ಹೌದು. ನಾನು ಲಕ್ಕಿಡಿಪ್ ಸಿಎಂ,ಏನೀಗ?: ಬಿಜೆಪಿ,ಕುಟುಂಬ ರಾಜಕಾರಣ ವಿರುದ್ಧ HDK ಸರಣಿ ಟ್ವೀಟ್
Team Udayavani, Jul 6, 2022, 11:41 AM IST
ಬೆಂಗಳೂರು: ಹೌದು. ನಾನು ಲಕ್ಕಿಡಿಪ್ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿ ಬಿಜೆಪಿ ಹಾಗೂ ಕುಟುಂಬ ರಾಜಕಾರಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ ಎಂದಿದ್ದಾರೆ.
ಲಕ್ಕಡಿಪ್ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಬಿಹಾರ: ಕುಡಿದು ಪತ್ನಿಯೊಂದಿಗೆ ಜಗಳ; ತಪ್ಪೇ ಮಾಡದ ಮೂರು ವರ್ಷದ ಮಗಳನ್ನೇ ಕೊಂದ ಪಾಪಿ ತಂದೆ
ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!! ಎಂದು ವ್ಯಂಗ್ಯವಾಡಿದ್ದಾರೆ.
ʼಮಿಷನ್ ದಕ್ಷಿಣ್ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದು ಹೇಳಿದ್ದಾರೆ.
ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ;
1.ಯಡಿಯೂರಪ್ಪ & ಸನ್ಸ್
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್
7.ಜಗದೀಶ ಶೆಟ್ಟರ್-ಪ್ರದೀಪ್ ಶೆಟ್ಟರ್
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್
ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ? ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!