ರಾಜಕೀಯ ಶಕ್ತಿಗಳಿಂದ ಎಂಡಿಎಫ್ ಹದಗೆಡಿಸುವ ಪ್ರಯತ್ನ; ಜಯಂತ್ ಆರೋಪ
Team Udayavani, Jul 11, 2022, 7:57 PM IST
ಸಾಗರ : ಕೆಲವು ರಾಜಕೀಯ ಶಕ್ತಿಗಳು ಶ್ರೀಪಾದ ಹೆಗಡೆ ನಿಸ್ರಾಣಿ ಅವರ ಬೆನ್ನಿಗೆ ನಿಂತು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಆಡಳಿತ ವ್ಯವಸ್ಥೆಯನ್ನು ಹದಗೆಡಿಸುವ ಪ್ರಯತ್ನ ನಡೆಸುತ್ತಿವೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ಆರ್.ಜಯಂತ್ ಆರೋಪಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಡಿಎಫ್ ಹಿಂದಿನ ಉಪಾಧ್ಯಕ್ಷ ಶ್ರೀಪಾದ ಹೆಗಡೆ ನಿಸ್ರಾಣಿ ಕಾಲಿಟ್ಟ ಕ್ಷೇತ್ರಗಳೆಲ್ಲಾ ಮುಚ್ಚಿ ಹೋಗಿದೆ. ಈಗ ಎಂಡಿಎಫ್ ಮುಗಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದರು.
ಎಂಡಿಎಫ್ ಅಡಿ ಅನೇಕ ವಿದ್ಯಾಸಂಸ್ಥೆಗಳು ಕೆಲಸ ಮಾಡುತ್ತಿದೆ. ಕಳೆದ ಮಾರ್ಚ್ನಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಅತ್ಯಂತ ಪ್ರಾಮಾಣಿಕರಾಗಿರುವ ಎಂ.ಹರನಾಥ್ರಾವ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಂಸ್ಥೆಯನ್ನು ಉತ್ತಮವಾಗಿ ನಡೆಸಿಕೊಂಡು ಹೋಗಲು ಆಡಳಿತ ಸಮಿತಿಯನ್ನು ಸಹ ರಚಿಸಲಾಗಿದೆ. ಆದರೆ ಹಿಂದಿನ ಉಪಾಧ್ಯಕ್ಷ ಶ್ರೀಪಾದ ಹೆಗಡೆ ಮತ್ತಿತರರು ಒಂದಷ್ಟು ದಾಖಲೆಗಳನ್ನು ಹೊಸ ಆಡಳಿತ ಸಮಿತಿಗೆ ಹಸ್ತಾಂತರ ಮಾಡದೆ ಇರುವುದರಿಂದ ಸುಲಲಿತವಾಗಿ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ. ಸೂಕ್ತ ದಾಖಲೆ ನೀಡದೆ ಜಿಲ್ಲಾ ನೋಂದಾಣಾಧಿಕಾರಿಗಳು ಪರವಾನಿಗೆಯನ್ನು ಪುನರ್ನವೀಕರಣ ಮಾಡಿಕೊಡುತ್ತಿಲ್ಲ. ಶ್ರೀಪಾದ ಹೆಗಡೆ ಅವರ ಈ ನಡೆ ಸ್ಥಳೀಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ ಎಂದು ಆಪಾದಿಸಿದರು.
