ಬಸ್‌ಪಾಸ್‌ ಶೈಕ್ಷಣಿಕ ಅವಧಿ ವಿಸ್ತರಿಸಲು ಆಗ್ರಹ


Team Udayavani, Jul 4, 2022, 3:41 PM IST

19bus-pass

ವಿಜಯಪುರ: ಬಸ್‌ಪಾಸ್‌ ಅವಧಿ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೇಡಿಕೆಗಳ ಫಲಕ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ನೇತೃತ್ವ ವಹಿಸಿದ್ದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪಾಸ್‌ ಅನ್ನು ಸೆಪ್ಟೆಂಬರ್‌ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್‌ನಲ್ಲಿ ಆರಂಭವಾಗಿವೆ. ಹಿಂದಿನಂತೆ ಶೈಕ್ಷಣಿಕ ಅವಧಿವರೆಗೆ ಪಾಸ್‌ ಮಾನ್ಯತೆ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ 2021ರಲ್ಲಿ ನೀಡಲಾಗಿತ್ತು. ವಿದ್ಯಾರ್ಥಿ ಬಸ್‌ಪಾಸ್‌ಗೆ ಅವರ ಶೈಕ್ಷಣಿಕ ವರ್ಷದ ಕೊನೆವರೆಗೂ ಮಾನ್ಯತೆ ಇರುತ್ತದೆ. ಇದು ಇಷ್ಟು ವರ್ಷಗಳವರೆಗೂ ನಡೆದುಕೊಂಡು ಬಂದಿರುವ ಪ್ರಕ್ರಿಯೆ. ಅಂದರೆ, ನವೆಂಬರ್‌ ತಿಂಗಳಲ್ಲಿ ತರಗತಿ ಆರಂಭದ ನಂತರ ಪಾಸ್‌ ಪಡೆದ ವಿದ್ಯಾರ್ಥಿಗಳು ಆಗಸ್ಟ್‌ವರೆಗೂ, ಡಿಸೆಂಬರ್‌ನಲ್ಲಿ ಪಾಸ್‌ ಪಡೆದ ವಿದ್ಯಾರ್ಥಿಗಳು ಸೆಪ್ಟೆಂಬರ್‌ವರೆಗೂ ಉಚಿತವಾಗಿ ಓಡಾಡಬಹುದಾಗಿದೆ ಎಂದು ವಿವರಿಸಿದರು.

ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಏಕಾಏಕಿ ಜೂನ್‌ ತಿಂಗಳಿಗೆ ವಿದ್ಯಾರ್ಥಿ ಬಸ್‌ಪಾಸ್‌ ಅವಧಿ ಕೊನೆಗೊಳ್ಳಲಿರುವ ಕಾರಣ ಮುಂದಿನ ತಿಂಗಳಿನಿಂದ ದುಡ್ಡು ಕೊಟ್ಟು ಓಡಾಡಬೇಕು ಎಂದು ಹೇಳಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಗ್ರಾಮೀಣ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಿದೆ ಎಂದು ದೂರಿದರು.

ಹಲವು ವರ್ಷಗಳ ಹೋರಾಟದ ಫಲವಾಗಿ ವಿದ್ಯಾರ್ಥಿಗಳು ರಿಯಾಯಿತಿ ಪಾಸ್‌ ಅನ್ನು ಪಡೆದುಕೊಂಡಿದ್ದೇವೆ. ವಾಸ್ತವವಾಗಿ, ನಮ್ಮ ಹೋರಾಟ ಉಚಿತ ಪಾಸ್‌ ನೀಡಬೇಕು ಎಂಬುದೇ ಆಗಿದೆ. ಹೀಗಿರುವಾಗ, ಶೈಕ್ಷಣಿಕ ವರ್ಷದ ಅವಧಿ ಮುಗಿಯುವ ಮುನ್ನವೇ ಮಾನ್ಯತೆ ರದ್ದಾಗಿದೆ ದುಡ್ಡು ಕೊಟ್ಟು ಓಡಾಡಬೇಕು ಎನ್ನುವುದು, ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಮೇಲೆ ಮತ್ತಷ್ಟು ಹೊರೆ ಹೊರಿಸಿದಂತಾಗಿದೆ ಎಂದರು.

ಶಿಕ್ಷಣ ಉಳಿಸಿ ಸಮಿತಿ ಎಚ್‌.ಟಿ.ಭರತಕುಮಾರ ವಿದ್ಯಾರ್ಥಿಳ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದರು. ಸಂಘಟನೆಯ ದೀಪಾ ವಡ್ಡರ, ಅಜಿತ್‌, ವಿದ್ಯಾರ್ಥಿಗಳಾದ ಆಯಿಶಾ, ಹನುಮಂತ ಪಾಟೀಲ, ಹನುಮಂತ ಉಪ್ಪಾರ, ಮಹಾಂತೇಶ ಬಿರಾದಾರ, ವಿಕಾಸ್‌ ಬಡಿಗೇರ, ವಸಂತ ವಾಲೀಕಾರ, ಬಿ.ಹನುಮಂತ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.