ಅಸ್ವಸ್ಥಗೊಂಡಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪೋಷಕರ ಆಕ್ರೋಶ
Team Udayavani, Jul 5, 2022, 1:35 PM IST
ನೆಲಮಂಗಲ: ಏಕಾಏಕಿ ಅಸ್ವಸ್ಥಗೊಂಡಿದ್ದ ಮಗುವನ್ನು ಚಿಕಿತ್ಸೆಗಾಗಿ ತಾಲೂಕಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ವೇಳೆ ವೈದ್ಯರು ಚಿಕಿತ್ಸೆ ನೀಡದೇ ಕಾಲಹರಣ ಮಾಡಿದ್ದಾರೆಂದು ಆರೋಪಿಸಿ ಟೌನ್ ಪೊಲೀಸ್ ಠಾಣೆ ಬಳಿ ಮಗುವಿನ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.
ನೆಲಮಂಗಲ ಸಮೀಪದ ಸೈದಾಮಿಪಾಳ್ಯದ ನಿವಾಸಿ ಗೋವಿಂದರಾಜು, ಗಾಯಿತ್ರಿ ದಂಪತಿಗಳ ಪುತ್ರ ಲೇಖನ್ ಮೃತ ಬಾಲಕ.
ಘಟನೆ ವಿವರ: ಜ್ವರದಿಂದ ಬಳಲುತ್ತಿದ್ದ ಮಗುವನ್ನು ಚಿಕಿತ್ಸೆಗಾಗಿ ತಾಲೂಕಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಏಕಾಏಕಿ ಅಸ್ವಸ್ಥಗೊಂಡಿದೆ. ಅಸ್ವಸ್ಥಗೊಂಡ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ದಾಖಲಿಸಲು ವೈದ್ಯರು ತಿಳಿಸಿದ್ದಾರೆ. ಆದರೆ ಮಗು ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮಗು ಮೃತಪಟ್ಟಿದೆ.
ಇದನ್ನೂ ಓದಿ:ಹುಣಸೂರು: ಸಾಲಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ
ನೆಲಮಂಗಲದ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿ, ಮಗುವಿನ ಶವ ತಂದು ನೆಲಮಂಗಲ ಟೌನ್ ಪೊಲೀಸ್ ಠಾಣೆ ಬಳಿ ನ್ಯಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