14 ಸೇನೆ ಶಾಸಕರಿಗೆ ಅನರ್ಹತೆ ನೋಟಿಸ್; ಆದಿತ್ಯ ಠಾಕ್ರೆಗಿಲ್ಲ!
Team Udayavani, Jul 5, 2022, 6:45 AM IST
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ನೂತನ ಸಿಎಂ ಏಕನಾಥ ಶಿಂಧೆ ಅವರು ವಿಶ್ವಾಸಮತ ಸಾಬೀತುಪಡಿಸುವ ವೇಳೆ ಪಕ್ಷದ ವಿಪ್ ಉಲ್ಲಂಘಿಸಿದ 14 ಮಂದಿ ಶಾಸಕರಿಗೆ ಮುಖ್ಯ ಸಚೇತಕ ಭರತ್ ಗೋಗಾವಾಲೆ ಅನರ್ಹತೆ ನೋಟಿಸ್ ನೀಡಿದ್ದಾರೆ.
ಆದರೆ, ಶಿಂಧೆ ವಿರುದ್ಧ ಮತ ಚಲಾಯಿಸಿದ ಶಾಸಕ ಆದಿತ್ಯ ಠಾಕ್ರೆ ಅವರಿಗೆ ಮಾತ್ರ ನೋಟಿಸ್ ನೀಡಿಲ್ಲ. ಬಾಳಾ ಸಾಹೇಬ್ ಠಾಕ್ರೆ ಅವರನ್ನು ನಾವು ಗೌರವಿಸುವ ಕಾರಣ, ಆದಿತ್ಯ ಅವರಿಗೆ ನೋಟಿಸ್ ಜಾರಿ ಮಾಡಿಲ್ಲ ಎಂದು ಚೀಫ್ ವಿಪ್ ಭರತ್ ಸ್ಪಷ್ಟಪಡಿಸಿದ್ದಾರೆ.
ಈ ನಡುವೆ, ಸದ್ಯದಲ್ಲೇ ಮಹಾರಾಷ್ಟ್ರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಡಿಸಿಎಂ ಫಡ್ನವೀಸ್ ಮಂಗಳವಾರ ತಿಳಿಸಿದ್ದಾರೆ.
ಶಿಂಧೆ ಹೆಸರು ಸೂಚಿಸಿದ್ದೇ ನಾನು
ಉದ್ಧವ್ ವಿರುದ್ಧ ಬಂಡಾಯವೆದ್ದ ಏಕನಾಥ ಶಿಂಧೆ ಅವರನ್ನೇ ಸಿಎಂ ಮಾಡುವಂತೆ ಪಕ್ಷದ ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದೇ ನಾನು ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. ಮಂಗಳವಾರ ತಮ್ಮ ಹುಟ್ಟೂರು ನಾಗ್ಪುರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಾನು ಡಿಸಿಎಂ ಆಗಲು ಮಾನಸಿಕವಾಗಿ ಸಿದ್ಧನಿರಲಿಲ್ಲ. ಆದರೆ, ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆದ ಮೇಲೆ ಹಾಗೂ ಜೆಪಿ ನಡ್ಡಾ, ಅಮಿತ್ ಶಾ ಅವರು ಮಧ್ಯಪ್ರವೇಶಿಸಿದ ಬಳಿಕ ನನ್ನ ನಿರ್ಧಾರ ಬದಲಿಸಿಕೊಂಡೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