ಎಲೆಕ್ಟ್ರಿಕ್ ವಾಹನಗಳ ವೆಚ್ಚ ಜನಸಾಮಾನ್ಯರ ಕೈಗೆಟಕುವಂತಿರಬೇಕು: ಬಸವರಾಜ ಬೊಮ್ಮಾಯಿ


Team Udayavani, Jul 1, 2022, 4:28 PM IST

ಎಲೆಕ್ಟ್ರಿಕ್ ವಾಹನಗಳ ವೆಚ್ಚ ಜನಸಾಮಾನ್ಯರ ಕೈಗೆಟಕುವಂತಿರಬೇಕು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಎಲೆಕ್ಟ್ರಿಕ್ ವಾಹನದ ವೆಚ್ಚ ಜನಸಾಮಾನ್ಯರಿಗೆ ನಿಲುಕುವಂತಿರಬೇಕು, ಆಗ ಮಾತ್ರ ಅದರ ಬಳಕೆ ಹೆಚ್ಚಾಗುತ್ತದೆ ಈ ಬಗ್ಗೆ ಉತ್ಪಾದಕರು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಇವಿ (ಎಲೆಕ್ಟ್ರಿಕ್ ವೆಹಿಕಲ್) ಅಭಿಯಾನ 2022 ಕಾರ್ಯಕ್ರಮ ಹಾಗೂ 152 ಇವಿ ಚಾರ್ಜಿಂಗ್ ಸ್ಟೇಷನ್ ಗಳನ್ನು ಉದ್ಘಾಟಿಸಿ ಮಾತನಾಡಿದರು.

ಉತ್ತಮ ಬ್ಯಾಟರಿ ಮತ್ತು ಮೋಟಾರ್ ಅಗತ್ಯವಿದೆ. ಇವುಗಳನ್ನು ಭಾರತದಲ್ಲಿಯೇ ಆತ್ಮನಿರ್ಭರ್ ಭಾರತದಡಿಯಲ್ಲಿ ನಮ್ಮ ಯುವಕರೇ ಉತ್ಪಾದಿಸುತ್ತಿರುವುದು ಹೆಮ್ಮೆಯ ವಿಚಾರ. ಇವಿಗಳಿಗೆ ಅಗತ್ಯವಿರುವ ಚಾರ್ಜರ್‍ ಗಳನ್ನು ನಮ್ಮ ಸರ್ಕಾರ ಇವಿ ಪಾಲಿಸಿ ಮಾಡುವ ಮೂಲಕ  ಬೆಸ್ಕಾಂನ್ನು ನೋಡಲ್ ಏಜೆನ್ಸಿ ಮಾಡಿ  ಬೆಂಗಳೂರಿನಲ್ಲಿ  ಚಾರ್ಜಿಂಗ್ ಸ್ಟೇಷನ್‍ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ. ಇನ್ನು ಹೆಚ್ಚಿನ ಚಾರ್ಜಿಂಗ್ ಸ್ಟೇಷನ್‍ಗಳ ಅವಶ್ಯಕತೆ ಇದೆ. ಅವುಗಳನ್ನು ಬೆಸ್ಕಾಂ ವತಿಯಿಂದ ಸ್ಥಾಪಿಸಲಾಗುವುದು ಎಂಬ ವಿಶ್ವಾಸವಿದೆ. ಬ್ಯಾಟರಿ ಸ್ವಾಪಿಂಗ್ ಅತ್ಯಂತ ಯಶಸ್ವಿ ಮಾಡಬೇಕಿದೆ. ಮುಂಬರುವ ದಿನಗಳಲ್ಲಿ ಬ್ಯಾಟರಿ ಸ್ವಾಪಿಂಗ್ ಗೆ ಅತಿ ಹೆಚ್ಚಿನ ಮಹತ್ವವನ್ನು ನಾವೆಲ್ಲರೂ ನೀಡಬೇಕಿದೆ ಎಂದರು.

