ವಾಡಿ: 33 ಗೋವುಗಳು ಪೊಲೀಸ್ ವಶಕ್ಕೆ ;ರೈತ ಮಹಿಳೆಯ ಕಣ್ಣೀರು

ಅಕ್ರಮ ಗೋವುಗಳ ಸಾಗಾಟ ಹೆಚ್ಚಳ; ಕ್ರಮಕ್ಕೆ ಶ್ರೀರಾಮಸೇನೆ ಆಗ್ರಹ

Team Udayavani, Jul 3, 2022, 7:35 PM IST

1-sdsad

ವಾಡಿ: ಕೋಲಿ ಸಮಾಜಕ್ಕೆ ಸೇರಿದ ರೈತ ಮಹಿಳೆಯೊಬ್ಬರು ತನ್ನ 33 ಗೋವುಗಳನ್ನು ರಸ್ತೆ ಮೂಲಕ ಮಗಳ ಊರಿಗೆ ಕೊಂಡೊಯ್ಯುತ್ತಿದ್ದ ವೇಳೆ ಹಿಂದೂ ಸಂಘಟಕರ ದಾಳಿಗೊಳಗಾಗಿ ಇಡೀ ದಿನ ಠಾಣೆಯಲ್ಲಿ ಗೋಳಾಡಿದ ಪ್ರಸಂಗ ರವಿವಾರ ಪಟ್ಟಣದಲ್ಲಿ ನಡೆದಿದೆ.

ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಗಡಿ ಗ್ರಾಮ ಯರಗೋಳದಿಂದ ರಾಷ್ಟ್ರೀಯ ಹೆದ್ದಾರಿ-150 ಮಾರ್ಗವಾಗಿ ಜಾನುವಾರುಗಳೊಂದಿಗೆ ಶಹಾಬಾದ ನಗರಕ್ಕೆ ಬರುತ್ತಿದ್ದ ಕಾಂತಮ್ಮ ದುರ್ಗಪ್ಪ ಹತ್ತಿಕುಣಿ ಎಂಬ ರೈತ ಮಹಿಳೆಯೇ ಕಣ್ಣೀರು ಹಾಕಿ ಪರದಾಡಿದ ಮಹಿಳೆಯಾಗಿದ್ದಾಳೆ.

ಯರಗೋಳದಲ್ಲಿ ವಾಸವಿದ್ದು, ಪತಿಯ ಸಾವಿನ ನಂತರ ಕಂಗೆಟ್ಟ ಕಾಂತಮ್ಮ, ಮಗಳು ಸಾವಿತ್ರಿಬಾಯಿ ವಾಸವಿರುವ ಶಹಾಬಾದ ನಗರಕ್ಕೆ ತನ್ನೆಲ್ಲ ಗೋವುಗಳನ್ನು ಸ್ಥಾಳಂತರಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಮಾರ್ಗ ಮಧ್ಯೆ ವಾಡಿ ಪಟ್ಟಣದ ಹೊರ ವಲಯದ ಬಳಿರಾಮ ಚೌಕ್ ಮೂಲಕ ಹೋಗುತ್ತಿದ್ದಾಗ ಶ್ರೀರಾಮ ಸೇನೆಯ ಅಧ್ಯಕ್ಷ ವಿನೋದ ಹಿಂದೂ, ಕಾರ್ಯದರ್ಶಿ ವಿಶ್ವ ತಳವಾರ, ಕಾರ್ಯಕರ್ತರಾದ ಕರಣ ರಾಠೋಡ ಅವರು ಅಕ್ರಮವಾಗಿ ಗೋವುಗಳನ್ನು ಕಸಾಯಿ ಖಾನೆಗೆ ಸ್ಥಳಾಂತರಿಸುತ್ತಿದ್ದಾರೆ ಎಂಬ ಅನುಮಾನದಡಿ ತಡೆದು ಪೊಲೀಸರಿಗೆ ದೂರು ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕಾಗಮಿಸಿದ ಪೊಲೀಸರು,17 ಹಸು, 8 ಕರು, 4 ಹೊರಿ, 4 ಮಣಕಾ ಸೇರಿದಂತೆ ಒಟ್ಟು33 ಗೋವುಗಳನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ತಂದಿದ್ದಾರೆ. ಆಕಳನ್ನು ಕಟುಕರಿಗೆ ಮಾರಲು ತಂದಿಲ್ರೀ.. ನನ್ನ ಮಗಳ ಊರಿಗೆ ಬಿಡಲು ತಂದಿದ್ದೇನೆ. ಸಾಕುವ ಜಾನುವಾರಗಳನ್ನು ನಾನು ಕಟುಕರಿಗೆ ಮಾರಲ್ರೀ ಸಾಹೇಬರಾ ನನಗ ಬಿಟ್ಟುಬಿಡ್ರೀ ಎಂದು ಮಹಿಳೆ ಕಾಂತಮ್ಮ ಪೊಲೀಸರಿಗೆ ಪರಿಪರಿಯಾಗಿ ಮನವಿ ಮಾಡಿದರು.

