ಸಾಗರ : ಹಳೆ ಇಕ್ಕೇರಿಯಲ್ಲಿ ಅಕ್ರಮ ಅಕೇಶಿಯಾ ಕಡಿತಲೆ, ಕಣ್ಣು ಮುಚ್ಚಿ ಕುಳಿತ ಇಲಾಖೆ
Team Udayavani, Jul 7, 2022, 11:12 PM IST
ಸಾಗರ : ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳೆ ಇಕ್ಕೇರಿ ಗ್ರಾಮದ ಸರ್ವೇ ನಂ. 96ರ ಕಂದಾಯ ಇಲಾಖೆ ಜಾಗದಲ್ಲಿ ಕಳೆದ ಕೆಲ ದಿನಗಳಿಂದ ಅಕೇಶಿಯಾ ಮರಗಳ ಕಡಿತಲೆಯನ್ನು ರಾಜಕೀಯ ಪ್ರಭಾವಿಗಳು ಮಾಡುತ್ತಿದ್ದರೂ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಲಾಗಿದೆ.
ಗ್ರಾಮ ಪಂಚಾಯ್ತಿಯೊಂದರ ಮಾಜಿ ಅಧ್ಯಕ್ಷರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಾಲಿ ಉಪಾಧ್ಯಕ್ಷರೋರ್ವರು ಈ ಅಕ್ರಮ ಸಾಗಾಣಿಕೆಯಲ್ಲಿ ಪಾಲ್ಗೊಂಡಿರುವುದನ್ನು ಗ್ರಾಮದ ಜನ ಅರಣ್ಯ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ಹೇಳುತ್ತಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ನಂತರವೂ ಅಕೇಶಿಯಾ ತುಂಡುಗಳ ಲಾರಿಯ ಸಾಗಾಟ ನಡೆದಿದೆ ಎಂದು ಗ್ರಾಮದವರು ಆರೋಪಿಸಿದ್ದಾರೆ.
ಕ್ಷೇತ್ರದ ಶಾಸಕ ಎಚ್.ಹಾಲಪ್ಪ ಹರತಾಳು ಅವರು ಸಕ್ರಮವಾಗಿಯೂ ಜೂನ್ನಿಂದ ಜುಲೈವರೆಗೆ ಮರಗಳ ಕಟಾವು ಪರವಾನಗಿ ಕೊಡಬಾರದು ಎಂದಿದ್ದಾರೆ. ಈ ಸಂಬಂಧ ಸರ್ಕಾರ ಕೂಡ ಆದೇಶ ಹೊರಡಿಸಿದೆ. ಆದರೆ ಈ ಬಗ್ಗೆ ನಿರ್ಲಕ್ಷ್ಯ ತೋರಿ ಈಗಾಗಲೇ ಐದಾರು ಲೋಡ್ ಅಕೇಶಿಯಾ ಬೇನಾಮಿಯಾಗಿ ಸಾಗಿಸಲಾಗಿದೆ. ರಾಜಕೀಯ ಪ್ರಭಾವ ಇರುವ ವ್ಯಕ್ತಿಗಳು ಭಾಗಿಯಾಗಿರುವುದರಿಂದ ಸರ್ಕಾರ ಕ್ರಮಕ್ಕೆ ಮುಂದಾಗಿಲ್ಲ. ಸ್ಥಳೀಯವಾಗಿ ಹಲವರಲ್ಲಿ ಈ ಕಂದಾಯ ಭೂಮಿಯಲ್ಲಿ ಅಕೇಶಿಯಾ ಕಟಾವು ಮಾಡಿದ, ಸಾಗಿಸಿದ ಫೋಟೋ, ವಿಡಿಯೋಗಳ ಸಾಕ್ಷಿಯಿವೆ. ಇವುಗಳನ್ನು ಬಳಸಿ ಸಂಬಂಧಿಸಿದ ವ್ಯಕ್ತಿಗಳು, ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಈ ಕುರಿತು ತಕ್ಷಣ ಶಾಸಕ ಹಾಲಪ್ಪ ಗಮನ ಹರಿಸಬೇಕು ಎಂದು ಅಲ್ಲಿನ ಜನ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