ಷೆಗಳ ವಿನ್ಯಾಸಗಳ ಬಗ್ಗೆ, ಕೃಷಿ ಕ್ಷೇತ್ರದಲ್ಲಿ ಬೆಳೆ ಇಳುವರಿ ಅಂದಾಜು ಪದ್ಧತಿ, ಬೆಳೆ ಸಮೀಕ್ಷೆ, ಬೆಳೆ ಕಟಾವು ಪ್ರಯೋಗಳ ಕುರಿತು ವೈಜ್ಞಾನಿಕ ತಿಳುವಳಿಕೆ ನೀಡಿದ್ದರು. 2ನೇ ಪಂಚವಾರ್ಷಿಕ ಯೋಜನೆಗೆ ಅವರ ಪಾತ್ರ ಪ್ರಮುಖವಾಗಿತ್ತು. ಇವರ ಸೇವೆಯನ್ನು ಗುರ್ತಿಸಿದ ಭಾರತ ಸರ್ಕಾರ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಇವರ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆಯ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಯೋಜನಾ ಪಟ್ಟಿ ಬಿಡುಗಡೆ: ಸಭೆಯಲ್ಲಿ 2020-21ನೇ ಸಾಲಿನ ಜಿಲ್ಲಾ ಅಂಕಿ-ಅಂಶಗಳ ನೋಟ ಹಾಗೂ ಸಾಮಾಜಿಕ ಮತ್ತು ಆರ್ಥಿಕ ಅವಲೋಕನ ಪುಸ್ತಕವನ್ನು ಹಾಗೂ 2022-23ನೇ ಸಾಲಿನ ಪ್ರಧಾನ ಮಂತ್ರಿ ಫಸಲ್‌ ಭಿಮಾ ಯೋಜನೆಯ ಬೆಳೆ ಅಂದಾಜು ಸಮೀಕ್ಷೆಯ ಕಾರ್ಯಯೋಜನಾ ಪಟ್ಟಿ ಬಿಡುಗಡೆಗೊಳಿಸಿದರು. ಪ್ರೊ.ಪಿ.ಸಿ. ಮಹಾಲನೋಬಿಸ್‌ ಜನ್ಮದಿನಾಚರಣೆ, 16ನೇ ವರ್ಷದ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ ಅಂಗವಾಗಿ ಪ್ರೊ.ಪಿ.ಸಿ.ಮಹಾಲನೋಬಿಸ್‌ ಭಾವಚಿತ್ರಕ್ಕೆ ಡೀಸಿ ಪುಷ್ಪನಮನ ಸಲ್ಲಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಪಿ.ಶಿವಶಂಕರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎಸ್‌.ಮಹೇಶ್‌ ಕುಮಾರ್‌, ಜಿಲ್ಲಾ ಅಪರ ಜನನ, ಮರಣ ನೋಂದಣಾಧಿಕಾರಿ ಪ್ರಕಾಶ್‌ ರಾಯ್ಕರ್‌, ಸಹಾಯಕ ನಿರ್ದೇಶಕ ಶಿವಕುಮಾರ್‌ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.