ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 11ಕ್ಕೆ ಸಿಎಂ ಮನೆಗೆ ಮುತ್ತಿಗೆ

ಜಿಲ್ಲೆಯಿಂದ 300ಕ್ಕೂ ಹೆಚ್ಚು ರೈತರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ

Team Udayavani, Jul 8, 2022, 6:39 PM IST

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 11ಕ್ಕೆ ಸಿಎಂ ಮನೆಗೆ ಮುತ್ತಿಗೆ

ತುಮಕೂರು: ದಾವಣಗೆರೆಯಲ್ಲಿ ನಡೆದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕಾರಿ ಮಂಡಳಿಯ ತೀರ್ಮಾನದಂತೆ ಜು.11 ರಂದು ಕಬ್ಬಿನ ಬಾಕಿ ಹಣ ನೀಡಬೇಕು ಹಾಗೂ ಕಬ್ಬುಗೆ ಟನ್‌ಗೆ 4,500 ರೂ. ನೀಡಬೇಕು ಮತ್ತು ಕರ ನಿರಾಕರಣೆ ಚಳವಳಿ ಸಂದರ್ಭದಲ್ಲಿ ಮನೆಯ ವಿದ್ಯುತ್‌ ಬಿಲ್‌
ಪಾವತಿಸದ ರೈತ ಕುಟುಂಬಗಳಿಗೆ ನೀಡಿರುವ ತೊಂದರೆ ನಿವಾರಿಸಬೇಕೆಂದು ಆಗ್ರಹಿಸಿ ಮುಖ್ಯ ಮಂತ್ರಿ ಮನೆ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಶಂಕರಪ್ಪ ತಿಳಿಸಿದರು.

ನಗರದ ವಿಜ್ಞಾನ ಕೇಂದ್ರದಲ್ಲಿ ಗುರುವಾರ ನಡೆದ ಜು.11ರ ಮುಖ್ಯಮಂತ್ರಿ ಮನೆ ಮುತ್ತಿಗೆ ಕಾರ್ಯ ಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು ಸಕ್ಕರೆ ಕಾರ್ಖಾನೆ ಗಳಿಗೆ ಸರಬರಾಜು ಮಾಡಿದ ಸಾವಿ ರಾರು ಟನ್‌ ಕಬ್ಬಿಗೆ ನೂರಾರು ಕೋಟಿ ರೂ.ಬಾಕಿ ರೈತರಿಗೆ ಬರಬೇಕಿದೆ. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಉನ್ನತ ಹುದ್ದೆಯಲ್ಲಿರುವ ಜನಪ್ರತಿ ನಿಧಿಗಳೇ ಆಗಿರುವುದರಿಂದ ಸರ್ಕಾರ ಅವರಿಂದ ರೈತರ ಬಾಕಿ ವಸೂಲಿ ಮಾಡಿಕೊಡಲು ಸಾಧ್ಯವಾಗಿಲ್ಲ.

ಅತ್ಯಂತ ಕಡಿಮೆ ದರ: ರೈತರಿಗೆ ಬರಬೇಕಾಗಿರುವ ಕಬ್ಬು ಬಾಕಿ ಬಿಲ್‌ ಪಾವತಿಸಬೇಕು ಎಂಬುದು ರೈತ ಸಂಘದ ಆಗ್ರಹವಾಗಿದೆ. ಜೊತೆಗೆ ಪ್ರಸ್ತುತ ಕಬ್ಬಿಗೆ ಟನ್‌ಗೆ 3,150 ರೂ. ನೀಡುತ್ತಿದ್ದು, ಅತ್ಯಂತ ಕಡಿಮೆ ದರವಾಗಿದೆ. ಇಂದಿನ ರಸಗೊಬ್ಬರ, ಕೃಷಿ ಕೂಲಿಯ ದರಕ್ಕೆ ಅನುಗುಣವಾಗಿ ಪ್ರತಿಟನ್‌ ಕಬ್ಬಿಗೆ 4,500 ರೂ. ನೀಡಬೇಕೆಂಬುದು ರೈತ ಸಂಘದ ಬೇಡಿಕೆ ಯಾಗಿದೆ ಎಂದರು.

300ಕ್ಕೂ ಹೆಚ್ಚು ರೈತರು ಭಾಗಿ: ಇದುವರೆಗೂ ರೈತರು, ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀ ಕರ ನಡುವೆ ಹಲವಾರು ಸಭೆಗಳು ನಡೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಜು.11 ರಂದು ಸಿಎಂ ಮನೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಳ್ಳ ಲಾಗಿದೆ.

ಜಿಲ್ಲೆಯಿಂದ 300ಕ್ಕೂ ಹೆಚ್ಚು ರೈತರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ರವೀಶ್‌ ಮಾತನಾಡಿ, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು ನೂರಾರು ಎಕರೆಯಲ್ಲಿ ಬೆಳೆದಿದ್ದ ತೆಂಗು, ಅಡಕೆ, ಮಾವು ಇನ್ನಿತರ ತೋಟಗಾರಿಕಾ ಬೆಳೆಗಳು ನಾಶವಾ ಗಿವೆ. ಆದರೆ ಸರ್ಕಾರ ಅವೈ ಜ್ಞಾನಿಕ ಪರಿಹಾರ ನೀಡಿದೆ. ಸರ್ಕಾರ ಕೂಡಲೇ ಎನ್‌.ಡಿ.ಆರ್‌.ಎಫ್ ಮತ್ತು ಎಸ್‌.ಡಿ.ಆರ್‌. ಎಫ್ ನಿಯಮಗಳ ಅನ್ವಯ ಪರಿಹಾರಗಳನ್ನು
ನೀಡುವ ಮೂಲಕ ಸಂಕಷ್ಟದಲ್ಲಿ ರುವ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿದರು.

ಕ್ರಮಕ್ಕೆ ಒತ್ತಾಯ: ಗುಬ್ಬಿ ತಾಲೂಕು ಬಿಕ್ಕೆಗುಡ್ಡ, ಹಾಗಲವಾಡಿ ಏತನೀರಾವರಿ ಯೋಜನೆಗಳ ಆರಂ ಭವಾಗಿ ಐದು ವರ್ಷ ಕಳೆದಿದ್ದರೂ ಇದುವ ರೆಗೂ ಪೂರ್ಣ ಗೊಂಡಿಲ್ಲ. ಅನುದಾನದ ಕೊರತೆ ಯಿಂದ ಭೂ ಸ್ವಾಧೀನ ಪ್ರಕ್ರಿಯೆ ವಿಳಂಭವಾಗಿ ಕಾಮಗಾರಿ ಗಳು ನನೆಗುದಿಗೆ ಬಿದ್ದಿವೆ. ಸರ್ಕಾರ ಕೂಡಲೇ ಕ್ರಮ ತೆಗೆದು ಕೊಳ್ಳಬೇಕೆಂಬುದು ರೈತ ಸಂಘದ ಒತ್ತಾಯ ವಾಗಿದೆ ಎಂದರು. ಸಭೆಯಲ್ಲಿ ರೈತ ಸಂಘದ ವಿವಿಧ ತಾಲೂಕು ಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಗಳಾದ ಪೂಜಾರಪ್ಪ, ಶಬ್ಬೀರ, ಸಿದ್ದರಾಜು, ರಂಗ ಹನುಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.