15ರಂದು “ಓ ಮೈ ಲವ್‌’ ಚಿತ್ರ ಬಿಡುಗಡೆ

ಬೆಂಗಳೂರು ಸುತ್ತಮುತ್ತ, ಉತ್ತರಪ್ರದೇಶ, ಮಧ್ಯಪ್ರದೇಶ, ಗೋವಾದಲ್ಲಿ ಚಿತ್ರೀಕರಣ ಮಾಡಲಾಗಿದೆ.

Team Udayavani, Jul 5, 2022, 5:49 PM IST

15ರಂದು “ಓ ಮೈ ಲವ್‌’ ಚಿತ್ರ ಬಿಡುಗಡೆ

ಬಳ್ಳಾರಿ: ಸುಪ್ರೀಂ ಹೀರೋ ಶಶಿಕುಮಾರ ಪುತ್ರ ಅಕ್ಷಿತ್‌ ಶಶಿಕುಮಾರ್‌, ಸನಾದಿ ಅಪ್ಪಣ್ಣ ಮೊಮ್ಮಗಳು ಕೀರ್ತಿ ಕಲ್ಕೆರೆ ನಾಯಕಿಯಾಗಿ ನಟಿಸಿರುವ “ಓ ಮೈ ಲವ್‌’ ಜುಲೈ 15ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ನಾಯಕ ಅಕ್ಷಿತ್‌ ಶಶಿಕುಮಾರ್‌ ಮೊದಲಬಾರಿಗೆ ಬಣ್ಣ ಹಚ್ಚಿ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದು, ನಾಯಕಿ ಕೀರ್ತಿಕಲ್ಕೆರೆ ಅವರಿಗೆ ಇದು ಎರಡನೇ ಚಿತ್ರವಾಗಿದೆ ಎಂದು ಚಿತ್ರದ ನಿರ್ದೇಶಕ ಸ್ಮೈಲ್‌ ಶ್ರೀನು, ನಿರ್ಮಾಪಕ ಬಿ.ರಾಮಾಂಜಿನಿ ಅವರು ನಗರದ ಪತ್ರಿಕಾಭವನದಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಚಿತ್ರದ ಬಿಡುಗಡೆ, ಚಿತ್ರೀಕರಣ, ತಾರಾಗಣ ಕುರಿತು ಮಾಹಿತಿ ನೀಡಿದರು.

ನಿರ್ದೇಶಕ ಸ್ಮೈಲ್‌ ಶ್ರೀನಿವಾಸ್‌ ಮಾತನಾಡಿ, ಚಿತ್ರದ ಕಥೆ ಒಂದು ತ್ರಿಕೋನ ಕಥಾ ಹಂದರ ಹೊಂದಿದೆ. ಇಡೀ ಕುಟುಂಬ ಕುಳಿತುಕೊಂಡು ನೋಡಬಹುದಾದ ಚಿತ್ರವಾಗಿದ್ದು, ವಾಣಿಜ್ಯ ಮೌಲ್ಯಗಳನ್ನು ಹೊಂದಿರುವ ಪಕ್ಕ ಕಮರ್ಷಿಯಲ್‌ ಚಿತ್ರವಾಗಿದೆ ಎಂದು ತಿಳಿಸಿದರು.

ಚಿತ್ರವನ್ನು ಬೆಂಗಳೂರು ಸುತ್ತಮುತ್ತ, ಉತ್ತರಪ್ರದೇಶ, ಮಧ್ಯಪ್ರದೇಶ, ಗೋವಾದಲ್ಲಿ ಚಿತ್ರೀಕರಣ ಮಾಡಲಾಗಿದೆ. ಆರು ಹಾಡುಗಳಿವೆ. ಡ್ಯಾನ್ಸ್‌ಗೆ ಹೆಸರಾಗಿರುವ ಶಶಿಕುಮಾರ ಅವರ ಪುತ್ರ ತಂದೆಗೆ ತಕ್ಕಂತೆ ಡ್ಯಾನ್ಸ್‌ ಮಾಡಿದ್ದಾರೆ. ಇದಲ್ಲದೆ ಚಿತ್ರದಲ್ಲಿ ನಾಲ್ಕು ಫೈಟ್‌ಗಳಿದ್ದು, ಅದ್ಭುತವಾಗಿ ಮೂಡಿಬಂದಿವೆ ಎಂದ ಅವರು, ತಾರಾಗಣದಲ್ಲಿ ಅತ್ಯಂತ ನುರಿತ ಕಲಾವಿದರ ದಂಡೇ ಇದೆ.