ಸಾರ್ವಜನಿಕರ ದೂರಿನ ಮೇರೆಗೆ ಗೋವುಗಳನ್ನು ವಶಕ್ಕೆ ಪಡೆದು ಸಾಗಾಣಿಕೆ ಪರವಾನಿಗೆ ಇಲ್ಲದ ತಪ್ಪಿನಡಿ ಪ್ರಕರಣ ದಾಖಲಿಸಿಕೊಂಡು ಜಾನುವಾರುಗಳನ್ನು ಕೊಂಚೂರು ಪುಣ್ಯಕೋಟಿ ಗೋಶಾಲೆಗೆ ಕಳುಹಿಸಲಾಗಿದೆ ಎಂದು ಪಿಎಸ್‌ಐ ಮಹಾಂತೇಶ ಜಿ.ಪಾಟೀಲ ತಿಳಿಸಿದ್ದಾರೆ.

ಕ್ರಮಕ್ಕೆ ಆಗ್ರಹ

ಬಕ್ರೀದ್ ಸಮೀಪಿಸುತ್ತಿದ್ದಂತೆ ಅಕ್ರಮವಾಗಿ ಗೋವುಗಳ ಸಾಗಾಟ ಹೆಚ್ಚಾಗಿ ಕಂಡುಬರುತ್ತದೆ. ಗೋವು ಮತ್ತು ಒಂಟೆಗಳನ್ನು ಕಸಾಯಿ ಖಾನೆಗೆ ಸಾಗಿಸುವ ಜಾಲ ಕ್ರೀಯಶೀಲವಾಗುತ್ತದೆ. ರವಿವಾರದ ಪ್ರಕರಣದಲ್ಲಿ ಹಿಂದೂ ಮಹಿಳೆಯ ಮೂಲಕ ೩೩ ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸಲು ಕಟುಕರು ತಂತ್ರ ರೂಪಿಸಿರುವ ಸಾಧ್ಯತೆಯಿದೆ. ಗೋಹತ್ಯೆ ನಿಷೇಧದ ನಡುವೆಯೂ ಜಾನುವಾರುಗಳ ಮಾಂಸ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ಸೂಕ್ತ ತನಿಖೆಯಿಂದ ಪತ್ತೆ ಹಚ್ಚಿ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಹಿಂದೂ ಪರ ಸಂಘಟನೆಗಳ ಮುಖಂಡರಾದ ವೀರಣ್ಣ ಯಾರಿ, ರವಿ ಕಾರಬಾರಿ, ಜಗತ್‌ಸಿಂಗ್ ರಾಠೋಡ, ದೌಲತರಾವ ಚಿತ್ತಾಪುರಕರ, ಕುಮಾರ ಚವ್ಹಾಣ, ಉಮೇಶ ರಾಠೋಡ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.