ಅಕೇಶಿಯಾ ನೆಡಲು ಎಂಪಿಎಂಗೆ ಭೂಮಿ ಪರಭಾರೆ ; ಆಡಳಿತ ಶಾಸಕ ಹಾಲಪ್ಪ ತೀವ್ರ ವಿರೋಧ


Team Udayavani, Jul 9, 2022, 3:44 PM IST

ಅಕೇಶಿಯಾ ನೆಡಲು ಎಂಪಿಎಂಗೆ ಭೂಮಿ ಪರಭಾರೆ ; ಆಡಳಿತ ಶಾಸಕ ಹಾಲಪ್ಪ ತೀವ್ರ ವಿರೋಧ

ಸಾಗರ: ನಾನು ಆಡಳಿತ ಪಕ್ಷದ ಶಾಸಕ ಸಾಮಾನ್ಯವಾಗಿ ಆಡಳಿತ ಪಕ್ಷದ ಶಾಸಕರು ಸರ್ಕಾರದ ನಿಲುವುಗಳನ್ನು ವಿರೋಧಿಸುವುದಿಲ್ಲ. ಆದರೆ ರಾಜ್ಯ ಸರ್ಕಾರ ಎಂಪಿಎಂಗೆ ಜಿಲ್ಲೆಯಲ್ಲಿ 41,460 ಎಕರೆ ಜಮೀನನ್ನು 40 ವರ್ಷ ಅವಧಿಗೆ ಗುತ್ತಿಗೆ ಕೊಡುತ್ತಿರುವುದನ್ನು ನಾನು ತೀವ್ರವಾಗಿ ಆಕ್ಷೇಪಿಸುತ್ತೇನೆ. ನಾನೂ ಸೇರಿದಂತೆ ಯಾವ ಜನಪ್ರತಿನಿಧಿಗಳ ಗಮನಕ್ಕೂ ತರದೆ ಈ ಪರಭಾರೆ ಪ್ರಕ್ರಿಯೆ ನಡೆಯುತ್ತಿರುವುದು ಸರಿಯಲ್ಲ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಗರ ತಾಲೂಕಿನಲ್ಲಿ 6,060 ಎಕರೆ ಮತ್ತು ಹೊಸನಗರದಲ್ಲಿ 4 ಸಾವಿರ ಎಕರೆ ಎಂಪಿಎಂಗೆ ಗುತ್ತಿಗೆ ನೀಡಲು ಮುಂದಾಗಿರುವ ಮಾಹಿತಿ ಬಂದಿದೆ. ಜಿಲ್ಲೆಯಲ್ಲಿ ಎಂಪಿಎಂ ಮುಚ್ಚಿ 10 ವರ್ಷವಾಗಿದೆ. ಸುಮಾರು 600 ಕೋಟಿ ರೂಪಾಯಿಗೂ ಹೆಚ್ಚು ಪಲ್ಫ್‌ವುಡ್ ಕಟಾವು ಮಾಡುವುದು ಬಾಕಿ ಇದೆ. ಎಂಪಿಎಂ ಕೆಲಸ ಮಾಡದೆ ಇರುವ ಈ ಸಂದರ್ಭದಲ್ಲಿ ಅದನ್ನು ಖಾಸಗಿಯವರಿಗೆ ಕೊಡುತ್ತಾರೆ ಎಂಬ ಸುದ್ದಿಯಿದೆ. ರೈತರಿಗೆ ಬಗರ್‌ಹುಕುಂನಲ್ಲಿ ಕೃಷಿ ಮಾಡಲಿಕ್ಕೂ ಭೂಮಿ ಕೊಡದಿರುವ ಕಾಲದಲ್ಲಿ ಅವರಿಗೆ ಭೂಮಿ ಮಂಜೂರಾತಿ ಮಾಡುತ್ತಿರುವುದು ಅವೈಜ್ಞಾನಿಕ ನಿರ್ಧಾರವಾಗಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದವರೇ ಎಂಪಿಎಂಗೂ ಮುಖ್ಯಸ್ಥರಾಗಿದ್ದರು. ಈ ಹಂತದಲ್ಲಿ ಅಧಿಕಾರಿ, ಮಂತ್ರಿಗಳು ಹಾಗೂ ಸರ್ಕಾರದ ಮಟ್ಟದಲ್ಲಿ ವ್ಯತ್ಯಾಸವಾಗಿ ಇಂತಹ ನಿರ್ಧಾರ ಹೊರಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಬಾರಿ ಎಂಪಿಎಂಗೆ 75 ಸಾವಿರ ಎಕರೆಯನ್ನು 25 ವರ್ಷಗಳಿಗೆ ಗುತ್ತಿಗೆ ಕೊಟ್ಟಿದ್ದರು. ಈಗಿನಂತೆ ಆಗಲೂ ಸಾಕಷ್ಟು ಷರತ್ತುಗಳನ್ನು ಹಾಕಲಾಗಿತ್ತು. ಒಂದೇ ಒಂದು ನಿಯಮವನ್ನು ಎಂಪಿಎಂ ಅನುಸರಿಸಿರಲಿಲ್ಲ. ಮತ್ತೆ ಈ ರೀತಿಯ ಏಕಜಾತಿ ನೆಡುತೋಪು ಮಾಡುವುದಕ್ಕೆ ನನ್ನ ತೀವ್ರ ವಿರೋಧ ಇದೆ. ಸೋಮವಾರ ಹಾಗೂ ಮಂಗಳವಾರ ಬೆಂಗಳೂರಿನಲ್ಲಿ ಇರಲಿದ್ದೇನೆ. ಆ ಸಂದರ್ಭದಲ್ಲಿ ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ವಿಸ್ತಾರವಾಗಿ ಮಾತನಾಡಲಿದ್ದೇನೆ ಎಂದು ಪ್ರಕಟಿಸಿದರು.

