ಶಿಡ್ಲಘಟ್ಟದಲ್ಲಿ ಸ್ವಸಹಾಯ ಸಂಘಗಳ ಸಮಾವೇಶ: ಮಹಿಳಾ ಸ್ವಾವಲಂಬನೆಯೇ ಗುರಿ: ಹೆಗ್ಗಡೆ
Team Udayavani, Jul 9, 2022, 12:37 AM IST
ಚಿಕ್ಕಬಳ್ಳಾಪುರ/ಶಿಡ್ಲಘಟ್ಟ: ಮಹಿಳೆ ಯರು ಮೂಢನಂಬಿಕೆ ಮತ್ತು ಅಸಹಾಯಕತೆಯಿಂದ ಹೊರ ಬರಬೇಕು. ಅವರು ಸ್ವಸಹಾ ಯದ ಮೂಲಕವೇ ಜೀವನವನ್ನು ರೂಪಿಸಿಕೊಂಡು ಶಿಸ್ತುಬದ್ದ ವ್ಯವಹಾರದಿಂದ ಸ್ವಾವಲಂಬಿಯಾಗಿ ಕುಟುಂಬವನ್ನು ನಿರ್ವಹಿಸಬೇಕು. ಆ ಮೂಲಕ ಆದರ್ಶ ಸಮಾಜ ನಿರ್ಮಾಣವಾಗಬೇಕು ಎಂಬುದೇ ನಮ್ಮ ಆಶಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹೇಳಿದರು.
ತಾಲೂಕಿನ ಬೆಳ್ಳೂಟಿ ಗೇಟ್ ಬಳಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಸ್ವಸಹಾಯ ಸಂಘಗಳ ಸಮಾವೇಶ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಸೌಲಭ್ಯ ವಿತರಣೆ ಸಮಾ ರಂಭದಲ್ಲಿ ಅವರು ಮಾತನಾಡಿದರು.
ಇನ್ನೂ ಹಲವು ಮಹಿಳೆಯರು ಮೂಢನಂಬಿಕೆ ಮತ್ತು ಅಸಹಾಯಕತೆ ಯಲ್ಲಿ ಬಳಲುತ್ತಿದ್ದು, ಅದರಿಂದ ಹೊರ ಬರಲು ನಮ್ಮ ಕಾರ್ಯಕರ್ತರು ಅವ ರಿಗೆ ಮಾರ್ಗದರ್ಶನ ಮತ್ತು ನೆರವು ಕಲ್ಪಿಸಲು ಸಿದ್ಧರಿದ್ದಾರೆ ಎಂದರು.
ಬಡತನ ನಿರ್ಮೂಲನೆಯೇ ಗುರಿ ಬಡತನವನ್ನು ನಿರ್ಮೂಲನೆ ಮಾಡುವುದೇ ನಮ್ಮ ಗುರಿ ಎಂದ ಅವರು, ಮಹಿಳೆಯರು ಮತ್ತು ಪುರುಷರು ಯೋಚನೆ ಮತ್ತು ಯೋಜನೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಪರೋಪಕಾರದಿಂದ ದೇವರ ಪ್ರೀತಿ ಗಳಿಸಬಹುದು ಎಂದರು.
ಹಿರಿಯ ಶಾಸಕ ವಿ. ಮುನಿಯಪ್ಪ, ಆರೋಗ್ಯ ಸಚಿವ ಡಾ| ಕೆ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್, ಕೋಲಾರ ಸಂಸದ ಎಸ್. ಮುನಿಸ್ವಾಮಿ, ಹೆಗ್ಗಡೆಯವರ ಪುತ್ರಿ ಶ್ರದ್ಧಾ ಅಮಿತ್, ಜಿಲ್ಲಾಧಿಕಾರಿ ಆರ್. ಲತಾ, ಎಸ್ಪಿ ಡಿ.ಎಲ್. ನಾಗೇಶ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾ ಧಿಕಾರಿ ಎಸ್.ಎಸ್. ಅನಿಲ್ಕುಮಾರ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಉಳಿತಾಯದ ಬಗ್ಗೆ ಲಘುವಾದ
ಧೋರಣೆ ಬೇಡ
ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚಿಸಿಕೊಂಡು ಕಡ್ಡಾಯವಾಗಿ ವಾರಕ್ಕೊಮ್ಮೆ ಸಭೆ ಸೇರಿ ವಿಚಾರ ವಿನಿಮಯ ಮಾಡಿಕೊಳ್ಳಬೇಕು ಹಾಗೂ ಕನಿಷ್ಠ 10 ರೂ. ಆದರೂ ಉಳಿತಾಯ ಮಾಡಬೇಕು. ರಾಜ್ಯದಲ್ಲಿ 50 ಲಕ್ಷ ಸದಸ್ಯರು ತಲಾ 10 ರೂ.ಗಳಂತೆ 2,750 ಕೋಟಿ ರೂ.ಗಳನ್ನು ಉಳಿತಾಯ ಮಾಡಿ ಸಾಧನೆ ಮಾಡಿದ್ದಾರೆ. ಹಾಗಾಗಿ 10 ರೂ.ಗಳನ್ನು ಲಘುವಾಗಿ ಪರಿಗಣಿಸಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
MUST WATCH
ಹೊಸ ಸೇರ್ಪಡೆ
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