ಒಣ ಮೀನಿಗೆ ಮೊರೆ ಹೋಗುವ ಮೀನು ಪ್ರಿಯರು

ಮಳೆಗಾಲದಲ್ಲಿ ಹಸಿಮೀನಿನ ಕೊರತೆ

Team Udayavani, Jul 5, 2022, 1:35 PM IST

12

ಮಲ್ಪೆ: ಮಳೆಗಾಲದಲ್ಲಿ ಯಾಂತ್ರಿಕ ಮೀನುಗಾರಿಕೆ ಬಂದ್‌ ಆಗಿರುದರಿಂದ ಹಸಿಮೀನು ಲಭ್ಯತೆ ಕಡಿಮೆಯಾಗಿರುತ್ತದೆ. ಹೊರ ರಾಜ್ಯದಿಂದ ಹಸಿಮೀನುಗಳು ಲಾರಿ ಮೂಲಕ ಬಂದರು ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ಬರುವುದಿಲ್ಲ. ಕರಾವಳಿ ಜನರಿಗೆ ಮೀನಿಲ್ಲದಿದ್ದರೆ ಊಟ ಮಾಡಲಾಗದ ಸ್ಥಿತಿ,ಇತ್ತ ತರಕಾರಿಗೂ ದುಪ್ಪಟ್ಟು ದರ. ಹಾಗಾಗಿ ಮೀನು ಪ್ರಿಯರು ಮಳೆ ಗಾಲ ಸಂದರ್ಭದಲ್ಲಿ ಒಣ ಮೀನಿಗೆ ಮೊರೆ ಹೋಗುತ್ತಾರೆ.

ವರ್ಷಪೂರ್ತಿ ಒಣಮೀನು ಲಭ್ಯವಾಗಿ ದ್ದರೂ ಮಳೆಗಾಲದಲ್ಲಿ ಮಾತ್ರ ಹೆಚ್ಚಿನ ಬೇಡಿಕೆಯನ್ನು ಪಡೆದುಕೊಳ್ಳುತ್ತದೆ. ಜನರು ಸಂತೆಗೆ ಬಂದು ಎರಡು ತಿಂಗಳಿಗೆ ಬೇಕಾಗುವಷ್ಟು ಒಣ ಮೀನನ್ನು ಖರೀದಿಸಿ, ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಪ್ರತಿ ವರ್ಷ ಮೇ ಅಂತ್ಯ ಜೂನ್‌ ಪ್ರಾರಂಭದಲ್ಲಿ ಸಂತೆ ಮಾರುಕಟ್ಟೆಯಲ್ಲಿ ಒಣ ಮೀನಿನ ಮಾರಾಟ ಜೋರಾಗಿರುತ್ತದೆ. ಮಲ್ಪೆ ಬಂದರು ವ್ಯಾಪ್ತಿ ಹಾಗೂ ಕರಾವಳಿ ತೀರದ ಸುತ್ತಮುತ್ತಲಿನ ಮಹಿಳೆಯರು ಒಣಮೀನು ಮಾರಾಟದಲ್ಲಿ ತೊಡಗುತ್ತಾರೆ. ಇವರು ರಖಂ ಆಗಿ ಮೀನನ್ನು ಖರೀದಿಸಿ ಸಂತೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.

ವಿವಿಧ ತರಹದ ಒಣಮೀನು

ತಾಟೆ, ತೊರಕೆ, ಬಂಗುಡೆ, ಕುರ್ಚಿ, ಗೋಲಯಿ, ನಂಗ್‌, ಅಡೆಮೀನು, ಕಲ್ಲರ್‌, ಆರಣೆಮೀನು, ಮಡಂಗ್‌ ಮೊದಲಾದ ವಿವಿಧ ಜಾತಿಯ ಒಣ ಮೀನುಗಳನ್ನು ಮಾರುಕಟ್ಟೆ ಕಾಣಬಹುದು. ತಾಟೆ, ತೊರಕೆ ಮೀನುಗಳು ಇದರ ದುಪ್ಪಟ್ಟು ಬೆಲೆಗಳನ್ನು ಪಡೆದುಕೊಳ್ಳುತ್ತವೆ. ಹೆಚ್ಚು ಒಣಗಿದ ಮೀನುಗಳಿಗೆ ಬೇಡಿಕೆ ಜಾಸ್ತಿ. ಈ ಮೀನನ್ನು ಹೆಚ್ಚು ಸಮಯದವರೆಗೆ ಸಂಗ್ರಹಿಸಿಟ್ಟರೂ ಹಾಳಾಗುವುದಿಲ್ಲ ಎನ್ನಲಾಗಿದೆ.

