Update: ಕಾಣಿಯೂರು- ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ಪತ್ತೆ!: ಇಬ್ಬರು ನಾಪತ್ತೆ
ನಾಪತ್ತೆಯಾದವರ ಗುರುತು ಪತ್ತೆ!
Team Udayavani, Jul 10, 2022, 1:08 PM IST
ಪುತ್ತೂರು: ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, ಭಾನುವಾರ ಕಾರು ಪತ್ತೆಯಾಗಿದೆ.
ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಕುರಿತು ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದ್ದು, ಇದನ್ನು ಆಧರಿಸಿ, ಸ್ಥಳೀಯ ಪೊಲೀಸರು, ಸ್ಥಳೀಯ ಸಾರ್ವಜನಿಕರು, ಅಗ್ನಿಶಾಮಕ ದಳ ಮತ್ತು ಸವಣೂರಿನ ನಾಲ್ವರು ಡೈವರ್ಗಳಿಂದ ಶೋಧ ಕಾರ್ಯ ನಡೆಸಿ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರನ್ನು ಟ್ರೇಸ್ ಮಾಡಿ 12.30ಕ್ಕೆ ಹೊರ ತೆಗೆಯಲಾಗಿದೆ.
ಇದನ್ನೂ ಓದಿ: ಕಾಣಿಯೂರು: ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ಪತ್ತೆ!; ಕಾರ್ಯಾಚರಣೆ ವೇಳೆ ಲಾಠಿಚಾರ್ಜ್
ವಿಚಾರಣೆ ವೇಳೆ ಕಾರು ಕುಂಡಡ್ಕ ನಿವಾಸಿ ಧನುಷ್ (26) ಅವರದ್ದು ಎಂದು ತಿಳಿದುಬಂದಿದೆ. ಇನ್ನೋರ್ವ ಸಹ ಪ್ರಯಾಣಿಕ ಮಂಜೇಶ್ವರದ ನಿವಾಸಿ ಧನುಷ್ (21), ಕಾರು ಚಲಾಯಿಸುತ್ತಿದ್ದ ಧನುಷ್ ಅವರ ಸೋದರ ಮಾವ ಕಾರಿನಲ್ಲಿದ್ದರು ಎಂದು ತಿಳಿದು ಬಂದಿದೆ. ನಾಪತ್ತೆಯಾದವರನ್ನು ಪತ್ತೆಹಚ್ಚಲು ಶೋಧ ಕಾರ್ಯ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