Updated: ಸಚಿವರ ರಾಜೀನಾಮೆಗೆ ಮಣಿದ ಬ್ರಿಟನ್ ಪ್ರಧಾನಿ ಬೋರಿಸ್ ರಾಜೀನಾಮೆ

ಜಾನ್ಸನ್‌ ರಾಜೀನಾಮೆ ನೀಡಿದರೆ ರಿಷಿ ಸುನಕ್‌ರನ್ನು ಆ ಹುದ್ದೆಗೆ ನೇಮಕ ಮಾಡುವ ಸಾಧ್ಯತೆಗಳು ಇವೆ

Team Udayavani, Jul 7, 2022, 3:48 PM IST

Boris

ಬ್ರಿಟನ್: ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಶಿವಸೇನಾದ ಏಕನಾಥ ಶಿಂಧೆ ಮಹಾ ವಿಕಾಸ್ ಅಘಾಡಿ ನೇತೃತ್ವದ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಸಾರಿದ್ದು, ಸುಮಾರು 40ಕ್ಕೂ ಅಧಿಕ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದರು. ಇದರ ಪರಿಣಾಮ ಶಿಂಧೆ ಸಿಎಂ ಪಟ್ಟ ಅಲಂಕರಿಸಿದ್ದಾರೆ. ಇದೀಗ ಬ್ರಿಟನ್ ನಲ್ಲಿಯೂ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಸಂಪುಟಕ್ಕೆ 50ಕ್ಕೂ ಅಧಿಕ ಸಚಿವರು ರಾಜೀನಾಮೆ ನೀಡಿ ಬಂಡಾಯ ಸಾರಿದ್ದಾರೆ. ರಾಜಕೀಯ ಬಿಕ್ಕಟ್ಟಿನ ನಿಟ್ಟಿನಲ್ಲಿ ಪ್ರಧಾನಿ ಸ್ಥಾನಕ್ಕೆ ಬೋರಿಸ್ ಗುರುವಾರ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ:ಮಾಜಿ ಕಾರ್ಪೋರೇಟರ್ ಬಳಿ ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಬಿಬಿಎಂಪಿ ಅಧಿಕಾರಿ

ಗುರುವಾರ ಸಂಜೆ ಅಥವಾ ತಡರಾತ್ರಿ ತಮ್ಮ ರಾಜೀನಾಮೆ ಬಗ್ಗೆ ಬೋರಿಸ್ ಜಾನ್ಸನ್ ಘೋಷಿಸುವ ಸಾಧ್ಯತೆ ಇರುವುದಾಗಿ ಬಿಬಿಸಿ ವರದಿ ಈ ಮೊದಲು ತಿಳಿಸಿತ್ತು. ಅದೇ ರೀತಿ ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ತೊರೆಯಲಿದ್ದಾರೆ ಎಂದು ವರದಿ ವಿವರಿಸಿದೆ.

ಕಳೆದ 48 ಗಂಟೆಗಳಲ್ಲಿ ಬ್ರಿಟನ್ ಸರ್ಕಾರದ 50ಕ್ಕೂ ಹೆಚ್ಚು ಸಚಿವರುಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೇಶದಲ್ಲಿ ಸರಣಿ ಹಗರಣಗಳು ನಡೆಯುತ್ತಿದ್ದು, ಪ್ರಧಾನಿ ಸ್ಥಾನದಲ್ಲಿ ಬೋರಿಸ್ ಮುಂದುವರಿಯಲು ಅರ್ಹರಲ್ಲ ಎಂದು ಕನ್ಸರ್ವೇಟಿವ್ ಪಕ್ಷದ ಸಚಿವರು ಆರೋಪಿಸಿ, ಬಂಡಾಯ ಎದ್ದಿದ್ದರು.

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಬೋರಿಸ್ ತಮ್ಮ ಅಧಿಕೃತ ನಿವಾಸದಲ್ಲಿ ಪಾರ್ಟಿ ಮಾಡಿದ್ದರ ವಿರುದ್ಧ ಮೇ ತಿಂಗಳಲ್ಲಿ ಜಾನ್ಸನ್ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ಸೋಲು ಅನುಭವಿಸಿತ್ತು. ಹೀಗಾಗಿ ಮುಂದಿನ ಒಂದು ವರ್ಷ ಕಾಲ ಬೋರಿಸ್ ವಿರುದ್ಧ ಮತ್ತೊಂದು ಬಾರಿ ಗೊತ್ತುವಳಿ ಮಂಡಿಸುವಂತೆ ಇಲ್ಲ. ಹೀಗಾಗಿ ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಬೋರಿಸ್ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ಮುಂದಾಗಿರುವುದಾಗಿ ವರದಿ ತಿಳಿಸಿದೆ.

ಮುಂದಿನ ಪ್ರಧಾನಿ ರಿಷಿ ?
ಒಂದು ವೇಳೆ ಹಾಲಿ ಪ್ರಧಾನಿ ಬೋರಿಸ್‌ ಜಾನ್ಸನ್‌ ರಾಜೀನಾಮೆ ನೀಡಿದರೆ ರಿಷಿ ಸುನಕ್‌ರನ್ನು ಆ ಹುದ್ದೆಗೆ ನೇಮಕ ಮಾಡುವ ಸಾಧ್ಯತೆಗಳು ಇವೆ. ಇದೇ ವೇಳೆ, ಸುನಕ್‌ ತಮ್ಮ ರಾಜೀನಾಮೆ ಪತ್ರದಲ್ಲಿ ಬೋರಿಸ್‌ ಜಾನ್ಸನ್‌ ನಾಯಕತ್ವದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದೇಶ ಹಲವು ಸವಾಲುಗಳನ್ನು ಎದುರಿಸುತ್ತಿದೆ. ನಾಗರಿಕರಿಗೆ ಕಡಿಮೆ ಪ್ರಮಾಣದಲ್ಲಿ ತೆರಿಗೆ ವಿಧಿಸುವುದು ಮತ್ತು ಹೆಚ್ಚಿನ ಪ್ರಮಾಣದ ಅಭಿವೃದ್ಧಿ ಸಾಧಿಸಲು ಬಯಸುತ್ತೇನೆ. ಈ ಉದ್ದೇಶ ಈಡೇರಲು ಒಂದು ಸದೃಢ ಮತ್ತು ಸಮರ್ಥ ಸರ್ಕಾರದ ಅಗತ್ಯ ಇದೆ. ಈ ಸತ್ಯವನ್ನು ಕೇಳಲು ದೇಶದ ಜನರು ಕಾತರರಾಗಿದ್ದಾರೆ’ ಎಂದು ರಾಜೀನಾಮೆ ಪತ್ರದಲ್ಲಿ ಸುನಕ್‌ ಬರೆದಿದ್ದಾರೆ.

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.