ಇದನ್ನೂ ಓದಿ : ವೇಣೂರು: ಫಲ್ಗುಣಿ ನದಿಯಲ್ಲಿ ತೇಲಿ ಬಂತು ಅಪರಿಚಿತ ಮೃತದೇಹ 

ಈ ಹಿಂದೆ ಎಂಪಿಎಂ ಗುತ್ತಿಗೆ ಪಡೆದ ಜಮೀನಿನಲ್ಲಿ ಕಂದಾಯ, ಅರಣ್ಯ ಮತ್ತು ಕೆಪಿಸಿಗೆ ಸೇರಿದ ಭೂಮಿಯಿದೆ. ಇನ್ನು ಕೆಲವು ಕಡೆಗಳಲ್ಲಿ ರೈತರಿಗೆ ಸೇರಿದ ಜಮೀನು ಸೇರಿಕೊಂಡಿದೆ. ಗುತ್ತಿಗೆ ಅವಧಿ ಮುಗಿದ ಜಮೀನನ್ನು ರೈತರಿಗೆ, ಕಂದಾಯ ಮತ್ತು ಅರಣ್ಯ ಇಲಾಖೆಗೆ ಕೊಡಬೇಕು. ಈ ಜಾಗದಲ್ಲಿ ಸ್ವಾಭಾವಿಕ ಅರಣ್ಯ ಬೆಳೆಸಲು ಮುಂದಾಗಬೇಕು. ಅದನ್ನು ಬಿಟ್ಟು ಮತ್ತೆ ಎಂಪಿಎಂಗೆ ಕೊಡಲು ಮುಂದಾಗಿರುವುದರ ಹಿಂದೆ ದ್ವಂದ್ವ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಅರಣ್ಯ ಸಚಿವರ ಜೊತೆ ಮಾತುಕತೆ ನಡೆಸಿ, ಪರಭಾರೆ ರದ್ದುಮಾಡಲು ಮನವಿ ಮಾಡಲಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮೂಲಕ ಸಾಮಾಜಿಕ ಕ್ರಾಂತಿ ಉಂಟು ಮಾಡಿದ ಡಾ. ವೀರೇಂದ್ರ ಹೆಗ್ಗಡೆಯವರು ಅನುಕರಣೀಯ ವ್ಯಕ್ತಿತ್ವ ಹೊಂದಿದವರಾಗಿದ್ದಾರೆ. ಅವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಕಳಕಳಿ ದೇಶವೆ ಮೆಚ್ಚಿದೆ. ಅವರನ್ನು ರಾಜ್ಯಸಭಾ ಸದಸ್ಯರಾಗಿ ನೇಮಕ ಮಾಡುವ ಮೂಲಕ ಇನ್ನಷ್ಟು ಸಾಮಾಜಿಕ ಚಟುವಟಿಕೆ ವಿಸ್ತಾರಗೊಂಡಂತಾಗಿದೆ.

ಡಾ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭಾ ಸದಸ್ಯರಾಗಿ ನೇಮಕ ಮಾಡಿದ್ದು ಅತ್ಯಂತ ಸಮಂಜಸ ನಿರ್ಧಾರವಾಗಿದೆ ಎಂದು ಹಾಲಪ್ಪ ಹೆಗ್ಗಡೆಯವರಿಗೆ ಅಭಿನಂದನೆ ಸೂಚಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಲೋಕನಾಥ ಬಿಳಿಸಿರಿ, ನಗರ ಅಧ್ಯಕ್ಷ ಗಣೇಶಪ್ರಸಾದ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಸದಸ್ಯೆ ಭಾವನಾ ಸಂತೋಷ್, ಹೊಸನಗರದ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ದೇವೇಂದ್ರಪ್ಪ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor 2

Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್

Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು

Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು

ಅಪಘಾತದಲ್ಲಿ ಒಂದೇ ದಿನ 51 ಸಾವು; ರಸ್ತೆ ನಿಯಮ ಪಾಲನೆಗೆ ಎಚ್‌ಡಿಕೆ ಮನವಿ

ಅಪಘಾತದಲ್ಲಿ ಒಂದೇ ದಿನ 51 ಸಾವು; ರಸ್ತೆ ನಿಯಮ ಪಾಲನೆಗೆ ಎಚ್‌ಡಿಕೆ ಮನವಿ

ಚುನಾವಣ ಆಯೋಗದ ಛಾಯಾಚಿತ್ರ ಸ್ಪರ್ಧೆ: ಅಸ್ಟ್ರೋ ಮೋಹನ್‌ಗೆ ಬಹುಮಾನ

ಚುನಾವಣ ಆಯೋಗದ ಛಾಯಾಚಿತ್ರ ಸ್ಪರ್ಧೆ: ಅಸ್ಟ್ರೋ ಮೋಹನ್‌ಗೆ ಬಹುಮಾನ

CM  Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

CM Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.