ಎಸ್‌ಸಿ ಪ್ರಮಾಣ ಪತ್ರ ವಿತರಣೆಗಾಗಿ ನಿರಶನ


Team Udayavani, Jul 7, 2022, 4:00 PM IST

15AC

 

ಲಿಂಗಸುಗೂರು: ಬೇಡ ಜಂಗಮರಿಗೆ ಎಸ್‌ಸಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ವೀರಶೈವ ಜಂಗಮ ಸಮಾಜದ ಮುಖಂಡರು ಎಸಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪರಿಶಿಷ್ಟ ಜಾತಿಗೆ ಸೇರಿರುವ ಬೇಡ ಜಂಗಮ ಜಾತಿಯನ್ನು ಸಂವಿಧಾನದ ಪ್ರಕಾರ 341ನೇ ಪರಿಚ್ಛೇದದ ಅಡಿಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿರುತ್ತಾರೆ. ಅದರಂತೆ ಬೇಡ ಜಂಗಮ ಜಾತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗೆಜಟಿಯರ್‌ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಮೇಲಿಂದ ಮೇಲೆ ಅನೇಕ ಸುತ್ತೋಲೆಗಳನ್ನು ಹೊರಡಿಸಿ ಬೇಡ ಜಂಗಮರ ಬಗ್ಗೆ ಅಧ್ಯಯನ ನಡೆಸಲು ಡಾ| ಸ್ವಾಮಿನಾಥನ್‌ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು. ಆಯೋಗವು ಜಂಗಮರ ಬಗ್ಗೆ ಅಧ್ಯಯನ ಮಾಡಿ 1989ರಲ್ಲಿ ಆಯೋಗ ಲಿಂಗಾಯತ ಧರ್ಮದ ಅನುಯಾಯಿಗಳಾದ ಜಂಗಮರೇ ನಿಜವಾದ ಬೇಡ ಜಂಗಮ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.

ಈ ಆಯೋಗದ ವರದಿಯನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು 2020 ಮಾರ್ಚ್‌ 8ರಂದು ಆದೇಶ ಹಾಗೂ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲ ಜಿಲ್ಲಾಧಿ ಕಾರಿ ಹಾಗೂ ತಹಶೀಲ್ದಾರರಿಗೆ ಆರು ಮಾರ್ಗ ಸೂಚನೆ ನೀಡಿ ಅದರಂತೆ ಜಾತಿ ಪ್ರಮಾಣ ಪತ್ರ ನೀಡಲು ಸೂಚಿಸಿರುತ್ತಾರೆ. ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಬೇಡ ಜಂಗಮರು ಹೆಚ್ಚಿನ ಜನಸಂಖ್ಯೆಯಲ್ಲಿದ್ದಾರೆ. ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ ತೀರ್ಪಿನಲ್ಲಿ ವೀರಶೈವ ಜಂಗಮರೇ ಬೇಡ ಜಂಗಮರೆಂದು ಆದೇಶ ಹೊರಡಿಸಿರುತ್ತದೆ. ಆದರೆ, ಇಷ್ಟೆಲ್ಲಾ ದಾಖಲೆಗಳು ಇದ್ದರೂ ಅಧಿಕಾರಿಗಳು ಸುತ್ತೋಲೆ ಮತ್ತು ಸಾಕ್ಷಾಧಾರಗಳ ಪ್ರಕಾರ ಎಸ್‌ಸಿ ಪ್ರಮಾಣ ಪತ್ರ ನೀಡುವಲ್ಲಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಎಲ್ಲ ತಹಶೀಲ್ದಾರ್‌ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಸಿಎಂ ಬರೆದ ಮನವಿಯಲ್ಲಿ ಆಗ್ರಹಿಸಿದರು.

ಸಮಾಜದ ಅಧ್ಯಕ್ಷ ಪ್ರಭುಸ್ವಾಮಿ ಅತ್ನೂರು, ಬಸವರಾಜ ಸ್ವಾಮಿ, ಶರಣಬಸವ ಹಿರೇಮಠ, ಶಿವಕುಮಾರ ನಂದಿಕೋಲಮಠ, ಶ್ರೀಕಾಂತ ಮಠದ, ನೀಲಕಂಠಯ್ಯಸ್ವಾಮಿ, ಅಂಗಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಮಹೇಶ ನಂದಿಕೋಲಮಠ, ವೀರಭದ್ರಯ್ಯ ಗುಂತಗೋಳ, ಶಿವಕುಮಾರ ಸ್ವಾಮಿ, ಚೆನ್ನಬಸವ ಹಿರೇಮಠ, ಅಮರೇಶ ಗಂಭೀರಮಠ ಸೇರಿದಂತೆ ಇನ್ನಿತರಿದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.