ನಿರಂತರ ಮಳೆ, ಹವಾಮಾನ ವೈಪರೀತ್ಯ: ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಬಾಧೆ


Team Udayavani, Jul 4, 2022, 6:35 AM IST

ನಿರಂತರ ಮಳೆ, ಹವಾಮಾನ ವೈಪರೀತ್ಯ: ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಬಾಧೆ

ಉಡುಪಿ: ಕೋವಿಡ್‌ ಆತಂಕದ ನಡುವೆ ಕರಾವಳಿ ಜಿಲ್ಲೆಗಳ ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಳವಾಗುತ್ತಿದೆ.

ಮಕ್ಕಳಿಗೆ ಶಾಲಾರಂಭ ಆದಾಗಿ ನಿಂದ ಹಲವಾರು ಮಂದಿ ಮಕ್ಕಳು ಒಂದಲ್ಲ ಒಂದು ರೀತಿಯ ಕಾಯಿಲೆ ಯಿಂದ ಬಳಲುತ್ತಿದ್ದಾರೆ. ನಗರ, ಪಟ್ಟಣ, ಗ್ರಾಮೀಣ ಪ್ರದೇಶವೆಂಬ ಭೇದವಿಲ್ಲದೆ ಎಲ್ಲೆಡೆ ಮಕ್ಕಳಲ್ಲಿ ತೀವ್ರ ಜ್ವರ, ಡೆಂಗ್ಯೂ, ನ್ಯುಮೋ ನಿಯಾ, ಕೆಮ್ಮು, ನೆಗಡಿ, ಕಾಲುಬಾಯಿ ರೋಗದಂತಹ ಲಕ್ಷಣಗಳ ಜತೆಗೆ ದಿಢೀರ್‌ ಅಸ್ವಸ್ಥತೆ ಗೋಚರಿಸುತ್ತಿವೆ.

ಕೈ-ಕಾಲು ನೋವು
ಪ್ರಾರಂಭಿಕ ಹಂತದಲ್ಲಿ ಮಕ್ಕಳಿಗೆ ಕೈಕಾಲು ನೋವು ಕಾಣಿಸಿಕೊಳ್ಳುತ್ತದೆ. ಅನಂತರ ಜ್ವರ, ಶೀತ, ಕೆಮ್ಮು, ಕಫ‌ದಂತಹ ಲಕ್ಷಣಗಳು ಕಂಡುಬರು ತ್ತವೆ. ಒಂದು ಹಂತದಲ್ಲಿ ಬಹುತೇಕ ಎಲ್ಲ ಮಕ್ಕಳಿಗೂ ಈ ಕಾಯಿಲೆ ಬಂದು ಹೋಗಿದೆ. ಈ ನಡುವೆ ಮತ್ತಷ್ಟು ಮಳೆ ಸುರಿಯುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.

ಕೋವಿಡ್‌ ಭೀತಿ
ಮಕ್ಕಳಲ್ಲಿ ಕಂಡುಬರುತ್ತಿರುವ ಈ ಸಂಕ್ರಾಮಿಕ ರೋಗದಿಂದ ಕೋವಿಡ್‌ ಪ್ರಕರಣದ ಭೀತಿಯೂ ಎದುರಾಗಿದೆ. ಈಗಾಗಲೇ ಅನಾರೋಗ್ಯ ಸಮಸ್ಯೆ ಎದುರಿಸಿ ವೈದ್ಯರಲ್ಲಿಗೆ ಹೋಗುವ ಮಕ್ಕಳಿಗೆ ಕೋವಿಡ್‌ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗ ಲಕ್ಷಣವಿರುವವರಿಗೆ ಕೋವಿಡ್‌ ಸರ್ವೇ ಸಾಮಾನ್ಯವಾಗಿದ್ದು, ಇದು ಕೋವಿಡ್‌ ಅಂಕಿ-ಸಂಖ್ಯೆ ಹೆಚ್ಚಳಕ್ಕೂ ಕಾರಣವಾಗಲಿದೆ.

ವಾರದೊಳಗೆ ಕಡಿಮೆ
ಇದುವರೆಗೆ ಜ್ವರ ಸಹಿತ ಇತರ ರೋಗಲಕ್ಷಣ ಕಂಡುಬಂದ ವಿದ್ಯಾರ್ಥಿಗಳು ಔಷಧ ತೆಗೆದುಕೊಂಡ 3-4 ದಿನಗಳೊಳಗೆ ಗುಣಮುಖರಾಗಿದ್ದಾರೆ. ಆದರೆ ಮತ್ತೆ ಶಾಲೆಗಳಿಗೆ ಹೋಗುವಾಗ ಇತರರಿಗೆ ಸೋಂಕು ತಗಲಿ ಮತ್ತೆ ರೋಗ ಲಕ್ಷಣಗಳು ಹೆಚ್ಚಾಗುತ್ತಿರುವ ಘಟನೆಗಳೂ ನಡೆಯುತ್ತಿವೆ. ಹಲವು ಪ್ರಕರಣಗಳಲ್ಲಿ ಇತರ ಮಕ್ಕಳ ಮೂಲಕ ಸೋಂಕು ಹರಡಿರುವುದು ತಿಳಿದುಬಂದಿದೆ. ಈ ಕಾರಣಕ್ಕೆ ಮಕ್ಕಳು ಆದಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯು ಸಲಹೆ ನೀಡಿದೆ.

ಮಾಸ್ಕ್ ಕಡ್ಡಾಯ
ಕೋವಿಡ್‌ ಮುನ್ನೆಚ್ಚರಿಕೆ ಹಾಗೂ ಸಾಂಕ್ರಾಮಿಕ ರೋಗಗಳ ಹೆಚ್ಚಳ ಭೀತಿ ಇರುವ ಕಾರಣ ಜಿಲ್ಲಾಡಳಿತ ಈಗಾಗಲೇ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಆದರೆ ಇದರ ಪಾಲನೆ ಮಾತ್ರ ಅಷ್ಟಕ್ಕಷ್ಟೇ ಆಗುತ್ತಿದೆ. ಶಾಲಾ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಹಾಕಿದರೆ ಸೋಂಕು ಪ್ರಸಾರ ತಡೆಗಟ್ಟಲು ಸಾಧ್ಯವಿದೆ ಎನ್ನುತ್ತಾರೆ ವೈದ್ಯಾಧಿಕಾರಿಗಳು.

ಹವಾಮಾನದಲ್ಲಿ ಬದಲಾವಣೆ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಮಕ್ಕಳಲ್ಲಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ರೋಗ ಲಕ್ಷಣ ಕಾಣಿಸಿಕೊಂಡ ತತ್‌ಕ್ಷಣ ವೈದ್ಯರನ್ನುಭೇಟಿಯಾಗಿ ಚಿಕಿತ್ಸೆ ಪಡೆಯುವುದು ಉತ್ತಮ.
– ಡಾ| ವೇಣುಗೋಪಾಲ್‌,
ಮಕ್ಕಳ ತಜ್ಞರು, ಉಡುಪಿ

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.