ಜೈವಿಕ ಇಂಧನ ಬಳಕೆಯನ್ನು ಕಡಿಮೆ ಮಾಡಬೇಕೆಂದು ಸುಮಾರು 30 ವರ್ಷಗಳ ಹಿಂದೆ ಸಂಶೋಧನೆಗಳು ಪ್ರಾರಂಭವಾಗಿ ಇಂದು ಹಲವಾರು  ಆಯಾಮಗಳಲ್ಲಿ ಯಶಸ್ಸು ಕಂಡಿದೆ.  ನಮ್ಮ ಸಾರಿಗೆ ವ್ಯವಸ್ಥೆಯಲ್ಲಿ ಸ್ಕೂಟರ್ ನಿಂದ ಹಿಡಿದು ಭಾರಿ ವಾಹನಗಳು ಹೊರಚೆಲ್ಲುವ ಇಂಗಾಲಯುಕ್ತ ಹೊಗೆ ಪರಿಸರಕ್ಕೆ ದೊಡ್ಡ ಹಾನಿ ಉಂಟುಮಾಡುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ ಜೈವಿಕ ಇಂಧನ ಮುಕ್ತಾಯವಾಗಲಿದೆ. ಆದ್ದರಿಂದ ನವೀಕರಿಸಬಹುದಾದ ಇಂಧನಕ್ಕೆ ನಾವೆಲ್ಲರೂ ಒತ್ತು ಕೊಡಬೇಕಾದ ಅಗತ್ಯ ಮತ್ತು ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಪಾತ್ರ ವಹಿಸಲಿದೆ. ಹಲವಾರು ಸಂಶೋಧನೆಗಳಿಂದ ದೊಡ್ಡ ಪ್ರಮಾಣದಲ್ಲಿ ದ್ವಿಚಕ್ರ ವಾಹನಗಳನ್ನು ಇವಿಗೆ ಜೋಡಣೆ ಮಾಡಲು ಸಾಧ್ಯವಾಗಿದೆ. ಇನ್ನು ಕೆಲವೇ ಸಂದರ್ಭಗಳಲ್ಲಿ ಕಾರು ಮತ್ತು ಬಸ್ಸುಗಳನ್ನು ಜೋಡಣೆ ಮಾಡಲು ಸಾಧ್ಯವಾಗಿದೆ. ಇದರಲ್ಲಿ ಇನ್ನಷ್ಟು ಸಂಶೋಧನೆಗಳಾಗುವ ಅವಶ್ಯಕತೆ ಇದೆ. ವಿಶೇಷವಾಗಿ ನವೀಕರಿಸಬಹುದಾದ ಇಂಧನದ ಸಂಗ್ರಹದ ಬಗ್ಗೆ ಇನ್ನಷ್ಟು ವೈಜ್ಞಾನಿಕ ಅಭಿವೃದ್ಧಿ ಮಾಡಿ ಬ್ಯಾಟರಿ ರೂಪದಲ್ಲಿ ಬಳಕೆ ಮಾಡಲು ಸಾಧ್ಯವಿದ್ದರೆ ಬಹಳ ದೊಡ್ಡ ಇಂಬು ದೊರೆಯಲಿದೆ ಎಂದರು.

ಇದನ್ನೂ ಓದಿ:ಆದಾಯ ತೆರಿಗೆ ಇಲಾಖೆಯಿಂದ “ಲವ್ ಲೆಟರ್” ಬಂದಿದೆ…ಎನ್ ಸಿಪಿ ವರಿಷ್ಠ ಶರದ್ ಪವಾರ್ ವ್ಯಂಗ್ಯ

ಇವಿ ಬಸ್ಸುಗಳ ಬಗ್ಗೆ ಈಗಾಗಲೇ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಬಿಎಂಟಿಸಿಗೆ ಅತಿ ಹೆಚ್ಚಿನ ಇವಿ ಬಸ್ಸುಗಳನ್ನು ಜೋಡಣೆ ಮಾಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಮುಂದಿನ ದಿನಗಳಲ್ಲಿ ಮಲ್ಟಿ ಆಕ್ಸೆಲ್ ಟ್ರಕ್ಸ್‍ಗಳೂ ಎಲೆಕ್ಟ್ರಿಕ್ ಆಗುವ ಸಾಧ್ಯತೆಗಳಿವೆ. ಅದರಲ್ಲಿ ಸಂಶೋಧನೆ ನಡೆದಿದ್ದು ಇನ್ನು ಕೆಲವೇ ಕೆಲವು ದಿನಗಳಲ್ಲಿ ಅದೂ ಕೂಡ ಸಾಧ್ಯವಾಗಲಿದೆ ಎನ್ನುವ ವಿಶ್ವಾಸವಿದೆ ಎಂದರು. ಇವಿ ವಾಹನಗಳು ಮುಂದಿನ ದಿನಗಳಲ್ಲಿ ನಮ್ಮ ಸಾಂಪ್ರಾದಯಿಕ ಇಂಧನ ಬಳಕೆಯನ್ನು ತಪ್ಪಿಸುವ ಹಾಗೂ ಪರಿಸರವನ್ನು ಶುದ್ಧಗೊಳಿಸುವ ನಿಟ್ಟಿನಲ್ಲಿ ಬಹಳ ದೊಡ್ಡ ಪಾತ್ರವನ್ನು ವಹಿಸಲಿದೆ.  ನವೀಕರಿಸಬಹುದಾದ ಇಂಧನಕ್ಕೆ ಬಹಳ ದೊಡ್ಡ ಮಹತ್ವವನ್ನು ನೀಡಲಾಗಿದೆ.  ಇಡೀ ಭಾರತದಲ್ಲಿ ಸೌರಶಕ್ತಿಯನ್ನು ಅತಿ ಹೆಚ್ಚು ಉತ್ಪಾದಿಸುತ್ತಿರುವ ರಾಜ್ಯ ಕರ್ನಾಟಕ ಎಂದರು.

