ಗುಂಡಿ ಬಿದ್ದ ರಸ್ತೆ: ಕಣ್ಮುಚ್ಚಿ ಕುಳಿತ ಪುರಸಭೆ ಅಧಿಕಾರಿ,ಜನಪ್ರತಿನಿಧಿಗಳ ವಿರುದ್ದ ಆಕ್ರೋಶ


Team Udayavani, Jul 4, 2022, 5:59 PM IST

ಗುಂಡಿ ಬಿದ್ದ ರಸ್ತೆ: ಕಣ್ಮುಚ್ಚಿ ಕುಳಿತ ಪುರಸಭೆ ಅಧಿಕಾರಿ,ಜನಪ್ರತಿನಿಧಿಗಳ ವಿರುದ್ದ ಆಕ್ರೋಶ

ಪಿರಿಯಾಪಟ್ಟಣ: ಪುರಸಭಾ ವ್ಯಾಪ್ತಿಯ ಹಳೆಪೇಟೆ ಕಂಠಾಪುರದಲ್ಲಿ ರಸ್ತೆಯೇ ಬಾಯ್ತೆರೆದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಇಲ್ಲಿನ ಪುರಸಭಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮೌನವಹಿಸಿರುವುದು ಇಲ್ಲಿನ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇಲ್ಲಿನ ಪುರಸಭೆ ವ್ಯಾಪ್ತಿಗೆ ಒಳಪಡುವ ಹಳೆಪೇಟೆ-ಕಂಠಾಪುರ ಗ್ರಾಮವು ಪಟ್ಟಣದ ಹೃದಯ ಭಾಗದಿಂದ ಒಂದೂವರೆ ಕಿ.ಮೀ ದೂರದಲ್ಲಿದ್ದು, ಇಲ್ಲಿ ಹೆಚ್ಚಾಗಿ ಹಿಂದುಳಿದ ಉಪ್ಪಾರ ಹಾಗೂ ದಲಿತ ಸಮುದಾಯದ ಜನರು ವಾಸವಾಗಿದ್ದಾರೆ.  ಈ ಹಿಂದೆ ಈ ಗ್ರಾಮವು ಚೌತಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿತ್ತು. 2016 ರಲ್ಲಿ ಇಲ್ಲಿನ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಿದ ನಂತರ ಇದು ಪುರಸಭೆಗೆ ಸೇರ್ಪಡೆಯಾಯಿತು. ಕಂಠಾಪುರವು ಪುರಸಭೆಗೆ ಒಳಪಟ್ಟ ಅಂದಿನಿಂದ ಇಲ್ಲಿಯವರೆಗೂ ಈ ಗ್ರಾಮಕ್ಕೆ ಪುರಸಭೆಯಿಂದ ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ, ರಸ್ತೆ ನಿರ್ಮಾಣ ಸೇರಿದಂತೆ ಯಾವೊಂದು ಮೂಲಭೂತ ಸೌಲಭ್ಯಗಳನ್ನು ಈ ವರೆಗೂ ಒದಗಿಸಿಲ್ಲವೆಂಬುದು ಇಲ್ಲಿನ ನಿವಾಸಿಗಳ ಆರೋಪವಾಗಿದ್ದು, ಮಳೆಗಾಲ ಬಂತೆಂದರೆ ಇಲ್ಲಿನ ಗುಂಡಿಬಿದ್ದ ರಸ್ತೆಗಳೆಲ್ಲ ಜಲಾವೃತಗೊಂಡು ಸಂಚರಿಸುವವರಿಗೆ ಕಿರಿಕಿರಿ ಉಂಟಾಗಿ ಏಳುವುದೆಷ್ಟೋ ಬೀಳುವುದೆಷ್ಟೋ ಎಂಬ ಭೀತಿಯಲ್ಲಿಯೇ ದಾರಿ ಸಾಗಬೇಕಿದೆ. ಈ ಬಗ್ಗೆ ಹತ್ತಾರು ಬಾರಿ ಪುರಸಭಾ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ದೂರು ನೀಡಿದ್ದರೂ ಯಾವುದೇ ಪರಿಹಾರ ನೀಡುವಲ್ಲಿ  ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಬೇಸರಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕಿಚ್ಚ ಸುದೀಪ್ ವಿರುದ್ಧ ಅವಹೇಳನಕಾರಿ ವಿಡಿಯೋ: ನಿರ್ದೇಶಕ ನಂದಕಿಶೋರ್ ಆಕ್ರೋಶ

