ಇಂಗ್ಲೆಂಡ್ ಅಂಗಳದಲ್ಲಿ ದಾಖಲೆ ಬರೆದ ಪಂತ್- ಜಡ್ಡು; ಕಂಗಾಲಾದ ಆ್ಯಂಡರ್ಸನ್


Team Udayavani, Jul 2, 2022, 9:10 AM IST

Pant and Jadeja shatter record with 222-run partnership

ಬರ್ಮಿಂಗ್ ಹ್ಯಾಂ: ಆತಿಥೇಯ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನ ಭಾರತ ತಂಡ ದಿನದ ಗೌರವ ಸಂಪಾದಿಸಿದೆ. ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಅದ್ಭುತ ಜೊತೆಯಾಟದ ಕಾರಣದಿಂದ ಭಾರತ ತಂಡ ದಿನದ ಅಂತ್ಯಕ್ಕೆ ಏಳು ವಿಕೆಟ್ ನಷ್ಟಕ್ಕೆ 338 ರನ್ ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ಆರಂಭದಲ್ಲಿ ಸತತ ವಿಕೆಟ್ ಕಳೆದುಕೊಂಡಿತು. ಕೇವಲ 98 ರನ್ ಗೆ ಐದು ವಿಕೆಟ್ ಕಳೆದುಕೊಂಡಿದ್ದ ವೇಳೆ ಜೊತೆಯಾದ ಪಂತ್ ಮತ್ತು ಜಡೇಜಾ ಆರನೇ ವಿಕೆಟ್ ಗೆ 222 ರನ್ ಜೊತೆಯಾಟವಾಡಿದರು.

ತನ್ನ ಎಂದಿನ ಶೈಲಿಯಲ್ಲೇ ಆಡಿದ ರಿಷಭ್ ಪಂತ್ ಕೇವಲ 111 ಎಸೆತಗಳಲ್ಲಿ 146 ರನ್ ಗಳಿಸಿದರು. ಮೊದಲ ಸೆಶನ್ ನಲ್ಲಿ ತಂಡವನ್ನು ಕಾಡಿದ್ದ ಜೇಮ್ಸ್ ಆ್ಯಂಡರ್ಸನ್ ರನ್ನು ಬಳಿಕ ಪಂತ್ ಕಾಡಿದರು. ಪಂತ್ ಈ ಇನ್ನಿಂಗ್ಸ್ ನಲ್ಲಿ ಬರೋಬ್ಬರಿ 20 ಬೌಂಡರಿ ಮತ್ತು ನಾಲ್ಕು ಭರ್ಜರಿ ಸಿಕ್ಸರ್ ಬಾರಿಸಿದರು. ರವೀಂದ್ರ ಜಡೇಜಾ ಅಜೇಯ 83 ರನ್ ಗಳಿಸಿ ಆಡುತ್ತಿದ್ದಾರೆ.

ಇವರಿಬ್ಬರು ಆರನೇ ವಿಕೆಟ್‌ಗೆ 222 ರನ್‌ಗಳ ಬೃಹತ್ ಮೊತ್ತವನ್ನು ಸೇರಿಸಿದರು. ಇದು ಆರನೇ ವಿಕೆಟ್‌ಗೆ ಇಂಗ್ಲೆಂಡ್‌ನಲ್ಲಿ ಭಾರತ ತಂಡ ಮಾಡಿದ ಗರಿಷ್ಠ ಜೊತೆಯಾಟವಾಗಿದೆ. ಅಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಜಂಟಿ ನಾಲ್ಕನೇ ಅತ್ಯುನ್ನತ ಜೊತೆಯಾಟವಾಗಿದೆ.

ಇದನ್ನೂ ಓದಿ:ಬಾಸ್ಕೆಟ್‌ಬಾಲ್‌ ತಂಡಕ್ಕೆ ಇವರನ್ನು ಹುಡುಕಿಕೊಡಿ- ವಿಡಿಯೋ ವೈರಲ್‌

ವಾಂಖೆಡೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ದಿಲೀಪ್ ವೆಂಗ್‌ಸರ್ಕರ್ ಮತ್ತು ರವಿಶಾಸ್ತ್ರಿ ಅವರ 298* ರನ್‌ ಗಳ ಜೊತೆಯಾಟ ದಾಖಲೆಯಾಗಿ ಉಳಿದಿದೆ.

ಏಷ್ಯಾದಿಂದ ಹೊರಕ್ಕೆ ಅತೀ ವೇಗದ ಶತಕ ಬಾರಿಸಿದ ಮೂರನೇ ಭಾರತೀಯ ಎಂಬ ಸಾಧನೆಯನ್ನು ಪಂತ್ ಮಾಡಿದರು. ಪಂತ್ 89 ಎಸೆತಗಳಲ್ಲಿ ಶತಕ ಪೂರೈಸಿದರು. ವೆಸ್ಟ್ ಇಂಡೀಸ್ ವಿರುದ್ಧ ಸೆಹ್ವಾಗ್ 78 ಎಸೆತಗಳಲ್ಲಿ ಶತಕ ಬಾರಿಸಿದ್ದು ದಾಖಲೆಯಾಗಿದೆ. ಎರಡನೇ ಸ್ಥಾನದಲ್ಲಿ ಮೊಹ್ಮಮದ್ ಅಜರುದ್ದೀನ್ ಇದ್ದಾರೆ. (88 ಎಸೆತ)

ವಿದೇಶಿ ಟೆಸ್ಟ್ ಗಳಲ್ಲಿ ಆರು ಅಥವಾ ಕೆಳ ಕ್ರಮಾಂಕದಲ್ಲಿ ಪಂತ್ ಮತ್ತು ಜಡೇಜಾ ಭಾರತದ ಪರ ಅತ್ಯುತ್ತಮ ಜೊತೆಯಾಟ ದಾಖಲೆಯನ್ನು ಸರಿಗಟ್ಟಿದರು. ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಮೊಹಮ್ಮದ್ ಅಜರುದ್ದೀನ್ ಕೂಡಾ ಆರನೇ ವಿಕೆಟ್ ಗೆ 222 ರನ್ ಜೊತೆಯಾಟವಾಡಿದ್ದರು.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.