ದೇಶದ ಅಖಂಡತೆ ಒಡೆಯುವ ಮಾತು ಸರಿಯಲ್ಲ


Team Udayavani, Jul 6, 2022, 6:00 AM IST

ದೇಶದ ಅಖಂಡತೆ ಒಡೆಯುವ ಮಾತು ಸರಿಯಲ್ಲ

ತಮಿಳುನಾಡು ರಾಜ್ಯಕ್ಕೆ ಸ್ವಾಯತ್ತತೆ ಕೊಡಬೇಕು ಎಂದು ಆಗ್ರಹಿಸಿರುವ ಡಿಎಂಕೆ ನಾಯಕ, ಮಾಜಿ ಕೇಂದ್ರ ಸಚಿವ ಎ. ರಾಜಾ ಅವರು ಹೊಸದೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸ್ವಾಯತ್ತತೆ ನೀಡದೇ ಹೋದರೆ, ತಮಿಳುನಾಡನ್ನು ಪ್ರತ್ಯೇಕ ರಾಷ್ಟ್ರವನ್ನಾಗಿ ಮಾಡಿ ಎಂಬ ಬೇಡಿಕೆ ಇಡಬೇಕಾದೀತು ಎಂಬ ಎಚ್ಚರಿಕೆಯನ್ನೂ ನೀಡಿದ್ದು, ಇದು ರಾಜಕೀಯ ವಲಯದಲ್ಲಿ ತೀರಾ ಆಕ್ರೋಶಕ್ಕೂ ಕಾರಣವಾಗಿದೆ.

ಅಂದ ಹಾಗೆ, ತಮಿಳುನಾಡಿನ ಈ ಪ್ರತ್ಯೇಕ ರಾಷ್ಟ್ರ “ಥಣಿ ನಾಡು” ಬೇಡಿಕೆ ಇಂದಿನದ್ದೇನಲ್ಲ. ಅದು ಡಿಎಂಕೆ ಹುಟ್ಟುಹಾಕಿದ ಪೆರಿಯಾರ್‌ ಅವರ ಕಲ್ಪನೆ. ತಮಿಳಿಗರಿಗಾಗಿಯೇ ಪ್ರತ್ಯೇಕ ದೇಶವೊಂದು ಬೇಕು ಎಂದು ಅವರು ವಾದಿಸಿದ್ದರು. ಅಂದರೆ, ಸ್ವಯಂ ಗೌರವ ಹೊಂದಿರುವ ತಮಿಳಿಗರಿಗಾಗಿ ದ್ರಾವಿಡ ನಾಡು ಎಂಬ ದೇಶ ರಚನೆಯಾಗಬೇಕು ಎಂದು ಆಗ್ರಹಿಸಿದ್ದರು.
ಆದರೆ 1963ರಲ್ಲಿ ಡಿಎಂಕೆ ದ್ರಾವಿಡ ನಾಡು ಎಂಬ ಬೇಡಿಕೆಯನ್ನು ಕೈಬಿಟ್ಟು, ಅನಂತರದ ದಿನಗಳಲ್ಲಿ ರಾಜ್ಯಗಳಿಗೆ ತನ್ನದೇ ಆದ ಸ್ವಾಯತ್ತವಿರಬೇಕು ಎಂಬ ಬೇಡಿಕೆಯನ್ನು ಮುಂದುವರಿಸಿಕೊಂಡು ಬಂದಿತ್ತು. 1969ರಲ್ಲಿ ಪಿ.ವಿ.ರಾಜಮನ್ನಾರ್‌ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ಮಾಡಿದ್ದ ಡಿಎಂಕೆ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಬಂಧ ಹೇಗಿರಬೇಕು ಎಂಬ ಬಗ್ಗೆ ಅಧ್ಯಯನ ನಡೆಸಿತ್ತು. 1971 ಮತ್ತು 1974ರಲ್ಲಿಯೂ ತಮಿಳುನಾಡಿಗೆ ಸ್ವಾಯತ್ತ ಸ್ಥಾನ ನೀಡಬೇಕು ಎಂಬ ಹಕ್ಕೊತ್ತಾಯ ಮಾಡಿ, ತಮಿಳುನಾಡು ವಿಧಾನಸಭೆಯಲ್ಲೂ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ಎಲ್ಲವೂ ಇತಿಹಾಸದ ಕಥೆಗಳು. ಇತ್ತೀಚಿನ ವರ್ಷಗಳಲ್ಲಿ ತಮಿಳುನಾಡಿನ ಸ್ವಾಯತ್ತ ವಿಚಾರ ನನೆಗುದಿಗೆ ಬಿದ್ದಿತ್ತು. ಆದರೆ ಈಗ ಎ.ರಾಜಾ ಅವರ ವಿವಾದಾತ್ಮಕ ಮಾತಿನ ಮೂಲಕ ಮತ್ತೆ ಮುನ್ನೆಲೆಗೆ ಬಂದಿದೆ.

