ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಕಾರು ಪಲ್ಟಿ : ಎರಡುವರೆ ತಿಂಗಳ ಮಗು ಸ್ಥಳದಲ್ಲೇ ಸಾವು
ಮಗುವಿನ ತಂದೆ ತಾಯಿಗೆ ಗಾಯ
Team Udayavani, Jul 9, 2022, 4:34 PM IST
ಕುಣಿಗಲ್ : ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾದ ಪರಿಣಾಮ ಎರಡುವರೆ ತಿಂಗಳ ಮಗು ಮೃತಪಟ್ಟು ಮಗುವಿನ ತಂದೆ, ತಾಯಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಎಂ ರಸ್ತೆ ನಾಗೇಗೌನಪಾಳ್ಯ ಗೇಟ್ ಬಳಿ ಶನಿವಾರ ಸಂಬವಿಸಿದೆ.
ಮಾಗಡಿ ತಾಲೂಕು ಕುದೂರು ಹೋಬಳಿ ನಾರಸಂದ್ರ ಗ್ರಾಮದ ಎರಡುವರೆ ತಿಂಗಳ ಸಮರ್ಥ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವಿನ ತಾಯಿ ರಮ್ಯ ಹಾಗೂ ತಂದೆ ಪರಮೇಶ್ ಗಾಯಗೊಂಡಿದ್ದಾರೆ.
ಘಟನೆ ವಿವರ : ಪರಮೇಶ್ ತನ್ನ ಹೆಂಡತಿ ರಮ್ಯ ಹಾಗೂ ಮಗು ಸಮರ್ಥನೊಂದಿಗೆ ತನ್ನ ಗ್ರಾಮದಿಂದ ಕಾರಿನಲ್ಲಿ ಕುಣಿಗಲ್ ತಾಲೂಕಿನ ಎಡಿಯೂರಿಗೆ ಹೋಗಿ ಸಿದ್ದಲಿಂಗಸ್ವಾಮಿ ಸ್ವಾಮಿಗೆ ಪೂಜೆ ಸಲ್ಲಿಸಿ ತನ್ನ ಗ್ರಾಮಕ್ಕೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ, ಗಾಯಗೊಂಡ ರಮ್ಯ ಹಾಗೂ ಪರಮೇಶ್ ಅವರಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ.
ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : 4.46 ಕೋಟಿ ರೂ.ದುರುಪಯೋಗ: ಪಿಇಎಸ್ ಕಾಲೇಜು ಸಿಬ್ಬಂದಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