ಮಲೆನಾಡಿನ ಪ್ರತಿಷ್ಟಿತ ಶೈಕ್ಷಣಿಕ ಸಂಸ್ಥೆಯಾಗಿರುವ ಎಂಡಿಎಫ್ ಹಿತದೃಷ್ಟಿಯಿಂದ ಶ್ರೀಪಾದ ಹೆಗಡೆ ಅವರನ್ನು ಬೆಂಬಲಿಸುತ್ತಿರುವ ರಾಜಕೀಯ ಶಕ್ತಿಗಳು ಹಿಂದೆ ಸರಿಯಬೇಕು. ಶ್ರೀಪಾದ ಹೆಗಡೆ ಎಷ್ಟು ಸಂಸ್ಥೆಗಳನ್ನು ಹಾಳು ಮಾಡಿದ್ದಾರೆ ಎನ್ನುವ ದಾಖಲೆಗಳು ನಮ್ಮ ಬಳಿ ಇದೆ. ಶೈಕ್ಷಣಿಕ ಸಂಸ್ಥೆ ಬೆಳವಣಿಗೆಗೆ ಅಡ್ಡಿಪಡಿಸುತ್ತಿರುವ ಶ್ರೀಪಾದ ಹೆಗಡೆ ಮತ್ತವರ ತಂಡದ ನಡೆಯನ್ನು ಖಂಡಿಸುತ್ತಿದ್ದೇನೆ. ಕಳೆದ ತಿಂಗಳು ಕಾಲೇಜಿಗೆ ಅನಾಮತ್ತಾಗಿ ಪ್ರವೇಶ ಮಾಡಿ ಪ್ರಾಚಾರ್ಯರ ಕುರ್ಚಿಯಲ್ಲಿ ಕುಳಿತು ಅಸಭ್ಯವಾಗಿ ವರ್ತಿಸಿದ್ದಾರೆ. ಶ್ರೀಪಾದ ಹೆಗಡೆ ನೇತೃತ್ವದಲ್ಲಿ ಕಟ್ಟಲಾದ ಬಿಎಡ್ ಕಾಲೇಜಿನ ನೂತನ ಕಟ್ಟಡ ಕಾಮಗಾರಿ ಸರ್ಕಾರಿ ಕಟ್ಟಡಗಳ ಕಾಮಗಾರಿಗಳಿಗಿಂತ ಕಳಪೆಯಾಗಿದೆ. ಹಿಂದಿನ ಸಮಿತಿ ಮೇಲೆ ಸಾಕಷ್ಟು ಭ್ರಷ್ಟಾಚಾರದ ಆರೋಪವಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.
ಸಂಸ್ಥೆಯ ಖಜಾಂಚಿ ಕವಲಕೋಡು ವೆಂಕಟೇಶ್ ಮಾತನಾಡಿ, ಎಂಡಿಎಫ್ಗೆ ಹರನಾಥ್ರಾವ್ ನೇತೃತ್ವದ ಹೊಸ ಸಮಿತಿ ಬಂದ ಮೇಲೆ ಒಂದಷ್ಟು ಸುಧಾರಣಾ ಕ್ರಮ ತರಲಾಗಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಶ್ರೀಪಾದ ಹೆಗಡೆ ಮತ್ತವರ ತಂಡ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ. ಈ ಕಿರುಕುಳವನ್ನು ಖಂಡಿಸಿ ಜು. 14ರಂದು ಮಧ್ಯಾಹ್ನ 12ಕ್ಕೆ ಗಾಂಧಿ ಮೈದಾನದಿಂದ ಡಿವೈಎಸ್ಪಿ ಕಚೇರಿಯವರೆಗೆ ಎಲ್ಬಿ ಕಾಲೇಜು ಬೆಳಸಿ, ಸಹಕಾರಿ ಕ್ಷೇತ್ರ ಉಳಿಸಿ ಮತ್ತು ಶ್ರೀಪಾದ ಹೆಗಡೆ ನಿಸ್ರಾಣಿ ಅವರನ್ನು ಬಂಧಿಸಿ ಎಂಬ ಘೋಷವಾಕ್ಯದಡಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಗೋಷ್ಠಿಯಲ್ಲಿ ಎಚ್.ಎಂ.ರವಿಕುಮಾರ್, ಎಸ್.ಬಿ.ಮಹಾದೇವ್, ಶರಾವತಿ ಸಿ. ರಾವ್, ನಂದ ಗೊಜನೂರು, ಅಶ್ವಿನಿ ಕುಮಾರ್, ಶೈಲೇಂದ್ರ ಬಂದಗದ್ದೆ, ಬಸವರಾಜ ಗೌಡ, ಸತ್ಯನಾರಾಯಣ ಮಂಚಾಲೆ, ವೆಂಕಟಗಿರಿ, ರಾಜೇಶ್ ಕೆ.ಕೆ., ಕಲಸೆ ಚಂದ್ರಪ್ಪ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