ಆಮೆಗತಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ


Team Udayavani, Jul 3, 2022, 4:35 PM IST

tdy-17

ಹಾಸನ: ರಾಷ್ಟ್ರೀಯ ಹೆದ್ದಾರಿ 75 ರ ಹಾಸನ – ಸಕಲೇಶಪುರ ನಡುವೆ ಚತುಷ್ಪಥ ರಸ್ತೆ ನಿರ್ಮಾಣದ ಅವ್ಯವಸ್ಥೆಯ ಬಗ್ಗೆ ಶಾಸಕರು, ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿ ವಿಳಂಬ ದಿಂದಾಗುವ ಅನಾಹುತಗಳಿಗೆ ಎನ್‌ಎಚ್‌ಎಐ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.

ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಶನಿವಾರವೂ ಮುಂದುವರಿದ ಕೇಂದ್ರ ಪುರಸ್ಕೃತ ಯೋಜನೆಗಳ ಪಗ್ರತಿ ಪರಿಶೀಲನಾ ಸಭೆಯಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಜಾನ್‌ಬಾಜ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕಳೆದ ಜನವರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜೂನ್‌ ವೇಳೆಗೆ ಹಾಸನ – ಸಕಲೇಶಪುರ ನಡುವೆ ಒಂದು ಪಥ ನಿರ್ಮಾ ಣವನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದೀರಿ. ಆದರೆ, ಇನ್ನೂ 9 ಕಿ.ಮೀ. ನಿರ್ಮಾಣ ಬಾಕಿ ಇದೆ ಎಂದು ಹೇಳುತ್ತಿದ್ದೀರಿ. ಹೀಗಾದರೆ ಕಾಮಗಾರಿ ಮುಗಿಯುವುದು ಯಾವಾಗ ? ಈಗ ನಡೆಯುತ್ತಿರುವ ಕಾಮಗಾರಿಯೂ ಕಳಪೆ ಎಂಬ ದೂರುಗಳಿವೆ. ಈ ರಸ್ತೆ ಹತ್ತಾರುವರ್ಷ ಬಾಳಿಕೆ ಬರುತ್ತದೆಯೇ ಎಂದು ಪ್ರಜ್ವಲ್‌ ರೇವಣ್ಣ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿಗೆ ತ್ವರಿತಗೊಳಿಸಿ: ಒಟ್ಟು ಕಾಮಗಾರಿಯಲ್ಲಿ ಈವರೆಗೆ ಕೇವಲ ಶೇ. 48 ರಷ್ಟು ಮಾತ್ರ ಪ್ರಗತಿಯಾಗಿದ್ದು, ಪ್ರತಿ ಬಾರಿ ಸಭೆಯಲ್ಲಿ ವಿನಾಯ್ತಿ ಕೇಳುವುದು ಸಂಮಂಜಸವಲ್ಲ. ಜನರಿಗೆ ಉತ್ತರ ಹೇಳುವುದು ನಮಗೆ ಕಷ್ಟ. ಕನಿಷ್ಠ ಒಂದು ಪಥ ರಸ್ತೆಯನ್ನಾದರೂ ತ್ವರಿತವಾಗಿ ನಿರ್ಮಿಸಿ ಎಂದು ತಾಕೀತು ಮಾಡಿದರು. ರಸ್ತೆ ಸಮಸ್ಯೆಯಿದ ಅಪಘಾತಗಳಿಗೆ ಅಧಿಕಾರಿಗಳನ್ನ ಹೊಣೆಗಾರರನ್ನಾಗಿ ಮಾಡಿ ಎಂದು ಶಾಸಕರಾದ ಎಚ್‌.ಕೆ. ಕುಮಾರಸ್ವಾಮಿ ಇದೆ ವೇಳೆ ಒತ್ತಾಯಿಸಿದರು.

ಯಾಕೆ ಕ್ರಮ ಕೈಗೊಂಡಿಲ್ಲ ?: ಶಾಸಕ ಎ.ಟಿ.ರಾಮಸ್ವಾಮಿ ಅವರು ಮಾತನಾಡಿ, ಗುತ್ತಿಗೆ ದಾರರಿಗೆ ಸಾಮರ್ಥ್ಯ ಇಲ್ಲ ಎಂಬುದು ಈವರೆಗಿನ ಪ್ರಗತಿಯಿಂದ ಸಾಬೀತಾಗಿದೆ. ಆದರೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಯಾಕೆ ಕ್ರಮ ಕೈಗೊಂಡಿಲ್ಲ ? ಅಧಿಕಾರಿ ಗಳು ಹೊಣೆಗಾರಿಕೆ ವಹಿಸಿಕೊಳ್ಳಬೇಕು ಎಂದರು. ಗುತ್ತಿಗೆ ಸಂಸ್ಥೆ ಹೊಣೆ ಮಾಡಿ: ಶಾಸಕ ಎಚ್‌.ಡಿ. ರೇವಣ್ಣ ಅವರು ಮಾತನಾಡಿ, ಹಾಸನ – ಸಕಲೇಶಪುರ ರಸ್ತೆ ಕಾಮಗಾರಿ 24 ತಿಂಗಳಿನಲ್ಲಿ ಮುಗಿಯಬೇಕಾಗಿತ್ತು. ಆದರೆ ಕಾಮಗಾರಿ ಪ್ರಾರಂಭವಾಗಿ 8 ವರ್ಷಗಳಾದರೂ ಮುಗಿದಿಲ್ಲ. ಈ ಲೋಪಕ್ಕೆ ಗುತ್ತಿಗೆ ಸಂಸ್ಥೆ ಹೊಣೆ ಮಾಡಿ ಅವರಿಂದ ನಷ್ಟ ವಸೂಲಿ ಮಾಡಬೇಕು ಎಂದರು.

ಅದೇ ರಾಗ.. ಅದೇ ಹಾಡು: ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೆಶಕ ಜಾನ್‌ಬಾಜ್‌ ಅವರು, ಮುಂದಿನ ಜನವರಿ ವೇಳೆಗೆ ಒಂದು ಬದಿಯ ರಸ್ತೆ ಪೂರ್ಣಗೊಳಿಸಲಾಗುವುದು ಎಂದರು. ಅವರ ಹೇಳಿಕೆ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿ ನಿಮಗೆ ಏನು ಹೇಳಿದರೂ ಪ್ರಯೋಜನವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಜಿಪಂ ಸಿಇಒ ಕಾಂತರಾಜು, ಹೆಚ್ಚುವರಿ ಪೊಲೀಸ್‌ ಮುಖ್ಯಾಧಿಕಾರಿ ಬಿ.ಎನ್‌. ನಂದಿನಿ ಹಾಜರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.