ಹೈಡ್ರೋಜನ್ ಇಂಧನ ಉತ್ಪಾದಿಸಲು ಸಿದ್ಧತೆ: ಸೌರಶಕ್ತಿಯ ಸಂಗ್ರಹ ಹೇಗೆ ಮಾಡಬೇಕೆನ್ನುವ ಸವಾಲು ನಮ್ಮ ಮುಂದಿದೆ ಅದಕ್ಕೆ ಪಿಎಸ್‍ಪಿ ಯೋಜನೆಗಳನ್ನು ಕೇಂದ್ರ ಸರ್ಕಾರದ ನೆರವಿನಿಂದ ಕೈಗೊಳ್ಳಲಾಗಿದೆ. 2-3 ಪಿ.ಎಸ್‍ಪಿ ಘಟಕಗಳನ್ನು ಕರ್ನಾಟಕದಲ್ಲಿ ತಲೆ ಎತ್ತಲಿವೆ. ಸೌರಶಕ್ತಿಯ ಸಂಗ್ರಹ ಹಾಗೂ ಮರುಬಳಕೆಗೆ ಇದು ಉತ್ತಮವಾದ ಸಾಧನವಾಗಲಿದೆ. ಹೈಡ್ರೋಜನ್ ಇಂಧನವನ್ನು ತಯಾರು ಮಾಡಲು ಈಗಾಗಲೇ ಎರಡು ಕಂಪನಿಗಳೊಂದಿಗೆ ಒಪ್ಪಂದ ಮಡಿಕೊಳ್ಳಲಾಗಿದೆ.  ಹೈಡ್ರೋಜನ್ ಇಂಧನ ನವೀಕರಿಸಬಹುದಾದ ಇಂಧನಗಳ ಪೈಕಿ ಅತ್ಯುತ್ತಮವಾದ್ದದ್ದು. ಅದಾದರೆ ನಮ್ಮ ದೇಶದ ಇಂಧನವನ್ನು ಉಳಿಸಬಹುದು.  ಹೊರದೇಶದಿಂದ ಇಂಧನವನ್ನು ಆಮದು ಮಾಡಕೊಳ್ಳುವ ಬದಲಾಗಿ ಎಥನಾಲ್ ಬಳಕೆ ಮಾಡುತ್ತಿದ್ದೇವೆ. 20 ರಷ್ಟು ಎಥನಾಲ್ ಬಳಕೆ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯೋಜನೆ ರೂಪಿಸಿದ್ದಾರೆ. ನವೀಕರಿಸಬಹುದಾದ ಇಂಧನ, ಅದರ ಸಂಗ್ರಹದ ಕುರಿತು ಕೇಂದ್ರ ಸರ್ಕಾರ ನೀತಿಗಳನ್ನು ರೂಪಿಸಿದೆ. ಅದರಡಿ ಹೈ ಡ್ರೋಜನ್ ಇಂಧನವನ್ನು ರಾಜ್ಯದಲ್ಲಿ ಉತ್ಪಾದಿಸಲು ಸಿದ್ಧತೆಗಳು ನಡೆದಿವೆ ಎಂದರು.

ಡಿಎಪಿ ಗೊಬ್ಬರ ತಯಾರು ಮಾಡಲು ಅಮೋನಿಯಾ ಅತಿ ಹೆಚ್ಚು ಬಳಕೆಯಾಗುತ್ತದೆ. ಇದನ್ನು ಉತ್ಪಾದಿಸಲು ಕೂಡ ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಭಾರತ ಮತ್ತು ಗಲ್ಫ್ ದೇಶಗಳು ಬಿಟ್ಟರೆ ಬೇರೆಲ್ಲಿಯೂ ಇದನ್ನು ಮಾಡುತ್ತಿಲ್ಲ. ಸಮುದ್ರ ನೀರಿನಿಂದ ಅಮೋನಿಯಾ ತಯಾರಿಸಲು ಹೊಸ ತಂತ್ರಜ್ಞಾನವನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.