ಯರಡೋಣ ಕಲ್ಯಾಣಿಗೆ ಕಾಯಕಲ್ಪ ಭಾಗ್ಯ


Team Udayavani, Jul 10, 2022, 3:50 PM IST

11

ಕಾರಟಗಿ: ತಾಲೂಕಿನ ಯರಡೋಣ ಗ್ರಾಮದಲ್ಲಿ ತ್ಯಾಜ್ಯಗಳ ಸಂಗ್ರಹಣೆಯಿಂದ ಗಿಡಗಂಟಿಗಳು ಬೆಳೆದು ಹಾಳಾಗಿದ್ದ ಪುರಾತನ ಕಲ್ಯಾಣಿಗೆ ಉದ್ಯೋಗ ಖಾತ್ರಿ ಯೋಜನೆಯಿಂದ ಕಾಯಕಲ್ಪ ದೊರೆತಿದ್ದು, ಗ್ರಾಮಸ್ಥರ ಕಣ್ಮನ ಸೆಳೆಯುತ್ತಿದೆ.

ಯರಡೋಣ ಗ್ರಾಮದಲ್ಲಿರುವ ಕಲ್ಯಾಣಿಗೆ ಐತಿಹ್ಯ ಇದೆ. ಈ ಕಲ್ಯಾಣಿ ಹೊರಭಾಗ ಹಾಗೂ ಪಕ್ಕದಲ್ಲಿರುವ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ನಿಜಾಮರ ಕಾಲದ ನಾಗ ದೇವರ ಮೂರ್ತಿಗಳಿದ್ದವು. ಗ್ರಾಮದ ರೈತರು ಭತ್ತ ನಾಟಿ ಮಾಡುವಾಗ, ರಾಶಿ ಮಾಡುವಾಗ ಈ ನೀರನ್ನು ಪೂಜೆ ಹಾಗೂ ಜಮೀನಿಗೆ ಸಿಂಪಡಿಸುತ್ತಿದ್ದರು. ಇದರಿಂದ ಉತ್ತಮ ಇಳುವರಿ ಬಂದು ಲಾಭವಾಗುತ್ತಿತ್ತು. ಕಾಯಿಲೆಯಿಂದ ಬಳಲುತ್ತಿದ್ದಾಗ ಕಲ್ಯಾಣಿ ನೀರು ಕುಡಿದರೆ ಗುಣಮುಖರಾಗುತ್ತಿದ್ದರು ಎಂಬ ಐತಿಹ್ಯವಿದೆ. ಪುರಾತನ ಕಲ್ಯಾಣಿ ಕಳೆದ 20 ವರ್ಷಗಳಿಂದ ತ್ಯಾಜ್ಯ, ಹೂಳು ತುಂಬಿಕೊಂಡು ತಿಪ್ಪೆಯಂತಾಗಿತ್ತು. ಹಳೆ ಬಾವಿಗೆ ತಡೆಗೋಡೆ ಇರಲಿಲ್ಲ. ಇದರಿಂದ ಓಣಿಯ ವೃದ್ಧರು, ಮಕ್ಕಳು ಭಯದಲ್ಲೇ ಓಡಾಡಬೇಕಿತ್ತು. ಗ್ರಾಮದ ಜನರಿಗೆ ಗಂಗಾಪೂಜೆಗೆ ಸ್ಥಳವೂ ಇರಲಿಲ್ಲ. ನಮ್ಮೂರ ಕಲ್ಯಾಣಿ ಹಾಳಾಯಿತು ಎಂದು ಹಿರಿಯರು ಕೊರಗುತ್ತಿದ್ದರು. ಆದರೆ ಈಗ ಕಲ್ಯಾಣಿ ಉದ್ಯೋಗ ಖಾತ್ರಿ ಯೋಜನೆಯಡಿ ಪುನಃಶ್ಚೇತನಗೊಂಡು ಗ್ರಾಮಸ್ಥರಲ್ಲಿ ಖುಷಿ ಮೂಡಿಸಿದೆ.

