ಪ್ರಾಣಿ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಗೆ ಭೂಮಿ ಪೂಜೆ


Team Udayavani, Jul 3, 2022, 2:10 PM IST

16waste

ಮಹದೇವಪುರ: ಕೆರೆ, ರಾಜಕಾಲುವೆ, ಪಾದಚಾರಿ ಮಾರ್ಗಗಳು ವಿವಿಧೆಡೆ  ಎಸೆಯುತ್ತಿರುವ ಮಾಂಸದ ತ್ಯಾಜ್ಯಗಳಿಂದ ವೈಜ್ಞಾನಿಕ ರೀತಿಯಲ್ಲಿ ಪ್ರಾಣಿಗಳ ಆಹಾರ ಹಾಗೂ ಜೈವಿಕ ಗೊಬ್ಬರಗಳಿಗೆ ಕಚ್ಚಾ ವಸ್ತುಗಳನ್ನಾಗಿ ಪರಿವರ್ತಿಸಲಾಗುತ್ತದೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ಕ್ಷೇತ್ರದ ಕಣ್ಣೂರು ಗ್ರಾ.ಪಂ ವ್ಯಾಪ್ತಿಯ ಹೊಸೂರು ಬಂಡೆ ಸಮೀಪ ಬಾನ (BANA) ಇಕೋ ವರ್ಕ್ ವತಿಯಿಂದ ಪಿಪಿಪಿ ಮಾದರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಾಣಿ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಗೆ  ಭೂಮಿ ಪೂಜೆ ಸಲ್ಲಿಸಿ  ಮಾತನಾಡಿದರು.

ಕ್ಷೇತ್ರದ ಎಲ್ಲಾ ಮಾಂಸದ ಅಂಗಡಿಗಳಿಂದ ತ್ಯಾಜ್ಯವನ್ನು ನೇರವಾಗಿ ಸಂಗ್ರಹಿಸಿ ನಿರ್ವಹಣಾ ಘಟಕದಲ್ಲಿ ಪರಿಷ್ಕರಿಸಿ ವೈಜ್ಞಾನಿಕ ರೀತಿಯಲ್ಲಿ ಪ್ರಾಣಿಗಳ ಆಹಾರ ಹಾಗೂ ಜೈವಿಕ ಗೊಬ್ಬರಗಳಿಗೆ ಕಚ್ಚಾ ವಸ್ತುಗಳನ್ನಾಗಿ ಪರಿವರ್ತಿಸಲಾಗುತ್ತದೆ ಇದರಿಂದಾಗಿ ಕೆರೆ, ರಾಜಕಾಲುವೆ, ಪಾದಚಾರಿ ಮಾರ್ಗ ಅಂಡರ್ಪಾಸ್ ಗಳು ಹೀಗೆ ವಿವಿಧೆಡೆ ಎಸೆಯುತ್ತಿರುವ ಮಾಂಸದ ತ್ಯಾಜ್ಯಗಳಿಂದ ಮುಕ್ತಿ ಸಿಗಲಿದೆ ಎಂದರು.

ಇದನ್ನೂ ಓದಿ:ಲೈಂಗಿಕ ಕಿರುಕುಳ: ಮಹಿಳಾ ಅಂಡರ್ 17 ತಂಡದ ಕೋಚ್ ಅಲೆಕ್ಸ್ ರನ್ನು ವಜಾಗೊಳಿಸಿದ ಫೆಡರೇಶನ್

ನಮ್ಮ ಮಹದೇವಪುರ ಕ್ಷೇತ್ರವು ಈ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ಕಲ್ಪಿಸಿದ ಕರ್ನಾಟಕದ ಮೊದಲ ವಿಧಾನ ಸಭಾ ಕ್ಷೇತ್ರವಾಗಿದೆ. ಈ ಸಮಾಜಮುಖಿ ಕಾರ್ಯವನ್ನು ಮಹದೇವಪುರ ಟಾಸ್ಕ್ ಫೋರ್ಸ್ ಫಾರ್ ಎನ್ವಿರೋನ್ಮೆಂಟ್ ಮತ್ತು ಖಾಸಗಿ ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ಐದು ತಿಂಗಳುಗಳಲ್ಲಿ 20 ಟನ್ ಪ್ರಾಣಿ ತ್ಯಾಜ್ಯ ನಿರ್ವಹಣೆ ಕಾರ್ಯ ಆರಂಭವಾಗಲಿದ್ದು, ಕ್ರಮೇಣವಾಗಿ ಮೂರು ಹಂತಗಳಲ್ಲಿ ಅದನ್ನು 60 ಟನ್ ಸಾಮರ್ಥ್ಯಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಇಒ ಮಂಜುನಾಥ್, ಗ್ರಾ.ಪಂ ಅಧ್ಯಕ್ಷೆ ಮುನಿಅಕ್ಕಯಮ್ಮ, ಉಪಾಧ್ಯಕ್ಷ ಅಶೋಕ್‌, ಮುಖಂಡರಾದ ನಟರಾಜ್, ಅನಂದ್,ನಾಗರಾಜ್ .ರಾಜೇಶ್  ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.