ಮಕಳ ಹೆಸರಿಗೆ ಬರೆದ ಆಸ್ತಿ ಪುನಃ ತಂದೆಗೆ!

ಪಾಲಕರ ಪೋಷಣೆ ಸಂರಕ್ಷಣರ ಕಾಯ್ದೆಯಡಿ ಪಾಲಕರ ನೋಡಿಕೊಳ್ಳದ ಮಕ್ಕಳಿಗೆ ಹೊಸ ಪಾಠವಾದ ಆದೇಶ

Team Udayavani, Jul 1, 2022, 4:21 PM IST

12

ಬಾಗಲಕೋಟೆ: ತಂದೆ-ತಾಯಿಯನ್ನು ಜೋಪಾನವಾಗಿ ನೋಡಿಕೊಳ್ಳದ ಮಕ್ಕಳಿಗೆ ಇದೊಂದು ಹೊಸ ಪಾಠವಾಗಿದೆ. ತಂದೆ, ತನ್ನ ಆಸ್ತಿಯನ್ನು ಮಕ್ಕಳ ಹೆಸರಿಗೆ ಮಾಡಿದಾಗಲೂ, ಅವರು ಚೆನ್ನಾಗಿ ನೋಡಿಕೊಳ್ಳದಿದ್ದರೆ, ಪುನಃ ಆ ತಂದೆಯ ಹೆಸರಿಗೆ ಮಕ್ಕಳ ಆಸ್ತಿ ವರ್ಗಾಯಿಸಿಕೊಳ್ಳಬಹುದು. ಇಂತಹವೊಂದು ಆದೇಶವನ್ನು ಬಾಗಲಕೋಟೆ ಉಪ ವಿಭಾಗಾಧಿಕಾರಿ ಹೊರಡಿಸಿದ್ದಾರೆ.

ಹೌದು, ತನ್ನ ಜಮೀನನ್ನು ಇಬ್ಬರು ಮಕ್ಕಳ ಹೆಸರಿಗೆ ಬರೆದು ಕೊಟ್ಟಿದ್ದನ್ನು ಮರಳಿ ಅವರಿಗೆ ಹಕ್ಕನ್ನು ಬದಲಾಯಿಸಿ ಪಾಲಕರ ಪೋಷಣೆ ಹಾಗೂ ಹಿರಿಯ ನಾಗರಿಕ ರಕ್ಷಣಾ ಕಾಯ್ದೆಯಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಗುಳೇದಗುಡ್ಡದ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ ವೃದ್ಧ ಯಮನಪ್ಪ ಮಾದರ ಆಸ್ತಿ ವಿಷಯವಾಗಿ ನ್ಯಾಯ ಕೊಡಿಸುವಂತೆ ಪಾಲಕರ ಪೋಷಣೆ ರಕ್ಷಣಾ ಕಾಯ್ದೆಯಡಿ ಮನವಿ ಅರ್ಜಿ ಸಲ್ಲಿಸಿದ್ದರು. ಪ್ರಕರಣ ವಿಚಾರಣೆಗೆ ಸಂಬಂದಪಟ್ಟವರಿಗೆ ನೋಟಿಸ್‌ ಜಾರಿ ಮಾಡಲಾಗಿ, ಸದರಿ ಮನವಿದಾರರು ಸುಮಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವುದಕ್ಕೆ ವೈದ್ಯಕೀಯ ದಾಖಲೆ ಹಾಜರು ಪಡಿಸಿದ್ದರು.

ಮನವಿದಾರ ಯಮನಪ್ಪ ಮಾದರ ಅವರು, ಈಗಾಗಲೇ ತಮ್ಮ ಇಬ್ಬರು ಮಕ್ಕಳಾದ ವಾಸುದೇವ ಮತ್ತು ನಿಜಗುಣಿ ಅವರಿಗೆ ತಮ್ಮ ಜಮೀನಿನ ತಮ್ಮ ಹಕ್ಕನ್ನು 1994 ರಲ್ಲಿಯೇ ಬಿಟ್ಟು ಕೊಟ್ಟಿದ್ದರು. ಆದರೆ ಆ ಮಕ್ಕಳು ಅವರ ಜೀವನಕ್ಕೆ ಆರ್ಥಿಕವಾಗಿ ಯಾವ ಸಹಾಯಧನ ನೀಡುತ್ತಿರಲಿಲ್ಲ. ತಮ್ಮ ಕೊನೆಯಗಾಲದಲ್ಲಿ ತನ್ನ ನಂತರ ಮಡದಿಯ ಜೀವನ ಸಾಗಿಸಲು ಸೂಕ್ತ ಸಹಾಯ ದೊರೆಯುವುದಿಲ್ಲವೆಂಬ ಅಳಲನ್ನು ತೋಡಿಕೊಂಡಿದ್ದರು.

ಈ ಕುರಿತು ಪಾಲಕರ ಪೋಷಣೆ ಸಂರಕ್ಷಣೆ ಹಾಗೂ ಹಿರಿಯ ನಾಗರಿಕ ರಕ್ಷಣಾ ನ್ಯಾಯ ಮಂಡಳಿಯಲ್ಲಿ ಸದರಿ ಮನವಿದಾರ ಮತ್ತು ಪ್ರತಿವಾದಿಗಳ ಹೇಳಿಕೆ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು, ಗುಳೇದಗುಡ್ಡ ತಾಲೂಕಿನ ಹಂಗರಗಿ ಗ್ರಾಮದ ಜಮೀನನ್ನು ತನ್ನ ಇಬ್ಬರು ಗಂಡು ಮಕ್ಕಳಿಗೆ ಹಕ್ಕು ಬಿಟ್ಟಿರುವುದನ್ನು ರದ್ದು ಮಾಡಿ ಮರಳಿ ತಂದೆ-ತಾಯಿಯರ ಹೆಸರಿಗೆ ಹಕ್ಕು ಬದಲಾವಣೆ ಮಾಡಿ ಆದೇಶ ಹೊರಡಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.