ಇಲ್ಲಿನ ಮಕ್ಕಳು ಶಾಲಾ-ಕಾಲೇಜಿಗೆ ತೆರಳಬೇಕು, ದಿನಬೆಳಗಾದರೆ ಇಲ್ಲಿನ ಜನ ಕೂಲಿನಾಲಿ ಮಾಡಲು ದೂರದೂರುಗಳಿಗೆ ಹೋಗಿ ಬರುವುದು ರಾತ್ರಿಯಾಗುತ್ತದೆ ಆಗ ತಮ್ಮ ಮನೆಗಳಿಗೆ ಈ ರಸ್ತೆಯಲ್ಲಿಯೇ ತೆರಳಬೇಕು ಆ ಸಂದರ್ಭದಲ್ಲಿ ಈ ರಸ್ತೆಗಳೆಲ್ಲಾ ಹಾಳಾಗಿದ್ದು, ವಾಹನ ಸವಾರರು, ಸಾರ್ವಜನಿಕರು  ಬಿದ್ದು ಗಾಯಗೊಂಡು ಎದ್ದು ಹೋಗುತ್ತಿದ್ದರೂ ಅಧಿಕಾರಿಗಳು ಮಾತ್ರ ನಿರ್ಲಿಪ್ತ ಭಾವಕ್ಕೆ ಜಾರಿಕೊಂಡು ತಾತ್ಸಾರ ತೋರುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ಬಾರಿಗಿಂತಲೂ ಈ ಬಾರಿ ರಸ್ತೆಯ ಗುಂಡಿಗಳು ಹೆಚ್ಚಾಗಿದ್ದು, ಅದರಲ್ಲೂ, ನಿತ್ಯ ನೂರಾರು ಶಾಲಾ-ಮಕ್ಕಳು, ಸಾರ್ವಜನಿಕರು ಬೈಕುಗಳು ಸಂಚರಿಸುತ್ತಿದ್ದು ಆಯಾ ತಪ್ಪಿ ಬಿದ್ದು ಕೈಕಾಲು ಗಾಯ ಮಾಡಿಕೊಂಡರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಉತ್ಸಾಹ ತೋರುತ್ತಿಲ್ಲ. -ಪಿ.ಎನ್.ಮಣಿಕುಮಾರ್, ಸ್ಥಳೀಯ ನಿವಾಸಿ

ಹಳೆಪೇಟೆ ಕಂಠಾಪುರ ಗ್ರಾಮವು ಪಟ್ಟಣದ ಹೃದಯ ಭಾಗದಿಂದ ಕೂಗಳತೆ ದೂರದಲ್ಲಿದೆ. ಈ ಗ್ರಾಮ ಪುರಸಭೆಗೆ ಸೇರಿ 7 ವರ್ಷ ಕಳೆದರೂ ಅಭಿವೃದ್ದಿ ಮಾತ್ರ ಮರೀಚಿಕೆಯಾಗಿದೆ. ಇಲ್ಲಿ ಕುಡಿಯುವ ನೀರು, ವಿದ್ಯುತ್ ಸೌಲಭ್ಯ, ರಸ್ತೆ ಚರಂಡಿ, ಯಾವುದು ಸರಿ ಇಲ್ಲ. ಇಂಥ ಜ್ವಲಂತ ಸಮಸ್ಯೆ ಕಣ್ಣಮುಂದಿದ್ದರೂ ವಾರ್ಡಿನ ಸದಸ್ಯರಾಗಲಿ, ಅಧಿಕಾರಿಗಳಾಗಲಿ ಎಚ್ಚೆತ್ತುಕೊಳ್ಳದೆ ಇನ್ನೂ ನಿದ್ರಾವಸ್ಥೆಯಲ್ಲಿದ್ದಾರೆ.-ಮೂರ್ತಿ ಸ್ಥಳೀಯ ನಿವಾಸಿ

-ಪಿ.ಎನ್.ದೇವೇಗೌಡ ಪಿರಿಯಾಪಟ್ಟಣ

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.