ಅನುದಾನ ಬಳಕೆ: ಉದ್ಯೋಗ ಖಾತ್ರಿ ಯೋಜನೆಯಡಿ ಪುರಾತನ ಕಲ್ಯಾಣಿಗೆ 5.85 ಲಕ್ಷ ರೂ. ಬಳಕೆ ಮಾಡಲಾಗಿದೆ. ಇದರಲ್ಲಿ ಕಲ್ಯಾಣಿ ಹೂಳು ತೆಗೆದ ಕೂಲಿಕಾರ್ಮಿಕರ ಖಾತೆಗೆ 1.47 ಲಕ್ಷ ರೂ. ಜಮಾ ಮಾಡಲಾಗಿದೆ. ಉಳಿದ 3.77 ಲಕ್ಷ ರೂ. ಅನುದಾನವನ್ನು ಸಾಮಗ್ರಿ ವೆಚ್ಚಕ್ಕೆ ಭರಿಸಲಾಗಿದೆ. ಪುರಾತನ ಕಲ್ಯಾಣಿ ಅಭಿವೃದ್ಧಿಗೊಂಡಿದ್ದರಿಂದ ಗ್ರಾಮದ ಜನ ಮತ್ತೇ ಬನ್ನಿ ಮಹಾಂಕಾಳಿ ದೇವರು, ನಾಗದೇವರ ಮೂರ್ತಿಗಳಿಗೆ ಪೂಜೆ ಮಾಡುತ್ತಿದ್ದಾರೆ. ಬಸಿ ನೀರನ್ನು ಮನೆಯ ಪೂಜೆಗೆ ಕೊಂಡೊಯ್ಯುತ್ತಿದ್ದಾರೆ. ರೈತರು ತಮ್ಮ ಗದ್ದೆ ನಾಟಿ ಹಾಗೂ ಶುಭ ಕಾರ್ಯಗಳಿಗೆ ಈ ಬಾವಿ ನೀರು ಒಯ್ಯುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಮಳೆ ನೀರು ಸಂಗ್ರಹಗೊಂಡು ಅಂತರ್ಜಲ ಹೆಚ್ಚಳಕ್ಕೂ ನೆರವಾಗಲಿದೆ. ಕಲ್ಯಾಣಿ ಅಭಿವೃದ್ಧಿಗೆ ಗ್ರಾಪಂ ಸದಸ್ಯರಾದ ಶರಣಬಸವ ಕೋಲ್ಕಾರ್‌ ಅವರು ವಿಶೇಷ ಆಸಕ್ತಿ ವಹಿಸಿದ್ದರು.

ಹೂಳು ತುಂಬಿಕೊಂಡು ತಿಪ್ಪೆಯಂತಾಗಿದ್ದ ಪುರಾತನ ಕಲ್ಯಾಣಿಯನ್ನು ಗ್ರಾಪಂ ಸದಸ್ಯರು, ಗ್ರಾಮಸ್ಥರ ಸಹಕಾರದಿಂದ ಅಭಿವೃದ್ಧಿ ಪಡಿಸಲಾಗಿದೆ. ಶ್ರದ್ಧಾ, ಭಕ್ತಿ ಸ್ಥಳವಾಗಿ ಮಾರ್ಪಟ್ಟಿದೆ.  –ಮಹೇಶಗೌಡ, ಯರಡೋಣ ಗ್ರಾಪಂ ಪಿಡಿಒ

ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಐಹಿತಿಹಾಸಿಕ ಕಲ್ಯಾಣಿಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಅದರಂತೆ ಯರಡೋಣ ಗ್ರಾಮದ ಪುರಾತನ ಕಲ್ಯಾಣಿ ಅಭಿವೃದ್ಧಿ ಪಡಿಸಲಾಗಿದೆ. –ಬಿ. ಫೌಜಿಯಾ ತರನ್ನುಮ್‌, ಜಿಪಂ ಸಿಇಒ

ಯರಡೋಣ ಗ್ರಾಮದಲ್ಲಿ ಹಾಳಾಗಿದ್ದ ಕಲ್ಯಾಣಿಯನ್ನು ನರೇಗಾ ಯೋಜನೆ ಅನುದಾನ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಪಡಿಸಲಾಗಿದೆ. ಮಳೆಗಾಲದಲ್ಲಿ ಕಲ್ಯಾಣಿಯಲ್ಲಿ ನೀರು ಸಂಗ್ರಹಗೊಂಡು ಅಂತರ್ಜಲ ವೃದ್ಧಿಗೆ ಸಹಕಾರಿ ಆಗಲಿದೆ. –ಡಾ| ಡಿ. ಮೋಹನ್‌, ತಾಪಂ ಇಒ

-ದಿಗಂಬರ ಎನ್‌. ಕುರ್ಡೆಕರ

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.