ಅಖಂಡ ಭಾರತ ಸದೃಢವಾಗಿದೆ. ಯಾವುದೇ ದೇಶದ ಬೆದರಿಕೆಗೂ ಬಗ್ಗದ ಸ್ಥಿತಿಯಲ್ಲಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಉತ್ತಮ ಹೆಸರು ಪಡೆದುಕೊಂಡಿದೆ. ಅತ್ಯಂತ ಮುಂದುವರಿದ ದೇಶಗಳೂ ಭಾರತ ವೆಂದರೆ, ತಲೆ ಎತ್ತಿ ನೋಡುವಂಥ ಸ್ಥಿತಿ ನಿರ್ಮಾಣವಾಗಿದೆ. ಇಂಥ ಹೊತ್ತಿ ನಲ್ಲಿ ದೇಶವನ್ನು ಒಡೆಯುವ ಮಾತು ಯಾವುದೇ ಕಾರಣಕ್ಕೂ ಸಲ್ಲದು. ಇದು ತಮಿಳುನಾಡಿನ ರಾಜಕಾರಣಿಗಳಿಗೆ ಅರ್ಥವಾದರೆ ಒಳಿತು.

ತಮಿಳುನಾಡಿನ ಈ ಮನೋಭಾವ ಹೊಸದೇನಲ್ಲ. ಅಕ್ಕಪಕ್ಕದ ರಾಜ್ಯಗಳ ಜತೆಗೂ ಅದು ಜಗಳವಾಡುತ್ತಲೇ ಬಂದಿದೆ. ಕಾವೇರಿ ವಿಚಾರದಲ್ಲಂತೂ ಕರ್ನಾಟಕದ ವಿರುದ್ಧ ಇತಿಹಾಸದಿಂದಲೂ ಕಾನೂನು ಸಮರ ಮಾಡಿಕೊಂಡೇ ಬರುತ್ತಿದೆ. ಒಂದು ರೀತಿಯಲ್ಲಿ ಈ ಅಂತಾರಾಜ್ಯ ಜಲ ವಿವಾದ ಅಲ್ಲಿನ ರಾಜಕಾರಣಿಗಳಿಗೆ ಓಟ್‌ಬ್ಯಾಂಕ್‌ ರಾಜಕಾರಣದಂಥಾಗಿದೆ.

ಹೊಂದಿಕೊಂಡು ಹೋಗುವ ಸ್ವಭಾವವಂತೂ ಇಲ್ಲವೇ ಇಲ್ಲ. ಅಲ್ಲದೆ, ತನ್ನ ಮೂಗಿನ ನೇರಕ್ಕೆ ನಡೆಯದೇ ಹೋದರೆ, ಅದು ಎಂಥದ್ದೇ ಜಗಳಕ್ಕೂ ಸಿದ್ಧವಾಗಿ ನಿಂತಿರುತ್ತದೆ ಎಂಬುದು ಇತಿಹಾಸ ನಮಗೆ ತೋರಿಸಿಕೊಟ್ಟಿದೆ. ಏನೇ ಆಗಲಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಮುಂದೆಯೇ ಎ.ರಾಜಾ ಪ್ರತ್ಯೇಕ ದೇಶದ ಬಗ್ಗೆ ಮಾತನಾಡಿದ್ದರೂ, ಸಿಎಂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಡೇ ಪಕ್ಷ ರಾಜಾಗೆ ಇಂಥ ಮಾತು ಸಲ್ಲದು ಎಂದಾದರೂ ಹೇಳಬೇಕಾಗಿತ್ತು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.