ಶ್ರೀನಗರದ ಶೂರ್ಯಾರ್ ಮಂದಿರದಲ್ಲಿ ರಾಮಾನುಜರ ಪ್ರತಿಮೆ ಅನಾವರಣ


Team Udayavani, Jul 7, 2022, 4:27 PM IST

ಶ್ರೀನಗರದ ಶೂರ್ಯಾರ್ ಮಂದಿರದಲ್ಲಿ ರಾಮಾನುಜರ ಪ್ರತಿಮೆ ಅನಾವರಣ

ಶ್ರೀನಗರ: ಸದಾ ಗದ್ದಲ, ಗಲಭೆ, ಹಿಂಸೆಯಿಂದ ಸುದ್ದಿಯಾಗುವ ಕಾಶ್ಮೀರದಲ್ಲಿ ಗುರುವಾರದ ಬೆಳಗು ಅಪೂರ್ವವಾಗಿತ್ತು. ಇಲ್ಲಿನ ಶೂರ್ಯಾರ್ ಮಂದಿರವು ತನ್ನ ಆವರಣದಲ್ಲಿ ಶ್ರೀ ರಾಮಾನುಜಾಚಾರ್ಯರ ಮುದ್ದಾದ ಪ್ರತಿಮೆಯನ್ನು ಕಾಣುವ ಮೂಲಕ ತನ್ನ ಹಿರಿಮೆಗೆ ಇನ್ನೊಂದು ಗರಿಯನ್ನು ಸಿಕ್ಕಿಸಿ ಕೊಂಡಿತು. ಇದಕ್ಕೆ ಬೆಂಗಳೂರಿನ ಯದುಗಿರಿ ಯತಿರಾಜ‌ ಮಠದ ಶ್ರೀ ಯದುಗಿರಿ ಯತಿರಾಜ ನಾರಾಯಣ ಜೀಯರ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತು ಸಂಸದ ತೇಜಸ್ವಿ ಸೂರ್ಯ ಸಾಕ್ಷಿಯಾದರು.

ಅಮೃತ ಶಿಲೆಯಲ್ಲಿ ಅರಳಿರುವ ನಾಲ್ಕು ಅಡಿ ಎತ್ತರದ ರಾಮಾನುಜರ ಪ್ರತಿಮೆಯನ್ನು (ಶಾಂತಿ ಪ್ರತಿಮೆ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವರ್ಚುಯಲ್ ಆಗಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ ಅವರು, ‘ವಿಶಿಷ್ಟಾದ್ವೈತ ತತ್ವದ ಜನಕರಾದ ರಾಮಾನುಜರು, ಸಮಾನತೆಯ ಸಮಾಜಕ್ಕೆ ತುಡಿದ ಯುಗಪ್ರವರ್ತಕರು’ ಎಂದರು. ರಾಮಾನುಜರು ಉದಾರ ಧರ್ಮದ ಆಚಾರ್ಯರಾಗಿದ್ದು, ತಾರತಮ್ಯದ ವಿರುದ್ಧ ದನಿ ಎತ್ತಿದರು. ಈ ಮೂಲಕ ಅವರು ದೀನರ ಬಾಳಿಗೆ ಬೆಳಕಾದರು ಎಂದು ಅವರು ಬಣ್ಣಿಸಿದರು.

ಸಾವಿರ ವರ್ಷ ಕಳೆದರೂ ಅವರ ವಿಚಾರಗಳು ಪ್ರಸ್ತುತವಾಗಿವೆ. ಇವು ಭಾರತೀಯ ಧರ್ಮ ಮತ್ತು ಸಂಸ್ಕೃತಿಗಳ ಉಳಿವಿಗೆ ಮೌಲಿಕ ಕೊಡುಗೆ ನೀಡಿವೆ. ಈ ಪ್ರತಿಮೆಯು ಭಾರತವನ್ನು ಮತ್ತಷ್ಟು ಗಟ್ಟಿಯಾಗಿ ಬೆಸೆದಯಲಿದೆ ಎಂದು ಶಾ ನುಡಿದರು.

ಸಚಿವ ಅಶ್ವತ್ಥನಾರಾಯಣ ಮಾತನಾಡಿ, ‘ಕರ್ನಾಟಕದಲ್ಲಿ 40 ವರ್ಷಗಳ ಕಾಲ ಇದ್ದ ರಾಮಾನುಜರು ತಮ್ಮ ಮೇರುಕೃತಿ ಶ್ರೀಭಾಷ್ಯದ ರಚನೆಗೆ ಮುನ್ನ ಹೆಚ್ಚಿನ ಅಧ್ಯಯನಕ್ಕೆ ಕಾಶ್ಮೀರಕ್ಕೆ ಬಂದಿದ್ದರು. ಅದಾದ ಬಳಿಕವೂ ಅವರು ಇಲ್ಲಿಗೆ ಭೇಟಿ ನೀಡಿದ್ದರು. ಅವರ ಪರಂಪರೆಯನ್ನು ಜೀಯರ್ ಅವರು ಮುಂದುವರಿಸಿದ್ದಾರೆ. ಇಲ್ಲಿನ ಶೂರ್ಯಾರ್ ಮಂದಿರದ ಜೀರ್ಣೋದ್ಧಾರ ಕಾರ್ಯವನ್ನು ಬೆಂಗಳೂರಿನ ಯದುಗಿರಿ ಯತಿರಾಜ ಮಠವು ಕೈಗೆತ್ತಿಕೊಂಡಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.

ಸಮಾನತೆ, ಶಾಂತಿ, ಸಬಲೀಕರಣ ಇವುಗಳಿಗಾಗಿ ರಾಮಾನುಜರು ಹಂಬಲಿಸುತ್ತಿದ್ದರು. ಕಾಶ್ಮೀರ ಕಣಿವೆಯಲ್ಲಿ ಈ ಪ್ರತಿಮೆಯು ನೆಮ್ಮದಿ ತರಲಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಯದುಗಿರಿ ಯತಿರಾಜ ನಾರಾಯಣ ಜೀಯರ್ ಆಶೀರ್ವಚನ ನೀಡಿ, ರಾಮಾನುಜರ ವಿಚಾರಗಳ ಪ್ರಸ್ತುತತೆಯನ್ನು ತಿಳಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.