ಒಣ ಮೀನು ಬಲು ರುಚಿ

ಹಸಿಮೀನಿಗಿಂತ ಒಣ ಮೀನಿನ ರುಚಿ ವಿಭಿನ್ನ. ಮಹಿಳೆಯರು ಮೀನನ್ನು ಸಿಗಿದು, ಉಪ್ಪು ಬೆರೆಸಿ ಬಿಸಿಲಿನಲ್ಲಿ ಒಣಗಿಸಿ ಬೆಚ್ಚಗಿನ ವಾತಾವರಣದಲ್ಲಿ ಸಂಗ್ರಹಿಡುತ್ತಾರೆ. ಬಳಿಕ ಅವುಗಳನ್ನು ಮಾರಾಟ ಕೇಂದ್ರಕ್ಕೆ ಅಥವಾ ಸಂತೆಗೆ ತರುತ್ತಾರೆ.

ಕೇವಲ ಮಳೆಗಾಲ ಪ್ರಾರಂಭವಾಗುವ ಮುನ್ನ ಮಾತ್ರ ಹೆಚ್ಚು ವ್ಯಾಪಾರವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಡಿಸೇಲ್‌ದರ ಒಂದೆ ಸವನೇ ಏರಿಕೆಯಾಗುವುದರಿಂದ ಮೀನು ಗಾರಿಕೆ ನಡೆಸುವುದೇ ಕಷ್ಟಕರವಾಗಿದೆ. ಹಾಗಾಗಿ ಒಣ ಮೀನುಗಾರಿಕೆಯೂ ದುಬಾರಿಯಾಗಿದೆ ಎನ್ನುತ್ತಾರೆ ಒಣಮೀನು ಮಾರಾಟ ಮಹಿಳೆಯರು.

ಮಳೆಗಾಲದಲ್ಲಿ ದರ ಹೆಚ್ಚು: ಮಲ್ಪೆ ಬಂದರಿನಲ್ಲಿ ಸುಮಾರು 70-75 ಮಂದಿ ಒಣಮೀನು ವ್ಯಾಪಾರಸ್ಥ ಮಹಿಳೆಯರು ಇದ್ದಾರೆ. ಬೇಸಗೆಯಲ್ಲಿ ಹಸಿಮೀನನ್ನು ಖರೀದಿಸಿ ಒಣಗಿಸುತ್ತೆವೆ. ಎಪ್ರಿಲ್‌, ಮೇ ತಿಂಗಳಲ್ಲಿ ಬೇಡಿಕೆ ಹೆಚ್ಚಿರುವುದರಿಂದ ಚಿಲ್ಲರೆ ಮಾರಾಟಗಾರರಿಗೆ ರಖಂ ಆಗಿ ಕೊಡುತೇ¤ವೆ. ಮಳೆಗಾಲದಲ್ಲಿ ಹಸಿಮೀನು ಸಿಗದಿರುವುದರಿಂದ ಮೀನಿನ ದರಗಳು ಹೆಚ್ಚಾಗಿವೆ. ಕಡಿಮೆ ಪ್ರಮಾಣದಲ್ಲಿ ಸಿಗುವ ಮೀನಿಗೆ ದರ ಹೆಚ್ಚಿರುತ್ತದೆ. –ಜಯಂತಿ ಎಂ. ಕುಂದರ್‌, ಮಲ್ಪೆ, ಒಣಮೀನು ವ್ಯಾಪಾರಸ್ಥೆ

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.