ಆಟೋ ರಿಕ್ಷಾ ಓಡಿಸುತ್ತಿದ್ದ ಶಿಂಧೆ ಮಹಾ ಗಾದಿಗೆ ಏರಿದ್ದು ಹೇಗೆ ?

ಜೀವನದಲ್ಲಿ ನೊಂದು ಮಾನಸಿಕ ಖಿನ್ನತೆಗೆ ಜಾರಿದ್ದ ಮಹಾರಾಷ್ಟ್ರ ಸಿಎಂ

Team Udayavani, Jun 30, 2022, 8:58 PM IST

1-gfdg

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಯವರು ಸತಾರಾದ ಜಾವಲಿ ತಾಲೂಕಿನವರುವರು. ಅವರ ಕುಟುಂಬ ಜೀವನೋಪಾಯಕ್ಕಾಗಿ ಥಾಣೆಗೆ ಸ್ಥಳಾಂತರಗೊಂಡಿತ್ತು. ಏಕನಾಥ್ ಅವರು ಥಾಣೆಯ ಮಂಗಳಾ ಹೈಸ್ಕೂಲ್ ಮತ್ತು ಜೂನಿಯರ್ ಕಾಲೇಜಿನಲ್ಲಿ ಓದಿದ್ದಾರೆ.ಅವರು ತಮ್ಮ ಕುಟುಂಬವನ್ನು ಪೋಷಿಸಲು ಆಟೋರಿಕ್ಷಾವನ್ನು ಓಡಿಸುತ್ತಿದ್ದರು ಎನ್ನುವುದು ವಿಶೇಷವಾಗಿದೆ.

ಶಿವಸೇನೆಯ ಪರಮೋಚ್ಛ ನಾಯಕ ಬಾಳಾ ಸಾಹೇಬ್ ಠಾಕ್ರೆ ಮತ್ತು ಆನಂದ್ ದಿಘೆ ಅವರ ಗರಡಿಯಲ್ಲಿ ಪಳಗಿದ ಶಿಂಧೆ ರಾಜಕೀಯದಲ್ಲಿ ಹಂತ ಹಂತವಾಗಿ ಬಹುಬೇಗ ಉನ್ನತ ಸ್ಥಾನಗಳನ್ನು ಪಡೆದಿದ್ದಾರೆ.

1997ರಲ್ಲಿ ಮೊದಲ ಬಾರಿಗೆ ಥಾಣೆ ಮುನ್ಸಿಪಲ್ ಕಾರ್ಪೊರೇಟರ್ ಆಗಿ ಆಯ್ಕೆಯಾದ ಶಿಂಧೆ ವೇಗದ ರಾಜಕೀಯ ಪ್ರಗತಿ ಸಾಧಿಸಿ 2004 ರಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾದರು. 2019ರ ಗೆಲುವು ಸೇರಿ ಸತತ ನಾಲ್ಕು ಬಾರಿ ವಿಧಾನಸಭೆಗೆ ಚುನಾಯಿತರಾಗಿದ್ದಾರೆ.

2014 ರಾಡು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಅವರು, 2014 – 2019ರ ವರೆಗೆ ರಾಜ್ಯ ಸರ್ಕಾರದಲ್ಲಿ ಲೋಕೋಪಯೋಗಿ ಕ್ಯಾಬಿನೆಟ್ ಸಚಿವರಾಗಿ, 2019ರಲ್ಲಿ ಉದ್ಧವ್ ಠಾಕ್ರೆ ಅವರ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ಸಾರ್ವಜನಿಕ ಕಾರ್ಯಗಳ ಸಚಿವರಾಗಿ, ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ ರಾಜಕೀಯ ಅನುಭವ ಹೊಂದಿದ್ದಾರೆ.

ಕೊಪ್ರಿ ಪಚ್ಪಪಖಾಡಿ ವಿಧಾನಸಭಾ ಕ್ಷೇತ್ರವನ್ನು ನಾಲ್ಕು ಅವಧಿಗೆ ಪ್ರತಿನಿಧಿಸುತ್ತಿರುವ 58 ರ ಹರೆಯದ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಂಡಾಯವೆದ್ದ ಬೆನ್ನಲ್ಲೇ ಬಿಜೆಪಿಯ ಕಡೆಯಿಂದ ರಾಜಕೀಯ ರಣತಂತ್ರದ ಭಾಗವಾಗಿ ಉಡುಗೊರೆಯ ರೂಪದಲ್ಲಿ ಅಚ್ಚರಿಯಾಗಿ ಒಲಿದು ಬಂದಿದೆ.

