ಗುಂಡ್ಲುಪೇಟೆ: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು
Team Udayavani, Jul 9, 2022, 5:43 PM IST
ಗುಂಡ್ಲುಪೇಟೆ(ಚಾಮರಾಜನಗರ): ಜಮೀನಿನಲ್ಲಿ ಅಳವಡಿಕೆ ಮಾಡಿದ್ದ ವಿದ್ಯುತ್ ತಂತಿ ತಗುಲಿ 25 ವರ್ಷದ ಗಂಡಾನೆಯೊಂದು ಮೃತ ಪಟ್ಟಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಮೊಳೆಯೂರು ವಲಯದ ವ್ಯಾಪ್ತಿಯ ಮೊಳೆಯೂರು ಶಾಖೆಯ ಹೀರೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಡಿನಿಂದ ಆಹಾರ ಅರಸಿಬಂದ ಕಾಡಾನೆ ಹೀರೆಹಳ್ಳಿ ಗ್ರಾಮದ ಎಚ್.ವಿ.ನಾಗರಾಜಪ್ಪ, ರಾಜಪ್ಪ ಎಂಬುವವವರು ಬೆಳೆದಿದ್ದ ಮುಸುಕಿನ ಜೋಳದ ಜಮೀನಿನ ಮೇಲೆ ಹಾದು ಹೋಗುವ ಸಮಯದಲ್ಲಿ ಬೆಳೆ ರಕ್ಷಣೆಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿಗೆ ಕಾಡಾನೆಗೆ ತಗುಲಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.
ಘಟನೆ ಕುರಿತು ವಿಷಯ ತಿಳಿದ ಹಿನ್ನೆಲೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶಕುಮಾರ್, ಹೆಡಿಯಾಲ ಉಪ-ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್, ಸೆಸ್ಕ್ ಎಇಇ ಕಿರಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಮೀನು ಮಾಲೀಕರ ವಿರುದ್ಧ ಅರಣ್ಯ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಬಳಿಕ ಇಲಾಖಾ ಪಶು ವೈದ್ಯಾಧಿಕಾರಿ ಡಾ.ವಾಸಿಂ ಮಿರ್ಜಾ ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಿ, ಸ್ಥಳದಲ್ಲಿಯೇ ಮೃತ ಆನೆಯ ಕಳೆಬರವನ್ನು ಜೆ.ಸಿ.ಬಿ ಸಹಾಯದಿಂದ ಗುಂಡಿ ತೆಗೆದು ಹೂಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