ಸರಕಾರಿ ಶಾಲೆ ಮಕ್ಕಳಿಗೂ ಬಸ್‌: ವಾಹನ ಖರೀದಿಸುವಂತೆ ಆದೇಶಿಸಿದ ರಾಜ್ಯ ಸರಕಾರ


Team Udayavani, Jul 3, 2022, 7:15 AM IST

ಸರಕಾರಿ ಶಾಲೆ ಮಕ್ಕಳಿಗೂ ಬಸ್‌: ವಾಹನ ಖರೀದಿಸುವಂತೆ ಆದೇಶಿಸಿದ ರಾಜ್ಯ ಸರಕಾರ

ಬೆಂಗಳೂರು: ಖಾಸಗಿ ಶಾಲೆಗಳಂತೆ ಇನ್ನು ಮುಂದೆ ಸರಕಾರಿ ಶಾಲೆ ಮಕ್ಕಳು ಕೂಡ ವಾಹನಗಳಲ್ಲಿ ಶಾಲೆಗೆ ಬರಲಿದ್ದಾರೆ. ಸರಕಾರಿ ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಕರೆತರಲು ಶಾಸಕರ ಅನುದಾನದಲ್ಲಿ ವಾಹನ ಖರೀದಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಆರಂಭಿಕ ಹಂತದಲ್ಲಿ ರಾಜ್ಯದ ಸುಮಾರು 200 ಶಾಲೆಗಳಲ್ಲಿ ಈ ಸೌಲಭ್ಯ ಕಲ್ಪಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಗ್ರಾ. ಪಂ. ಮಟ್ಟದ ಮಾದರಿ ಶಾಲೆಗಳಿಗೆ ಶಾಸಕರ ಅನುದಾನದಲ್ಲಿ ವಾಹನ ಖರೀದಿ ಸುವ ಕುರಿತು ಯೋಜನೆ ರೂಪಿಸುವಂತೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖೀÂಕ ಇಲಾಖೆ ಆದೇಶ ಹೊರಡಿಸಿದೆ.

ವೆಚ್ಚ ಭರಿಸುವುದು ಹೇಗೆ?
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಪರಿಷ್ಕೃತ ಮಾರ್ಗಸೂಚಿ- 2014ರಲ್ಲಿ ಹೊಸದಾಗಿ ಶಾಲಾ ವಾಹನ ಖರೀದಿ ಅಂಶ ಸೇರ್ಪಡೆ ಮಾಡಲಾಗಿದೆ. ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವ ಸಲುವಾಗಿ ವಾಹನ ಖರೀದಿಸಲು ತಗಲುವ ವೆಚ್ಚವನ್ನು ಮಾತ್ರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಲು ಅವಕಾಶ ಕಲ್ಪಿಸಿದೆ. ಚಾಲಕರ ವೇತನ ಮತ್ತು ಪೆಟ್ರೋಲ್‌/ಡೀಸೆಲ್‌ ಹಾಗೂ ದುರಸ್ತಿ ವೆಚ್ಚವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತು ವಾರಿ ಸಮಿತಿ (ಎಸ್‌ಡಿಎಂಸಿ)ಯ ಇತರ ಅನುದಾನದಡಿ ಭರಿಸಲು ತಿಳಿಸಿದೆ.

10ಕ್ಕಿಂತ ಕಡಿಮೆ ಮಕ್ಕಳಿರುವಲ್ಲಿ ಅವರನ್ನು ಮಾದರಿ ಶಾಲೆಗೆ ಕರೆತರಲು ವ್ಯವಸ್ಥೆ ಮಾಡಲಾಗುತ್ತದೆ. ಈ ಶಾಲೆಗಳಲ್ಲಿ ಶಿಕ್ಷಕರು ಮತ್ತು ಮಕ್ಕಳು ಇಬ್ಬರಿಗೂ ಸರಿಯಾದ ನ್ಯಾಯ ಸಿಗುತ್ತಿಲ್ಲ. ಎಲ್ಲ ವಿಷಯ ಗಳನ್ನು ಒಬ್ಬನೇ ಶಿಕ್ಷಕ ಬೋಧನೆ ಮಾಡುವು ದರಿಂದ ಹೊರೆಯಾಗುತ್ತದೆ, ಮಕ್ಕಳಿಗೂ ಪೂರ್ಣ ಪ್ರಮಾಣದಲ್ಲಿ ಶಿಕ್ಷಣ ಸಿಗುವುದಿಲ್ಲ.
ಇಂತಹ ಶಾಲೆಗಳನ್ನು ಮಾದರಿ ಶಾಲೆಗಳಿಗೆ ವರ್ಗಾವಣೆ ಮಾಡಿಸಿ ಅಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಮಾದರಿ ಶಾಲೆಗೆ ಕರೆತರಲು ವಾಹನ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ಡಿಸೆಂಬರ್‌ ವೇಳೆ ಪದವಿ ಪೂರ್ವ ಹಂತಕ್ಕೂ ಎನ್‌ಇಪಿ
ಮಂಗಳೂರು: ಪ್ರಸಕ್ತ ವರ್ಷದ ಡಿಸೆಂಬರ್‌ ವೇಳೆಗೆ ಪದವಿಪೂರ್ವ ಹಂತಕ್ಕೂ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಯನ್ನು ಪರಿಚಯಿಸುವ ಉದ್ದೇಶವಿದ್ದು, ಅದಕ್ಕೆ ಅನುಸಾರವಾದ ಪಠ್ಯ ಕ್ರಮವನ್ನು ಅಂತಿಮ ಗೊಳಿಸಿ ಅಳವಡಿಸ ಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದರು.

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ತರ ಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಅನ್ಯ ರಾಜ್ಯಗಳಲ್ಲಿ ಈಗಾಗಲೇ 1ರಿಂದ 12ನೇ ತರಗತಿ ವರೆಗೆ ಎನ್‌ಇಪಿ ಪಠ್ಯಕ್ರಮವನ್ನು ಅಳವಡಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಹಂತ ಹಂತವಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ತಿಳಿಸಿದರು.

ಗ್ರಾ.ಪಂ. ಮಟ್ಟದ ಶಾಲೆಗಳನ್ನು ಮಾದರಿ ಶಾಲೆಗಳಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಇಂತಹ ಶಾಲೆಗಳಿಗೆ ವಾಹನ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಶಾಲೆಗಳ ಪಟ್ಟಿ ಮಾಡಿ ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ.
-ಬಿ.ಸಿ. ನಾಗೇಶ್‌, ಶಿಕ್ಷಣ ಸಚಿವ

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.