ಮಗಧೀರ ಚಿತ್ರದಲ್ಲಿ ರಾಮಚರಣ್‌ ತೇಜಗೆ ಟಕ್ಕರ್‌ ಕೊಟ್ಟ ದೇವ್‌ಗಿಲ್‌, ಮನೋರಂಜನ್‌ ರವಿಚಂದ್ರನ್‌ ಜೊತೆ ಪ್ರಾರಂಭ ಎಂಬ ಸಿನಿಮಾದಲ್ಲಿ ನಟಿಸಿದ್ದ ಕೀರ್ತಿ ಕಲ್ಕೆರೆ, ಸಾಧು ಕೋಕಿಲ, ಪವಿತ್ರ ಲೋಕೇಶ್‌, ಎಸ್‌. ನಾರಾಯಣ್‌, ಅಕ್ಷತ ಅಶೋಕ್‌ ಸೇರಿದಂತೆ ಬಹುದೊಡ್ಡ ನಟ, ನಟಿಯರು ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದು ಅವರು ತಿಳಿಸಿದರು.

ಚಿತ್ರದ ನಿರ್ಮಾಪಕ ಬಿ. ರಾಮಾಂಜಿನಿ ಮಾತನಾಡಿ, ಇದು ಬಳ್ಳಾರಿಯವರೇ ಮಾಡಿದ ಚಿತ್ರ. ನಾನು ಮತ್ತು ಚಿತ್ರದ ನಿರ್ದೇಶಕ ಸ್ಮೈಲ್‌ ಶ್ರೀನಿವಾಸ್‌ ಸಹ ಬಳ್ಳಾರಿಯವರು. ಹಾಗಾಗಿ ಈ ಚಿತ್ರದ ಮೇಲೆ ಸಹಜವಾಗಿಯೇ ಬಳ್ಳಾರಿಗರಿಗೆ ವಿಶೇಷ ಪ್ರೀತಿ ಇದ್ದೇ ಇದೆ. ಚಿತ್ರದ ಟೀಸರ್‌ ಅನ್ನು ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ, ತೆಲುಗು ಚಿತ್ರದ ಪಿತಾಮಹ ಕೆ. ರಾಘವೇಂದ್ರ ರಾವ್‌, ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ರಾವ್‌ ಬಿಡುಗಡೆ ಮಾಡಿದ್ದಾರೆ ಎಂದು ಅವರು
ತಿಳಿಸಿದರು.

ನಾಯಕ ನಟ ಅಕ್ಷಿತ್‌ ಮಾತನಾಡಿ, ಇದು ನನ್ನ ಮೊದಲ ಚಿತ್ರ. ಚಿತ್ರದಲ್ಲಿ ನಾನು ನಿರ್ದೇಶಕರ ಅಣತಿಯಂತೆ ಕೆಲಸ ಮಾಡಿದ್ದೇನೆ. ಫೈಟ್‌ ಮಾಡುವಾಗ ಕೈಗೆ ಗಾಯವಾಗಿ ಹೊಲಿಗೆ ಬಿದ್ದಿವೆ. ಇನ್ನು ಡ್ಯಾನ್ಸ್‌ ಅನ್ನು ನನ್ನ ತಂದೆ ಹಾಗೆಯೇ ಎಂಜಾಯ್‌ ಮಾಡಿಕೊಂಡು ಕುಣದಿದ್ದೇನೆ. ಖಂಡಿತಾ ನಿಮಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸವಿದೆ. ಚಿತ್ರದ ಹಾಡೊಂದು ಯುಟ್ಯೂಬ್‌ನಲ್ಲಿ ಬಿಡುಗಡೆಮಾಡಿದ್ದು, 1.4 ಮಿಲಿಯನ್‌ ಜನರು ವೀಕ್ಷಿಸಿದ್ದಾರೆ ಎಂದರು. ಚಿತ್ರದಲ್ಲಿ ಪ್ರಮುಖ
ಪಾತ್ರವೊಂದನ್ನು ನಿಭಾಯಿಸಿರುವ ಅಕ್ಷತ್‌ ಅಶೋಕ್‌ ಇದ್ದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.