ಬದುಕಿನಲ್ಲಿ ಮರೆಯಲಾಗದ ನೋವು

2 ಜೂನ್ 2000 ರಂದು ನಡೆದ ದುರಂತ ಶಿಂಧೆಯವರ ಬದುಕಿನಲ್ಲಿ ಎಂದು ಮರೆಯಲಾಗದ ಆಗಾಗ ನೆನಪಾಗುವ ದುರಂತ ದಿನವಾಗಿದೆ. ಅವರ ಮಕ್ಕಳಾದ ದಿಪೇಶ್ (11 ವರ್ಷ) ಮತ್ತು ಶುಭದಾ (7 ವರ್ಷ) ಹಳ್ಳಿಯ ಸಮೀಪವಿರುವ ಸರೋವರದಲ್ಲಿ ದೋಣಿ ವಿಹಾರಕ್ಕೆ ತೆರಳಿದ್ದಾಗ ದೋಣಿ ಮಗುಚಿ ಬಿದ್ದು ಇಬ್ಬರೂ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ದುರಂತದ ಬಳಿಕ ಶಿಂಧೆ ಹಲವು ತಿಂಗಳುಗಳ ಕಾಲ ಖಿನ್ನತೆಗೆ ಒಳಗಾಗಿದ್ದರು. ಶಿವಸೇನೆಯ ಹಿರಿಯ ನಾಯಕ ಆನಂದ್ ದಿಘೆ ಅವರು ಶಿಂಧೆಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಅವರ ಮನಸ್ಸಿನ ನೋವನ್ನು ದೂರ ಮಾಡಲು, ಖಿನ್ನತೆಯಿಂದ ದೂರವಿರಿಸಲು ರಾಜಕೀಯವಾಗಿ ಹೆಚ್ಚು ಕ್ರೀಯಾಶೀಲರನ್ನಾಗಿಸಿದರು.

ನೋವಿನ ಗಳಿಗೆಯಲ್ಲಿ ನನ್ನ ಕುಟುಂಬಕ್ಕೆ ನನ್ನ ಅಗತ್ಯವಿತ್ತು. ಈ ವೇಳೆ ದಿಘೆ ಸಾಹೇಬರು, ‘ಈ ಸಮಾಜಕ್ಕೆ ನಿಮ್ಮ ಅವಶ್ಯಕತೆ ಬಹಳ ಇದೆ. ನಿಮ್ಮ ಕುಟುಂಬ ಅಷ್ಟು ಚಿಕ್ಕದಲ್ಲ, ದೊಡ್ಡ ಕುಟುಂಬ. ನೀವು ಜನರಿಗಾಗಿ ಕೆಲಸ ಮಾಡಲು ಬಯಸುವವರು ಎಂದು ಧೈರ್ಯ ತುಂಬಿದ್ದನ್ನು ಶಿಂಧೆ ಕಾರ್ಯಕ್ರಮವೊದರಲ್ಲಿ ಕಂಬನಿ ಸಹಿತ ಹೇಳಿಕೊಂಡಿದ್ದರು.

ಶಿಂಧೆಯವರ ಇನ್ನೋರ್ವ ಪುತ್ರ ಡಾ. ಶ್ರೀಕಾಂತ್ ಶಿಂಧೆ ಅವರು ಮೂಳೆ ಶಸ್ತ್ರಚಿಕಿತ್ಸಕರಾಗಿದ್ದು, ಅವರು 2014 ರಲ್ಲಿ ಕಲ್ಯಾಣ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದು, 2019 ರಲ್ಲಿ ಮರು ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

hemanth-soren

Arrest ಪ್ರಶ್ನಿಸಿ ಹೇಮಂತ್‌ ಸೊರೇನ್‌ ಸುಪ್ರೀಂ ಮೊರೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.